21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ ಪಡೆದ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಅಧಿಸೂಚನೆಯ ಉದ್ದೇಶ ಅಪ್ರಾಪ್ತ ವಯಸ್ಸಿನವರು ಮದ್ಯಪಾನ ಮಾಡುವುದನ್ನು ತಡೆಯುವುದು, ಯುವಜನರನ್ನು ಇಂತಹ ದುಶ್ಚಟಗಳಿಂದ ರಕ್ಷಿಸುವುದು ಮತ್ತು ರಾಜ್ಯದಲ್ಲಿ ಜವಾಬ್ದಾರಿಯುತ ಮದ್ಯ ಮಾರಾಟ ಹಾಗೂ ಸೇವನೆಯ ಗುರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
ಮದ್ಯ ಮಾರಾಟ ಮಾಡುವ ಸಂಸ್ಥೆಗಳು ಪ್ರತಿಯೊಬ್ಬರ ಗುರುತಿನ ಚೀಟಿ (ID) ಪರಿಶೀಲಿಸಿ ಸಂಗ್ರಹಿಸಬೇಕೆಂಬ ನಿಯಮ ಇಲ್ಲ. ಆದರೆ 21 ವರ್ಷಕ್ಕಿಂತ ಕಡಿಮೆ ವಯಸ್ಸಿನಂತೆ ಕಾಣುವವರ ಗುರುತಿನ ಚೀಟಿ ಪರಿಶೀಲಿಸಿ, ಅವರು ವಯಸ್ಕರೊಂದಿಗೆ ಬಂದಿದ್ದರೂ ಮದ್ಯ ಸೇವನೆಗೆ ಅವಕಾಶ ನೀಡಬಾರದು ಎಂದು ಸೂಚಿಸಿದ್ದಾರೆ.
ತಮ್ಮ ಮಾರಾಟ ಮತ್ತು ಸೇವನೆಯ ಸ್ಥಳದಲ್ಲಿ ಹದಿಹರೆಯದವರು ಮದ್ಯಪಾನ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಸಂಸ್ಥೆಗಳು ಖಚಿತಪಡಿಸಿಕೊಳ್ಳಬೇಕು. ಯಾವುದೇ ನಿರ್ಲಕ್ಷ್ಯ ಕಂಡುಬಂದರೆ ಗಂಭೀರ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…