ಇಂದು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ದೊಡ್ಡಬಳ್ಳಾಪುರದ ಪುಷ್ಪಾಂಡಜ ಗುರುಕುಲ ಆಶ್ರಮದಲ್ಲಿ ಆಯೋಜಿಸಿದ್ದ ಮಧ್ಯ ವರ್ಜನ ಶಿಬಿರದಲ್ಲಿ ಸಾರ್ವಜನಿಕ ಆಸ್ಪತ್ರೆ ದೊಡ್ಡಬಳ್ಳಾಪುರ ಕ್ಷಯ ರೋಗ ಘಟಕದ ವತಿಯಿಂದ ಶಿಬಿರಾರ್ಥಿಗಳಿಗೆ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಹಿರಿಯ ಟಿಬಿ ಚಿಕಿತ್ಸಾ ಮೇಲ್ವಿಚಾರಕರಾದ ಆನಂದ್ ಮಾತನಾಡಿ, ಮದ್ಯ ವ್ಯಸನಿಗಳಲ್ಲಿ ಟಿ ಬಿ ಕಾಯಿಲೆಯು ಹೆಚ್ಚು ಬೇಗನೆ ಬರುವ ಸಾದ್ಯತೆಯಿರುತ್ತದೆ. ಆದ್ದರಿಂದ ಮದ್ಯಪಾನ ಮತ್ತು ತಂಬಾಕು ಉತ್ಪನ್ನಗಳನ್ನು ಸೇವಿಸುವುದನ್ನು ಬಿಡಬೇಕು ಎಂದು ತಿಳಿಸಿದರು.
ಈಗಾಗಲೇ ಯಾರಿಗಾದರೂ ಟಿ ಬಿ ಲಕ್ಷಣಗಳಾದ ಸತತ ಕೆಮ್ಮು , ಉಸಿರಾಟದ ತೊಂದರೆ ಮುಂತಾದ ಲಕ್ಷಣಗಳು ಕಂಡುಬಂದರೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.
ಮೋಜು ಮಸ್ತಿ ಮುಂತಾದ ಹಲವಾರು ಕಾರಣಗಳಿಂದ ಮದ್ಯಪಾನ ಶುರುಮಾಡಿ ನಂತರ ವ್ಯಸನಿಗಳಾಗಿ ಜೀವನವನ್ನೇ ಹಾಳುಮಾಡಿಕೊಳ್ಳತ್ತಿದ್ದರೆ ಇಂತಹ ಶಿಬಿರಗಳು ಆಯೋಜಿಸುವುದರಿಂದ ವ್ಯಸನ ಮುಕ್ತರನ್ನಾಗಿ ಪರಿವರ್ತಿಸಬಹುದೆಂದು ನವೋದಯ ಟ್ರಸ್ಟಿನ ಜನಾರ್ದನ ತಿಳಿಸಿದರು.
ಈ ವೇಳೆ ಗಣೇಶ್, ಯುವರಾಜ್, ಕ್ಷಯ ರೋಗ ವಿಭಾಗದ ಸಂದರ್ಶಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…