ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ತಾಲ್ಲೂಕಿನ ಮತದಾರರನ್ನು ಹಣ ಕೊಟ್ಟು ಖರೀದಿಗೆ ಮುಂದಾಗಿದೆ ಎಂದು ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ ರಂಗನಾಥ ಆರೋಪಿಸಿದರು.
ನಗರದ ಜೆಡಿಎಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ವ್ಯಾಪರಸ್ಥರು, ವ್ಯಾಪರ ಹಿನ್ನೆಲೆಯುಳ್ಳವರಾಗಿದ್ದಾರೆ.
ಬಿಜೆಪಿ ಅಭ್ಯರ್ಥಿಗೆ ರೈತರ ನಿತ್ಯ ಜೀವನದ ಅರಿವಿಲ್ಲ, ಹೊಲ, ಗದ್ದೆ, ರೈತರ ಕಷ್ಟ ಯಾವುದು ಗೊತ್ತಿಲ್ಲ. ಇನ್ನೂ ಕಾಂಗ್ರೆಸ್ ಅಭ್ಯರ್ಥಿ ವ್ಯಾಪರೀಕರಣ ರಾಜಕಾರಣ ಮಾಡುತ್ತಿದ್ದಾರೆ, ಸ್ವಂತ ಪರಿಶ್ರಮದಿಂದ ಯಾವುದೇ ಕೆಲಸಗಳನ್ನು ಇದುವರೆಗೂ ತಾಲ್ಲೂಕಿನಲ್ಲಿ ಮಾಡಿಲ್ಲ ಎಂದರು.
ಮುನೇಗೌಡ ಅವರು ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ, ಸಂಕಷ್ಟ ಸಮಯದಲ್ಲಿ ತಾಲ್ಲೂಕಿನಾದ್ಯಂತ ಕುಡಿಯಲು ನೀರನ್ನು ನೀಡಿದ್ದಾರೆ, ದೇವಾಲಯಗಳ ಜೀರ್ಣೊದ್ಧಾರವನ್ನು ತಮ್ಮ ಸ್ವಂತ ಖರ್ಚಿನಿಂದ ನೆರವೇರಿಸಿದ್ದಾರೆ.
ಕುಮಾರಸ್ವಾಮಿ ಪಂಚರತ್ನ ಯೋಜನೆ ಅನುಷ್ಠಾನವಾದರೆ ರಾಜ್ಯದಲ್ಲಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಸಹಕಾರಿಯಾಗಲಿದೆ. ತಾಲ್ಲೂಕಿನಲ್ಲಿ ಈ ಬಾರಿಯ ಜನತೆ ಮುನೇಗೌಡ ಅವರನ್ನು ಗೆಲ್ಲಿಸಿ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿಯೇ ತೀರುತ್ತಾರೆ ಎಂದರು.
ಟಿಎಪಿಎಂಸಿಎಸ್ ಅಧ್ಯಕ್ಷ ಅಂಜನಗೌಡ ಮಾತನಾಡಿ ಕುಮಾರಸ್ವಾಮಿ ರೈತ, ಕಾರ್ಮಿಕರ ಪರ ಕೆಲಸ ಮಾಡಲಿದ್ದಾರೆ, ಈ ಬಾರಿ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರಲು ಸಕಲ ಸಿದ್ದತೆ ನಡೆಸಿದ್ದೂ ನಾಡಿನ ಜನತೆ ಆಶೀರ್ವಾದ ಮಾಡಲಿದ್ದಾರೆ.
ರಾಷ್ಟ್ರೀಯ ಪಕ್ಷಗಳಿಂದ ಹಣವಂತ, ಬಲಾಢ್ಯ ಅಭ್ಯರ್ಥಿಗಳು ಈ ಬಾರಿ ತಾಲ್ಲೂಕಿನಲ್ಲಿ ಸ್ಪರ್ಧಿಸುತ್ತಿದ್ದಾರೆ, ಜನರನ್ನು ಹಣದ ಮೂಲಕ ಕೊಂಡುಕೊಳ್ಳುವ ಎಲ್ಲಾ ಪ್ರಯತ್ನಗಳನ್ನು ಅಭ್ಯರ್ಥಿಗಳು ಮಾಡುತ್ತಿದ್ದಾರೆ.
ಚುನಾವಣಾ ಕಣದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ಅವರು ಇದ್ದೂ ತಾಲ್ಲೂಕಿನಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಹಿಂದೆ ಜನತೆಗೆ ಕಷ್ಟಕಾಲದಲ್ಲಿ ಕುಡಿಯಲು ನೀರು ಸೇರಿದಂತೆ ಸಮಾಜಿಕ ಸೇವೆಯನ್ನು ಸಲ್ಲಿಸಿದ್ದೂ ಇದರ ಆಧಾರದಲ್ಲಿ ಮತಯಾಚನೆಗೆ ಮುಂದಾಗಿದ್ದಾರೆ ಎಂದರು.
ಈ ವೇಳೆ ಡಾ.ವಿಜಯ್ ಕುಮಾರ್, ನಗರಸಭಾ ಸದಸ್ಯ ವಡ್ಡರಹಳ್ಳಿ ರವಿ, ಮಾಜಿ ನಗರಸಭಾ ಸದಸ್ಯ ಕೆಂಪರಾಜ್ ಇತರರು ಇದ್ದರು.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…