ಮದ್ಯ, ದುಡ್ಡು ಕೊಟ್ಟು ಮತದಾರರರ ಮೇಲೆ ಕಾಂಗ್ರೆಸ್, ಬಿಜೆಪಿ ಪ್ರಭಾವ: ಜೆಡಿಎಸ್ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ ರಂಗನಾಥ ಆರೋಪ

ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ತಾಲ್ಲೂಕಿನ ಮತದಾರರನ್ನು ಹಣ ಕೊಟ್ಟು ಖರೀದಿಗೆ ಮುಂದಾಗಿದೆ ಎಂದು ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ ರಂಗನಾಥ ಆರೋಪಿಸಿದರು.

ನಗರದ ಜೆಡಿಎಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ವ್ಯಾಪರಸ್ಥರು, ವ್ಯಾಪರ ಹಿನ್ನೆಲೆಯುಳ್ಳವರಾಗಿದ್ದಾರೆ.

ಬಿಜೆಪಿ ಅಭ್ಯರ್ಥಿಗೆ ರೈತರ ನಿತ್ಯ ಜೀವನದ ಅರಿವಿಲ್ಲ, ಹೊಲ, ಗದ್ದೆ, ರೈತರ ಕಷ್ಟ ಯಾವುದು ಗೊತ್ತಿಲ್ಲ. ಇನ್ನೂ ಕಾಂಗ್ರೆಸ್ ಅಭ್ಯರ್ಥಿ ವ್ಯಾಪರೀಕರಣ ರಾಜಕಾರಣ ಮಾಡುತ್ತಿದ್ದಾರೆ, ಸ್ವಂತ ಪರಿಶ್ರಮದಿಂದ ಯಾವುದೇ ಕೆಲಸಗಳನ್ನು ಇದುವರೆಗೂ ತಾಲ್ಲೂಕಿನಲ್ಲಿ ಮಾಡಿಲ್ಲ ಎಂದರು.

ಮುನೇಗೌಡ ಅವರು ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ, ಸಂಕಷ್ಟ ಸಮಯದಲ್ಲಿ ತಾಲ್ಲೂಕಿನಾದ್ಯಂತ‌ ಕುಡಿಯಲು ನೀರನ್ನು ನೀಡಿದ್ದಾರೆ, ದೇವಾಲಯಗಳ ಜೀರ್ಣೊದ್ಧಾರವನ್ನು ತಮ್ಮ ಸ್ವಂತ ಖರ್ಚಿನಿಂದ ನೆರವೇರಿಸಿದ್ದಾರೆ.

ಕುಮಾರಸ್ವಾಮಿ ಪಂಚರತ್ನ ಯೋಜನೆ ಅನುಷ್ಠಾನವಾದರೆ ರಾಜ್ಯದಲ್ಲಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಸಹಕಾರಿಯಾಗಲಿದೆ. ತಾಲ್ಲೂಕಿನಲ್ಲಿ ಈ ಬಾರಿಯ ಜನತೆ ಮುನೇಗೌಡ ಅವರನ್ನು ಗೆಲ್ಲಿಸಿ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿಯೇ ತೀರುತ್ತಾರೆ ಎಂದರು.

ಟಿಎಪಿಎಂಸಿಎಸ್ ಅಧ್ಯಕ್ಷ ಅಂಜನಗೌಡ ಮಾತನಾಡಿ ಕುಮಾರಸ್ವಾಮಿ ರೈತ, ಕಾರ್ಮಿಕರ ಪರ ಕೆಲಸ‌ ಮಾಡಲಿದ್ದಾರೆ, ಈ ಬಾರಿ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ‌ ಬರಲು ಸಕಲ ಸಿದ್ದತೆ ನಡೆಸಿದ್ದೂ ನಾಡಿನ ಜನತೆ ಆಶೀರ್ವಾದ ಮಾಡಲಿದ್ದಾರೆ.

ರಾಷ್ಟ್ರೀಯ ಪಕ್ಷಗಳಿಂದ ಹಣವಂತ, ಬಲಾಢ್ಯ ಅಭ್ಯರ್ಥಿಗಳು ಈ ಬಾರಿ ತಾಲ್ಲೂಕಿನಲ್ಲಿ ಸ್ಪರ್ಧಿಸುತ್ತಿದ್ದಾರೆ, ಜನರನ್ನು ಹಣದ ಮೂಲಕ ಕೊಂಡುಕೊಳ್ಳುವ ಎಲ್ಲಾ ಪ್ರಯತ್ನಗಳನ್ನು ಅಭ್ಯರ್ಥಿಗಳು ಮಾಡುತ್ತಿದ್ದಾರೆ.

ಚುನಾವಣಾ ಕಣದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ಅವರು ಇದ್ದೂ ತಾಲ್ಲೂಕಿನಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಹಿಂದೆ ಜನತೆಗೆ ಕಷ್ಟಕಾಲದಲ್ಲಿ ಕುಡಿಯಲು ನೀರು ಸೇರಿದಂತೆ‌ ಸಮಾಜಿಕ ಸೇವೆಯನ್ನು ಸಲ್ಲಿಸಿದ್ದೂ ಇದರ ಆಧಾರದಲ್ಲಿ ಮತಯಾಚನೆಗೆ ಮುಂದಾಗಿದ್ದಾರೆ ಎಂದರು.

ಈ ವೇಳೆ ಡಾ.ವಿಜಯ್ ಕುಮಾರ್, ನಗರಸಭಾ ಸದಸ್ಯ ವಡ್ಡರಹಳ್ಳಿ ರವಿ, ಮಾಜಿ ನಗರಸಭಾ ಸದಸ್ಯ ಕೆಂಪರಾಜ್ ಇತರರು ಇದ್ದರು.

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

9 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

12 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

13 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

24 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

2 days ago