ಇಂದು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ದೊಡ್ಡಬಳ್ಳಾಪುರದ ಪುಷ್ಪಾಂಡಜ ಗುರುಕುಲ ಆಶ್ರಮದಲ್ಲಿ ಆಯೋಜಿಸಿದ್ದ ಮಧ್ಯ ವರ್ಜನ ಶಿಬಿರದಲ್ಲಿ ಸಾರ್ವಜನಿಕ ಆಸ್ಪತ್ರೆ ದೊಡ್ಡಬಳ್ಳಾಪುರ ಕ್ಷಯ ರೋಗ ಘಟಕದ ವತಿಯಿಂದ ಶಿಬಿರಾರ್ಥಿಗಳಿಗೆ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಹಿರಿಯ ಟಿಬಿ ಚಿಕಿತ್ಸಾ ಮೇಲ್ವಿಚಾರಕರಾದ ಆನಂದ್ ಮಾತನಾಡಿ, ಮದ್ಯ ವ್ಯಸನಿಗಳಲ್ಲಿ ಟಿ ಬಿ ಕಾಯಿಲೆಯು ಹೆಚ್ಚು ಬೇಗನೆ ಬರುವ ಸಾದ್ಯತೆಯಿರುತ್ತದೆ. ಆದ್ದರಿಂದ ಮದ್ಯಪಾನ ಮತ್ತು ತಂಬಾಕು ಉತ್ಪನ್ನಗಳನ್ನು ಸೇವಿಸುವುದನ್ನು ಬಿಡಬೇಕು ಎಂದು ತಿಳಿಸಿದರು.
ಈಗಾಗಲೇ ಯಾರಿಗಾದರೂ ಟಿ ಬಿ ಲಕ್ಷಣಗಳಾದ ಸತತ ಕೆಮ್ಮು , ಉಸಿರಾಟದ ತೊಂದರೆ ಮುಂತಾದ ಲಕ್ಷಣಗಳು ಕಂಡುಬಂದರೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.
ಮೋಜು ಮಸ್ತಿ ಮುಂತಾದ ಹಲವಾರು ಕಾರಣಗಳಿಂದ ಮದ್ಯಪಾನ ಶುರುಮಾಡಿ ನಂತರ ವ್ಯಸನಿಗಳಾಗಿ ಜೀವನವನ್ನೇ ಹಾಳುಮಾಡಿಕೊಳ್ಳತ್ತಿದ್ದರೆ ಇಂತಹ ಶಿಬಿರಗಳು ಆಯೋಜಿಸುವುದರಿಂದ ವ್ಯಸನ ಮುಕ್ತರನ್ನಾಗಿ ಪರಿವರ್ತಿಸಬಹುದೆಂದು ನವೋದಯ ಟ್ರಸ್ಟಿನ ಜನಾರ್ದನ ತಿಳಿಸಿದರು.
ಈ ವೇಳೆ ಗಣೇಶ್, ಯುವರಾಜ್, ಕ್ಷಯ ರೋಗ ವಿಭಾಗದ ಸಂದರ್ಶಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…