ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ತಾಲ್ಲೂಕಿನ ಮತದಾರರನ್ನು ಹಣ ಕೊಟ್ಟು ಖರೀದಿಗೆ ಮುಂದಾಗಿದೆ ಎಂದು ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ ರಂಗನಾಥ ಆರೋಪಿಸಿದರು.
ನಗರದ ಜೆಡಿಎಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ವ್ಯಾಪರಸ್ಥರು, ವ್ಯಾಪರ ಹಿನ್ನೆಲೆಯುಳ್ಳವರಾಗಿದ್ದಾರೆ.
ಬಿಜೆಪಿ ಅಭ್ಯರ್ಥಿಗೆ ರೈತರ ನಿತ್ಯ ಜೀವನದ ಅರಿವಿಲ್ಲ, ಹೊಲ, ಗದ್ದೆ, ರೈತರ ಕಷ್ಟ ಯಾವುದು ಗೊತ್ತಿಲ್ಲ. ಇನ್ನೂ ಕಾಂಗ್ರೆಸ್ ಅಭ್ಯರ್ಥಿ ವ್ಯಾಪರೀಕರಣ ರಾಜಕಾರಣ ಮಾಡುತ್ತಿದ್ದಾರೆ, ಸ್ವಂತ ಪರಿಶ್ರಮದಿಂದ ಯಾವುದೇ ಕೆಲಸಗಳನ್ನು ಇದುವರೆಗೂ ತಾಲ್ಲೂಕಿನಲ್ಲಿ ಮಾಡಿಲ್ಲ ಎಂದರು.
ಮುನೇಗೌಡ ಅವರು ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ, ಸಂಕಷ್ಟ ಸಮಯದಲ್ಲಿ ತಾಲ್ಲೂಕಿನಾದ್ಯಂತ ಕುಡಿಯಲು ನೀರನ್ನು ನೀಡಿದ್ದಾರೆ, ದೇವಾಲಯಗಳ ಜೀರ್ಣೊದ್ಧಾರವನ್ನು ತಮ್ಮ ಸ್ವಂತ ಖರ್ಚಿನಿಂದ ನೆರವೇರಿಸಿದ್ದಾರೆ.
ಕುಮಾರಸ್ವಾಮಿ ಪಂಚರತ್ನ ಯೋಜನೆ ಅನುಷ್ಠಾನವಾದರೆ ರಾಜ್ಯದಲ್ಲಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಸಹಕಾರಿಯಾಗಲಿದೆ. ತಾಲ್ಲೂಕಿನಲ್ಲಿ ಈ ಬಾರಿಯ ಜನತೆ ಮುನೇಗೌಡ ಅವರನ್ನು ಗೆಲ್ಲಿಸಿ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿಯೇ ತೀರುತ್ತಾರೆ ಎಂದರು.
ಟಿಎಪಿಎಂಸಿಎಸ್ ಅಧ್ಯಕ್ಷ ಅಂಜನಗೌಡ ಮಾತನಾಡಿ ಕುಮಾರಸ್ವಾಮಿ ರೈತ, ಕಾರ್ಮಿಕರ ಪರ ಕೆಲಸ ಮಾಡಲಿದ್ದಾರೆ, ಈ ಬಾರಿ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರಲು ಸಕಲ ಸಿದ್ದತೆ ನಡೆಸಿದ್ದೂ ನಾಡಿನ ಜನತೆ ಆಶೀರ್ವಾದ ಮಾಡಲಿದ್ದಾರೆ.
ರಾಷ್ಟ್ರೀಯ ಪಕ್ಷಗಳಿಂದ ಹಣವಂತ, ಬಲಾಢ್ಯ ಅಭ್ಯರ್ಥಿಗಳು ಈ ಬಾರಿ ತಾಲ್ಲೂಕಿನಲ್ಲಿ ಸ್ಪರ್ಧಿಸುತ್ತಿದ್ದಾರೆ, ಜನರನ್ನು ಹಣದ ಮೂಲಕ ಕೊಂಡುಕೊಳ್ಳುವ ಎಲ್ಲಾ ಪ್ರಯತ್ನಗಳನ್ನು ಅಭ್ಯರ್ಥಿಗಳು ಮಾಡುತ್ತಿದ್ದಾರೆ.
ಚುನಾವಣಾ ಕಣದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ಅವರು ಇದ್ದೂ ತಾಲ್ಲೂಕಿನಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಹಿಂದೆ ಜನತೆಗೆ ಕಷ್ಟಕಾಲದಲ್ಲಿ ಕುಡಿಯಲು ನೀರು ಸೇರಿದಂತೆ ಸಮಾಜಿಕ ಸೇವೆಯನ್ನು ಸಲ್ಲಿಸಿದ್ದೂ ಇದರ ಆಧಾರದಲ್ಲಿ ಮತಯಾಚನೆಗೆ ಮುಂದಾಗಿದ್ದಾರೆ ಎಂದರು.
ಈ ವೇಳೆ ಡಾ.ವಿಜಯ್ ಕುಮಾರ್, ನಗರಸಭಾ ಸದಸ್ಯ ವಡ್ಡರಹಳ್ಳಿ ರವಿ, ಮಾಜಿ ನಗರಸಭಾ ಸದಸ್ಯ ಕೆಂಪರಾಜ್ ಇತರರು ಇದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…