ಮದ್ಯಪಾನ ಮತ್ತು ತಂಬಾಕು ಸೇವನೆ ಮುಕ್ತ ಜೀವನಕ್ಕೆ ಒತ್ತು ನೀಡಿ- ಟಿಬಿ ಚಿಕಿತ್ಸಾ ಮೇಲ್ವಿಚಾರಕ ಆನಂದ್ ಸೂಚನೆ

ಇಂದು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ದೊಡ್ಡಬಳ್ಳಾಪುರದ ಪುಷ್ಪಾಂಡಜ ಗುರುಕುಲ ಆಶ್ರಮದಲ್ಲಿ ಆಯೋಜಿಸಿದ್ದ ಮಧ್ಯ ವರ್ಜನ ಶಿಬಿರದಲ್ಲಿ ಸಾರ್ವಜನಿಕ ಆಸ್ಪತ್ರೆ ದೊಡ್ಡಬಳ್ಳಾಪುರ ಕ್ಷಯ ರೋಗ ಘಟಕದ ವತಿಯಿಂದ ಶಿಬಿರಾರ್ಥಿಗಳಿಗೆ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಹಿರಿಯ ಟಿಬಿ ಚಿಕಿತ್ಸಾ ಮೇಲ್ವಿಚಾರಕರಾದ ಆನಂದ್ ಮಾತನಾಡಿ, ಮದ್ಯ ವ್ಯಸನಿಗಳಲ್ಲಿ ಟಿ ಬಿ ಕಾಯಿಲೆಯು ಹೆಚ್ಚು ಬೇಗನೆ ಬರುವ ಸಾದ್ಯತೆಯಿರುತ್ತದೆ. ಆದ್ದರಿಂದ ಮದ್ಯಪಾನ ಮತ್ತು ತಂಬಾಕು ಉತ್ಪನ್ನಗಳನ್ನು ಸೇವಿಸುವುದನ್ನು ಬಿಡಬೇಕು ಎಂದು ತಿಳಿಸಿದರು.

ಈಗಾಗಲೇ ಯಾರಿಗಾದರೂ ಟಿ ಬಿ ಲಕ್ಷಣಗಳಾದ ಸತತ ಕೆಮ್ಮು , ಉಸಿರಾಟದ ತೊಂದರೆ ಮುಂತಾದ ಲಕ್ಷಣಗಳು ಕಂಡುಬಂದರೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.

ಮೋಜು ಮಸ್ತಿ ಮುಂತಾದ ಹಲವಾರು ಕಾರಣಗಳಿಂದ ಮದ್ಯಪಾನ ಶುರುಮಾಡಿ ನಂತರ ವ್ಯಸನಿಗಳಾಗಿ ಜೀವನವನ್ನೇ ಹಾಳುಮಾಡಿಕೊಳ್ಳತ್ತಿದ್ದರೆ ಇಂತಹ ಶಿಬಿರಗಳು ಆಯೋಜಿಸುವುದರಿಂದ ವ್ಯಸನ ಮುಕ್ತರನ್ನಾಗಿ ಪರಿವರ್ತಿಸಬಹುದೆಂದು ನವೋದಯ ಟ್ರಸ್ಟಿನ ಜನಾರ್ದನ ತಿಳಿಸಿದರು.

ಈ ವೇಳೆ ಗಣೇಶ್, ಯುವರಾಜ್, ಕ್ಷಯ ರೋಗ ವಿಭಾಗದ ಸಂದರ್ಶಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

5 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

16 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

17 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

21 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

1 day ago