ಮಧುರೆ ಕೆರೆ ಏರಿ ತಿರುವಿನಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಸಿಮೆಂಟ್ ಬಲ್ಕರ್ ಲಾರಿ: ಡಿಕ್ಕಿ ರಭಸಕ್ಕೆ‌‌ ಲಾರಿ ಪಲ್ಟಿ

ತಾಲೂಕಿನ ಮಧುರೆ ಹೋಬಳಿಯ ಕೋಡಿಪಾಳ್ಯ‌ ಸಮೀಪದ‌ಲ್ಲಿಂದು‌ ಸಂಜೆ ಸುಮಾರು 5 ಗಂಟೆಯಲ್ಲಿ ಮಧುರೆ ಕೆರೆ ಏರಿ ತಿರುವಿನಲ್ಲಿ ಸಿಮೆಂಟ್ ಬಲ್ಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ‌ ಪಲ್ಟಿ ಹೊಡೆದಿದೆ.

ದೊಡ್ಡಬಳ್ಳಾಪುರದಿಂದ ನೆಲಮಂಗಲ ಕಡೆಗೆ ಹೋಗುವಾಗ ಘಟನೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸಿಮೆಂಟ್ ಬಲ್ಕರ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಲಾರಿ ಸಂಪೂರ್ಣ ಜಖಂಗೊಂಡಿದೆ.

ತಿರುವಿನಲ್ಲಿದ್ದ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಾನಿಯಾಗಿದೆ.

ಸ್ಥಳಕ್ಕೆ ಬೆಸ್ಕಾಂ‌ ಸಿಬ್ಬಂದಿ ದೌಡಾಯಿಸಿ ಹಾನಿಯಾಗಿರುವ ವಿದ್ಯುತ್ ಕಂಬವನ್ನು ತೆರವು‌ ಮಾಡುವ ಕಾರ್ಯ ಮಾಡುತ್ತಿದ್ದಾರೆ.

ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇಂತಹದ್ದೇ ಘಟನೆ ಇದೇ ಸ್ಥಳದಲ್ಲಿ ಅದೇ ಕಂಬಕ್ಕೆ 2024ರ ಡಿಸೆಂಬರ್ 22ರಂದು ಸಿಮೆಂಟ್ ಬಲ್ಕರ್ ಲಾರಿ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿತ್ತು.

Ramesh Babu

Journalist

Recent Posts

ರಸ್ತೆಯಲ್ಲಿ ಅಡ್ಡಾದಿಡ್ಡಿ ಲಾರಿ ಚಾಲನೆ: ವಾಹನ ಸವಾರರಿಗೆ ಕಿರಿಕಿರಿ: ಲಾರಿ ತಡೆದು ಚಾಲಕನಿಗೆ ತರಾಟಗೆ ತೆಗೆದುಕೊಂಡ ಸಾರ್ವಜನಿಕರು

ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…

6 hours ago

ಅಸಂಘಟಿತ ಕಾರ್ಮಿಕರ ಮಂಡಳಿಗೆ ಪೆಟ್ರೋಲ್, ಡೀಸೆಲ್ ಸೆಸ್ ನಲ್ಲಿ ಪಾಲು- ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…

7 hours ago

“ಬದುಕಿನ ಬೆಳದಿಂಗಳು”

ಬದುಕಿನ ಬೆಳದಿಂಗಳಲ್ಲಿ ನಮ್ಮ ಹುರುಪು, ಹುಕುಂಗಳು ಹಾಗೂ ಹಲವು ವಿಭಿನ್ನತೆಗಳ ವಿಚಾರಾರ್ಥಗಳು ನೆನೆಗುದಿಗೆ ಬಿದ್ದಿದ್ದುಂಟು. ಹಾಗೆಯೇ ಸದ್ಗುಣ-ದುರ್ಗುಣಗಳ ವ್ಯತ್ಯಾಸವನು ಅರಿತು…

8 hours ago

ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವು

ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3 ಗಂಟೆಯಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ…

9 hours ago

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ…

10 hours ago

ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತೋಟಗಾರಿಕೆ…

11 hours ago