ಬೆಂಗಳೂರಿನ ಬ್ಯಾಟರಾಯನಪುರದ ಅಬಕಾರಿ ಭವನದಲ್ಲಿ ಲೋಕಾಯುಕ್ತರು ದಾಳಿ ನಡಸಿದರು. ಅಬಕಾರಿ ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಲ್ಲಿ ನಡೆಸಿದ ಲೋಕಾಯುಕ್ತ ದಾಳಿಯಲ್ಲಿ ಅಬಕಾರಿ ಡಿಸಿ ಜಗದೀಶ್ ನಾಯಕ್, ಸೂಪರ್ ಡೆಂಟ್ ತಮ್ಮಣ್ಣ, ಲಕ್ಕಪ್ಪ ಬಲೆಗೆ ಬಿದ್ದಿದ್ದಾರೆ.
CL-7 ಲೈಸೆನ್ಸ್ ನೀಡಲು 25 ಲಕ್ಷ ಹಣ ಲಂಚ ಕೇಳಿದ್ದರು. ಹಣ ಪಡೆಯುವ ವೇಳೆ ಲೋಕಾಯುಕ್ತ ಬೀಸಿದ್ದ ಬಲೆಗೆ ಮೂವರು ಅಧಿಕಾರಿಗಳು ಬಿದ್ದಿದ್ದಾರೆ.
ಒಂದು ಕೋಟಿ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಅಡ್ವಾನ್ಸ್ ಹಣವಾಗಿ 25 ಲಕ್ಷ ಪಡೆಯುವ ವೇಳೆ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ.
ಲಕ್ಷ್ಮೀ ನಾರಾಯಣ ಅನ್ನೋರ ಬಳಿ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಸದ್ಯ ಅಬಕಾರಿ ಭವನದಲ್ಲಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ. ಲೋಕಾ ದಾಳಿಯಿಂದ ಎಸ್ಕೇಪ್ ಆಗಿದ್ದ ಸೂಪರಿಡೆಂಟ್ ತಮ್ಮಣ್ಣನನ್ನ ವೈಯಾಲಿಕಾವಲ್ ಬಳಿ ವಶಕ್ಕೆ ಪಡೆದು ಪೊಲೀಸರು ಕರೆತಂದಿದ್ದಾರೆ.
ಸಿಎಲ್ 7- 75 ಲಕ್ಷ, ಮೈಕ್ರೋ ಬ್ರೇವರಿ ಲೈಸೆನ್ಸ್ ಗೆ – 1.5 ಕೋಟಿ ಒಟ್ಟು 2 ಕೋಟಿ 30 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರು. ಕೊನೆಗೆ 2, ಕೋಟಿ 25 ಲಕ್ಷ ಕ್ಕೆ ಎರಡು ಲೈಸೆನ್ಸ್ ಕೊಡೋಕೆ ತಿರ್ಮಾನ ಮಾಡಲಾಗಿತ್ತು. ಇಂದು 25 ಲಕ್ಷ ಹಣ ಪಡೆಯುವ ವೇಳೆ ಲೋಕಾಯುಕ್ತರು ನಡೆಸಿದ ದಾ*ಳಿ ವೇಳೆ ಸಿಕ್ಕಿಬಿದ್ದಿದ್ದಾರೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…