Categories: ರಾಜ್ಯ

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ರಾಜ್‌ಗಢ ಜಿಲ್ಲೆಯ ಬಿಯೋರಾ ನಗರದಲ್ಲಿ ಬಸ್ ನಿಯಂತ್ರಣ ತಪ್ಪಿ ಸುಮಾರು 30 ಅಡಿ ಎತ್ತರದ ಸೇತುವೆಗೆ ಡಿಕ್ಕಿ ಹೊಡೆದು ಉರುಳಿದೆ. ಅಪಘಾತದಲ್ಲಿ 11ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.

ಮೃತರನ್ನು ಸೈಬರ್ ಕ್ರೈಂ ತಂಡದ ಇನ್‌ಸ್ಪೆಕ್ಟರ್ ರವಿ ಕೆ.ವಿ., ಬಸ್ ಚಾಲಕ ವಿಕಾಸ್ ಶುಕ್ಲಾ, ಬೆಲಾಲ್ ಅಲಿ ಹಾಗೂ ಜ್ಯೋತಿರಾದಿತ್ಯ ಸಿಂಗ್ ಗೌಡ್ ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಇಂದೋರ್‌ಗೆ ತೆರಳುತ್ತಿದ್ದ ಬಸ್‌ನಲ್ಲಿ ಸೈಬರ್ ಕ್ರೈಂ ತಂಡದ ಪೊಲೀಸರು ಪ್ರಯಾಣಿಸುತ್ತಿದ್ದರು. ಆರೋಪಿಯೊಬ್ಬನನ್ನು ಹುಡುಕಿಕೊಂಡು ಮಧ್ಯಪ್ರದೇಶಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ ಕೆಲವರು ಹೊರಕ್ಕೆ ಎಸೆಯಲ್ಪಟ್ಟು 30 ಅಡಿ ಕೆಳಗಿನ ಸರ್ವಿಸ್ ರಸ್ತೆಗೆ ಬಿದ್ದಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಭೋಪಾಲ್‌ಗೆ ಸ್ಥಳಾಂತರಿಸಲಾಗಿದೆ.

ಅಪಘಾತದಲ್ಲಿ ಸಬ್‌ಇನ್‌ಸ್ಪೆಕ್ಟರ್ ರಮೇಶ್ ನಾಯಕ್, ಎಎಸ್‌ಐ ಶ್ರೀನಿವಾಸ್ ಹಾಗೂ ತಾಂತ್ರಿಕ ಸಿಬ್ಬಂದಿ ವಿಶ್ವನಾಥ್ ಸೇರಿದಂತೆ ಸೈಬರ್ ಕ್ರೈಂ ತಂಡದ ಸಿಬ್ಬಂದಿಗೂ ಗಾಯಗಳಾಗಿವೆ. ಈ ಪೈಕಿ ಶ್ರೀನಿವಾಸ್ ಅವರ ಸ್ಥಿತಿ ಗಂಭೀರವಾಗಿದೆ.

Ramesh Babu

Journalist

Recent Posts

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

8 hours ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

17 hours ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

22 hours ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

1 day ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

2 days ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

3 days ago