ಬೆಂಗಳೂರಿನ ಬ್ಯಾಟರಾಯನಪುರದ ಅಬಕಾರಿ ಭವನದಲ್ಲಿ ಲೋಕಾಯುಕ್ತರು ದಾಳಿ ನಡಸಿದರು. ಅಬಕಾರಿ ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಲ್ಲಿ ನಡೆಸಿದ ಲೋಕಾಯುಕ್ತ ದಾಳಿಯಲ್ಲಿ ಅಬಕಾರಿ ಡಿಸಿ ಜಗದೀಶ್ ನಾಯಕ್, ಸೂಪರ್ ಡೆಂಟ್ ತಮ್ಮಣ್ಣ, ಲಕ್ಕಪ್ಪ ಬಲೆಗೆ ಬಿದ್ದಿದ್ದಾರೆ.
CL-7 ಲೈಸೆನ್ಸ್ ನೀಡಲು 25 ಲಕ್ಷ ಹಣ ಲಂಚ ಕೇಳಿದ್ದರು. ಹಣ ಪಡೆಯುವ ವೇಳೆ ಲೋಕಾಯುಕ್ತ ಬೀಸಿದ್ದ ಬಲೆಗೆ ಮೂವರು ಅಧಿಕಾರಿಗಳು ಬಿದ್ದಿದ್ದಾರೆ.
ಒಂದು ಕೋಟಿ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಅಡ್ವಾನ್ಸ್ ಹಣವಾಗಿ 25 ಲಕ್ಷ ಪಡೆಯುವ ವೇಳೆ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ.
ಲಕ್ಷ್ಮೀ ನಾರಾಯಣ ಅನ್ನೋರ ಬಳಿ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಸದ್ಯ ಅಬಕಾರಿ ಭವನದಲ್ಲಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ. ಲೋಕಾ ದಾಳಿಯಿಂದ ಎಸ್ಕೇಪ್ ಆಗಿದ್ದ ಸೂಪರಿಡೆಂಟ್ ತಮ್ಮಣ್ಣನನ್ನ ವೈಯಾಲಿಕಾವಲ್ ಬಳಿ ವಶಕ್ಕೆ ಪಡೆದು ಪೊಲೀಸರು ಕರೆತಂದಿದ್ದಾರೆ.
ಸಿಎಲ್ 7- 75 ಲಕ್ಷ, ಮೈಕ್ರೋ ಬ್ರೇವರಿ ಲೈಸೆನ್ಸ್ ಗೆ – 1.5 ಕೋಟಿ ಒಟ್ಟು 2 ಕೋಟಿ 30 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ರು. ಕೊನೆಗೆ 2, ಕೋಟಿ 25 ಲಕ್ಷ ಕ್ಕೆ ಎರಡು ಲೈಸೆನ್ಸ್ ಕೊಡೋಕೆ ತಿರ್ಮಾನ ಮಾಡಲಾಗಿತ್ತು. ಇಂದು 25 ಲಕ್ಷ ಹಣ ಪಡೆಯುವ ವೇಳೆ ಲೋಕಾಯುಕ್ತರು ನಡೆಸಿದ ದಾ*ಳಿ ವೇಳೆ ಸಿಕ್ಕಿಬಿದ್ದಿದ್ದಾರೆ
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…