ಮದ್ಯಪಾನ ಮತ್ತು ತಂಬಾಕು ಸೇವನೆ ಮುಕ್ತ ಜೀವನಕ್ಕೆ ಒತ್ತು ನೀಡಿ- ಟಿಬಿ ಚಿಕಿತ್ಸಾ ಮೇಲ್ವಿಚಾರಕ ಆನಂದ್ ಸೂಚನೆ

ಇಂದು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ದೊಡ್ಡಬಳ್ಳಾಪುರದ ಪುಷ್ಪಾಂಡಜ ಗುರುಕುಲ ಆಶ್ರಮದಲ್ಲಿ ಆಯೋಜಿಸಿದ್ದ ಮಧ್ಯ ವರ್ಜನ ಶಿಬಿರದಲ್ಲಿ ಸಾರ್ವಜನಿಕ ಆಸ್ಪತ್ರೆ ದೊಡ್ಡಬಳ್ಳಾಪುರ ಕ್ಷಯ ರೋಗ ಘಟಕದ ವತಿಯಿಂದ ಶಿಬಿರಾರ್ಥಿಗಳಿಗೆ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಹಿರಿಯ ಟಿಬಿ ಚಿಕಿತ್ಸಾ ಮೇಲ್ವಿಚಾರಕರಾದ ಆನಂದ್ ಮಾತನಾಡಿ, ಮದ್ಯ ವ್ಯಸನಿಗಳಲ್ಲಿ ಟಿ ಬಿ ಕಾಯಿಲೆಯು ಹೆಚ್ಚು ಬೇಗನೆ ಬರುವ ಸಾದ್ಯತೆಯಿರುತ್ತದೆ. ಆದ್ದರಿಂದ ಮದ್ಯಪಾನ ಮತ್ತು ತಂಬಾಕು ಉತ್ಪನ್ನಗಳನ್ನು ಸೇವಿಸುವುದನ್ನು ಬಿಡಬೇಕು ಎಂದು ತಿಳಿಸಿದರು.

ಈಗಾಗಲೇ ಯಾರಿಗಾದರೂ ಟಿ ಬಿ ಲಕ್ಷಣಗಳಾದ ಸತತ ಕೆಮ್ಮು , ಉಸಿರಾಟದ ತೊಂದರೆ ಮುಂತಾದ ಲಕ್ಷಣಗಳು ಕಂಡುಬಂದರೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.

ಮೋಜು ಮಸ್ತಿ ಮುಂತಾದ ಹಲವಾರು ಕಾರಣಗಳಿಂದ ಮದ್ಯಪಾನ ಶುರುಮಾಡಿ ನಂತರ ವ್ಯಸನಿಗಳಾಗಿ ಜೀವನವನ್ನೇ ಹಾಳುಮಾಡಿಕೊಳ್ಳತ್ತಿದ್ದರೆ ಇಂತಹ ಶಿಬಿರಗಳು ಆಯೋಜಿಸುವುದರಿಂದ ವ್ಯಸನ ಮುಕ್ತರನ್ನಾಗಿ ಪರಿವರ್ತಿಸಬಹುದೆಂದು ನವೋದಯ ಟ್ರಸ್ಟಿನ ಜನಾರ್ದನ ತಿಳಿಸಿದರು.

ಈ ವೇಳೆ ಗಣೇಶ್, ಯುವರಾಜ್, ಕ್ಷಯ ರೋಗ ವಿಭಾಗದ ಸಂದರ್ಶಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

2 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

7 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

11 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

12 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

13 hours ago