ಇಂದು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ದೊಡ್ಡಬಳ್ಳಾಪುರದ ಪುಷ್ಪಾಂಡಜ ಗುರುಕುಲ ಆಶ್ರಮದಲ್ಲಿ ಆಯೋಜಿಸಿದ್ದ ಮಧ್ಯ ವರ್ಜನ ಶಿಬಿರದಲ್ಲಿ ಸಾರ್ವಜನಿಕ ಆಸ್ಪತ್ರೆ ದೊಡ್ಡಬಳ್ಳಾಪುರ ಕ್ಷಯ ರೋಗ ಘಟಕದ ವತಿಯಿಂದ ಶಿಬಿರಾರ್ಥಿಗಳಿಗೆ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಹಿರಿಯ ಟಿಬಿ ಚಿಕಿತ್ಸಾ ಮೇಲ್ವಿಚಾರಕರಾದ ಆನಂದ್ ಮಾತನಾಡಿ, ಮದ್ಯ ವ್ಯಸನಿಗಳಲ್ಲಿ ಟಿ ಬಿ ಕಾಯಿಲೆಯು ಹೆಚ್ಚು ಬೇಗನೆ ಬರುವ ಸಾದ್ಯತೆಯಿರುತ್ತದೆ. ಆದ್ದರಿಂದ ಮದ್ಯಪಾನ ಮತ್ತು ತಂಬಾಕು ಉತ್ಪನ್ನಗಳನ್ನು ಸೇವಿಸುವುದನ್ನು ಬಿಡಬೇಕು ಎಂದು ತಿಳಿಸಿದರು.
ಈಗಾಗಲೇ ಯಾರಿಗಾದರೂ ಟಿ ಬಿ ಲಕ್ಷಣಗಳಾದ ಸತತ ಕೆಮ್ಮು , ಉಸಿರಾಟದ ತೊಂದರೆ ಮುಂತಾದ ಲಕ್ಷಣಗಳು ಕಂಡುಬಂದರೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.
ಮೋಜು ಮಸ್ತಿ ಮುಂತಾದ ಹಲವಾರು ಕಾರಣಗಳಿಂದ ಮದ್ಯಪಾನ ಶುರುಮಾಡಿ ನಂತರ ವ್ಯಸನಿಗಳಾಗಿ ಜೀವನವನ್ನೇ ಹಾಳುಮಾಡಿಕೊಳ್ಳತ್ತಿದ್ದರೆ ಇಂತಹ ಶಿಬಿರಗಳು ಆಯೋಜಿಸುವುದರಿಂದ ವ್ಯಸನ ಮುಕ್ತರನ್ನಾಗಿ ಪರಿವರ್ತಿಸಬಹುದೆಂದು ನವೋದಯ ಟ್ರಸ್ಟಿನ ಜನಾರ್ದನ ತಿಳಿಸಿದರು.
ಈ ವೇಳೆ ಗಣೇಶ್, ಯುವರಾಜ್, ಕ್ಷಯ ರೋಗ ವಿಭಾಗದ ಸಂದರ್ಶಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…