ಇಂದು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ದೊಡ್ಡಬಳ್ಳಾಪುರದ ಪುಷ್ಪಾಂಡಜ ಗುರುಕುಲ ಆಶ್ರಮದಲ್ಲಿ ಆಯೋಜಿಸಿದ್ದ ಮಧ್ಯ ವರ್ಜನ ಶಿಬಿರದಲ್ಲಿ ಸಾರ್ವಜನಿಕ ಆಸ್ಪತ್ರೆ ದೊಡ್ಡಬಳ್ಳಾಪುರ ಕ್ಷಯ ರೋಗ ಘಟಕದ ವತಿಯಿಂದ ಶಿಬಿರಾರ್ಥಿಗಳಿಗೆ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಹಿರಿಯ ಟಿಬಿ ಚಿಕಿತ್ಸಾ ಮೇಲ್ವಿಚಾರಕರಾದ ಆನಂದ್ ಮಾತನಾಡಿ, ಮದ್ಯ ವ್ಯಸನಿಗಳಲ್ಲಿ ಟಿ ಬಿ ಕಾಯಿಲೆಯು ಹೆಚ್ಚು ಬೇಗನೆ ಬರುವ ಸಾದ್ಯತೆಯಿರುತ್ತದೆ. ಆದ್ದರಿಂದ ಮದ್ಯಪಾನ ಮತ್ತು ತಂಬಾಕು ಉತ್ಪನ್ನಗಳನ್ನು ಸೇವಿಸುವುದನ್ನು ಬಿಡಬೇಕು ಎಂದು ತಿಳಿಸಿದರು.
ಈಗಾಗಲೇ ಯಾರಿಗಾದರೂ ಟಿ ಬಿ ಲಕ್ಷಣಗಳಾದ ಸತತ ಕೆಮ್ಮು , ಉಸಿರಾಟದ ತೊಂದರೆ ಮುಂತಾದ ಲಕ್ಷಣಗಳು ಕಂಡುಬಂದರೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.
ಮೋಜು ಮಸ್ತಿ ಮುಂತಾದ ಹಲವಾರು ಕಾರಣಗಳಿಂದ ಮದ್ಯಪಾನ ಶುರುಮಾಡಿ ನಂತರ ವ್ಯಸನಿಗಳಾಗಿ ಜೀವನವನ್ನೇ ಹಾಳುಮಾಡಿಕೊಳ್ಳತ್ತಿದ್ದರೆ ಇಂತಹ ಶಿಬಿರಗಳು ಆಯೋಜಿಸುವುದರಿಂದ ವ್ಯಸನ ಮುಕ್ತರನ್ನಾಗಿ ಪರಿವರ್ತಿಸಬಹುದೆಂದು ನವೋದಯ ಟ್ರಸ್ಟಿನ ಜನಾರ್ದನ ತಿಳಿಸಿದರು.
ಈ ವೇಳೆ ಗಣೇಶ್, ಯುವರಾಜ್, ಕ್ಷಯ ರೋಗ ವಿಭಾಗದ ಸಂದರ್ಶಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…