ಮದ್ಯದಂಗಡಿ ಲೈಸೆನ್ಸ್ ನೀಡಲು ಲಂಚ – ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ ಡಿಸಿ ಜಗದೀಶ್ ನಾಯಕ್

ಬೆಂಗಳೂರಿನ ಬ್ಯಾಟರಾಯನಪುರದ ಅಬಕಾರಿ ಭವನದಲ್ಲಿ ಲೋಕಾಯುಕ್ತರು ದಾಳಿ ನಡಸಿದರು. ಅಬಕಾರಿ ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಲ್ಲಿ ನಡೆಸಿದ ಲೋಕಾಯುಕ್ತ ದಾಳಿಯಲ್ಲಿ ಅಬಕಾರಿ ಡಿಸಿ ಜಗದೀಶ್ ನಾಯಕ್, ಸೂಪರ್ ಡೆಂಟ್ ತಮ್ಮಣ್ಣ, ಲಕ್ಕಪ್ಪ ಬಲೆಗೆ ಬಿದ್ದಿದ್ದಾರೆ.

CL-7  ಲೈಸೆನ್ಸ್ ನೀಡಲು 25 ಲಕ್ಷ ಹಣ ಲಂಚ ಕೇಳಿದ್ದರು. ಹಣ ಪಡೆಯುವ ವೇಳೆ ಲೋಕಾಯುಕ್ತ ಬೀಸಿದ್ದ ಬಲೆಗೆ ಮೂವರು ಅಧಿಕಾರಿಗಳು ಬಿದ್ದಿದ್ದಾರೆ.

ಒಂದು ಕೋಟಿ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಅಡ್ವಾನ್ಸ್ ಹಣವಾಗಿ 25 ಲಕ್ಷ ಪಡೆಯುವ ವೇಳೆ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ.

ಲಕ್ಷ್ಮೀ ನಾರಾಯಣ ಅನ್ನೋರ ಬಳಿ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಸದ್ಯ ಅಬಕಾರಿ ಭವನದಲ್ಲಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ. ಲೋಕಾ ದಾಳಿಯಿಂದ ಎಸ್ಕೇಪ್ ಆಗಿದ್ದ ಸೂಪರಿಡೆಂಟ್ ತಮ್ಮಣ್ಣ‌ನನ್ನ ವೈಯಾಲಿಕಾವಲ್ ಬಳಿ ವಶಕ್ಕೆ ಪಡೆದು ಪೊಲೀಸರು ಕರೆತಂದಿದ್ದಾರೆ.

ಸಿಎಲ್ 7- 75 ಲಕ್ಷ, ಮೈಕ್ರೋ ಬ್ರೇವರಿ ಲೈಸೆನ್ಸ್ ಗೆ – 1.5 ಕೋಟಿ ಒಟ್ಟು 2 ಕೋಟಿ 30 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರು. ‌ಕೊನೆಗೆ 2, ಕೋಟಿ 25 ಲಕ್ಷ ಕ್ಕೆ ಎರಡು ಲೈಸೆನ್ಸ್ ಕೊಡೋಕೆ ತಿರ್ಮಾನ ಮಾಡಲಾಗಿತ್ತು. ಇಂದು 25 ಲಕ್ಷ ಹಣ ಪಡೆಯುವ ವೇಳೆ ಲೋಕಾಯುಕ್ತರು ನಡೆಸಿದ ದಾ*ಳಿ ವೇಳೆ ಸಿಕ್ಕಿಬಿದ್ದಿದ್ದಾರೆ

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

5 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

5 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

17 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

20 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

21 hours ago