ಮದ್ಯದಂಗಡಿ ಲೈಸೆನ್ಸ್ ನೀಡಲು ಲಂಚ – ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ ಡಿಸಿ ಜಗದೀಶ್ ನಾಯಕ್

ಬೆಂಗಳೂರಿನ ಬ್ಯಾಟರಾಯನಪುರದ ಅಬಕಾರಿ ಭವನದಲ್ಲಿ ಲೋಕಾಯುಕ್ತರು ದಾಳಿ ನಡಸಿದರು. ಅಬಕಾರಿ ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಲ್ಲಿ ನಡೆಸಿದ ಲೋಕಾಯುಕ್ತ ದಾಳಿಯಲ್ಲಿ ಅಬಕಾರಿ ಡಿಸಿ ಜಗದೀಶ್ ನಾಯಕ್, ಸೂಪರ್ ಡೆಂಟ್ ತಮ್ಮಣ್ಣ, ಲಕ್ಕಪ್ಪ ಬಲೆಗೆ ಬಿದ್ದಿದ್ದಾರೆ.

CL-7  ಲೈಸೆನ್ಸ್ ನೀಡಲು 25 ಲಕ್ಷ ಹಣ ಲಂಚ ಕೇಳಿದ್ದರು. ಹಣ ಪಡೆಯುವ ವೇಳೆ ಲೋಕಾಯುಕ್ತ ಬೀಸಿದ್ದ ಬಲೆಗೆ ಮೂವರು ಅಧಿಕಾರಿಗಳು ಬಿದ್ದಿದ್ದಾರೆ.

ಒಂದು ಕೋಟಿ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಅಡ್ವಾನ್ಸ್ ಹಣವಾಗಿ 25 ಲಕ್ಷ ಪಡೆಯುವ ವೇಳೆ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ.

ಲಕ್ಷ್ಮೀ ನಾರಾಯಣ ಅನ್ನೋರ ಬಳಿ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಸದ್ಯ ಅಬಕಾರಿ ಭವನದಲ್ಲಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ. ಲೋಕಾ ದಾಳಿಯಿಂದ ಎಸ್ಕೇಪ್ ಆಗಿದ್ದ ಸೂಪರಿಡೆಂಟ್ ತಮ್ಮಣ್ಣ‌ನನ್ನ ವೈಯಾಲಿಕಾವಲ್ ಬಳಿ ವಶಕ್ಕೆ ಪಡೆದು ಪೊಲೀಸರು ಕರೆತಂದಿದ್ದಾರೆ.

ಸಿಎಲ್ 7- 75 ಲಕ್ಷ, ಮೈಕ್ರೋ ಬ್ರೇವರಿ ಲೈಸೆನ್ಸ್ ಗೆ – 1.5 ಕೋಟಿ ಒಟ್ಟು 2 ಕೋಟಿ 30 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರು. ‌ಕೊನೆಗೆ 2, ಕೋಟಿ 25 ಲಕ್ಷ ಕ್ಕೆ ಎರಡು ಲೈಸೆನ್ಸ್ ಕೊಡೋಕೆ ತಿರ್ಮಾನ ಮಾಡಲಾಗಿತ್ತು. ಇಂದು 25 ಲಕ್ಷ ಹಣ ಪಡೆಯುವ ವೇಳೆ ಲೋಕಾಯುಕ್ತರು ನಡೆಸಿದ ದಾ*ಳಿ ವೇಳೆ ಸಿಕ್ಕಿಬಿದ್ದಿದ್ದಾರೆ

Ramesh Babu

Journalist

Recent Posts

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

10 minutes ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

4 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

5 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

5 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

9 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

20 hours ago