ಮದ್ಯದಂಗಡಿ ಲೈಸೆನ್ಸ್ ನೀಡಲು ಲಂಚ – ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ ಡಿಸಿ ಜಗದೀಶ್ ನಾಯಕ್

ಬೆಂಗಳೂರಿನ ಬ್ಯಾಟರಾಯನಪುರದ ಅಬಕಾರಿ ಭವನದಲ್ಲಿ ಲೋಕಾಯುಕ್ತರು ದಾಳಿ ನಡಸಿದರು. ಅಬಕಾರಿ ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಲ್ಲಿ ನಡೆಸಿದ ಲೋಕಾಯುಕ್ತ ದಾಳಿಯಲ್ಲಿ ಅಬಕಾರಿ ಡಿಸಿ ಜಗದೀಶ್ ನಾಯಕ್, ಸೂಪರ್ ಡೆಂಟ್ ತಮ್ಮಣ್ಣ, ಲಕ್ಕಪ್ಪ ಬಲೆಗೆ ಬಿದ್ದಿದ್ದಾರೆ.

CL-7  ಲೈಸೆನ್ಸ್ ನೀಡಲು 25 ಲಕ್ಷ ಹಣ ಲಂಚ ಕೇಳಿದ್ದರು. ಹಣ ಪಡೆಯುವ ವೇಳೆ ಲೋಕಾಯುಕ್ತ ಬೀಸಿದ್ದ ಬಲೆಗೆ ಮೂವರು ಅಧಿಕಾರಿಗಳು ಬಿದ್ದಿದ್ದಾರೆ.

ಒಂದು ಕೋಟಿ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಅಡ್ವಾನ್ಸ್ ಹಣವಾಗಿ 25 ಲಕ್ಷ ಪಡೆಯುವ ವೇಳೆ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ.

ಲಕ್ಷ್ಮೀ ನಾರಾಯಣ ಅನ್ನೋರ ಬಳಿ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಸದ್ಯ ಅಬಕಾರಿ ಭವನದಲ್ಲಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ. ಲೋಕಾ ದಾಳಿಯಿಂದ ಎಸ್ಕೇಪ್ ಆಗಿದ್ದ ಸೂಪರಿಡೆಂಟ್ ತಮ್ಮಣ್ಣ‌ನನ್ನ ವೈಯಾಲಿಕಾವಲ್ ಬಳಿ ವಶಕ್ಕೆ ಪಡೆದು ಪೊಲೀಸರು ಕರೆತಂದಿದ್ದಾರೆ.

ಸಿಎಲ್ 7- 75 ಲಕ್ಷ, ಮೈಕ್ರೋ ಬ್ರೇವರಿ ಲೈಸೆನ್ಸ್ ಗೆ – 1.5 ಕೋಟಿ ಒಟ್ಟು 2 ಕೋಟಿ 30 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರು. ‌ಕೊನೆಗೆ 2, ಕೋಟಿ 25 ಲಕ್ಷ ಕ್ಕೆ ಎರಡು ಲೈಸೆನ್ಸ್ ಕೊಡೋಕೆ ತಿರ್ಮಾನ ಮಾಡಲಾಗಿತ್ತು. ಇಂದು 25 ಲಕ್ಷ ಹಣ ಪಡೆಯುವ ವೇಳೆ ಲೋಕಾಯುಕ್ತರು ನಡೆಸಿದ ದಾ*ಳಿ ವೇಳೆ ಸಿಕ್ಕಿಬಿದ್ದಿದ್ದಾರೆ

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

59 minutes ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

2 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago