ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ಬುಧವಾರ ಸ್ಪಷ್ಪಪಡಿಸಿದ್ದಾರೆ.

ನಗರದ ಆಹಾರ ಭವನದಲ್ಲಿ IOC, BPC, HPC, GAIL ಸಂಸ್ಥೆಗಳ ಅಧಿಕಾರಿಗಳೊಂದಿಗೆ ಸಭೆ ಬಳಿಕ ಮಾತನಾಡಿದ ಸಚಿವರು, ಅರಬ್ ರಾಷ್ಟ್ರಗಳಾದ ಯುಎಸ್ಎ, ಗಲ್ಫ್ ರಷ್ಯಾದ ದೇಶಗಳಿಂದ ನಮ್ಮ ದೇಶಕ್ಕೆ ಅನಿಲ ಉತ್ಪನ್ನಗಳನ್ನು ನಾವು ಆಮದು ಮಾಡಿಕೊಳ್ಳುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ದದ ಕಾರಣದಿಂದ ಅನಿಲದ ವೆಸೆಲ್ (ಶಿಪ್ ಗಳಿಗೆ) ಹಾನಿ ಉಂಟಾದ ಹಿನ್ನಲೆಯಲ್ಲಿ ನಮಗೆ ಅನಿಲ ಸಮಸ್ಯೆ ಉಂಟಾಗಿದ್ದು ಗ್ರಾಹಕರು ಯಾವುದೆ ಆತಂಕಕ್ಕೆ ಒಳಗಾಗಬಾರದು ಎಂದರು.

ಸಾಮಾನ್ಯವಾಗಿ ಜನರು ಉಪಯೋಗಿಸುವ ಡೊಮೆಸ್ಟಿಕ್ ಗ್ಯಾಸ್ ಮತ್ತು ಕಮರ್ಷಿಯಲ್ ಗ್ಯಾಸ್ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. ಸುಮಾರು 1000 ಮೆಟ್ರಿಕ್ ಟನ್ ಅಂದ್ರೆ ಒಂದು ದಿನಕ್ಕೆ ಸುಮಾರು 50,000 ಕಮರ್ಷಿಯಲ್ ಸಿಲಿಂಡರ್ (19 kg) ಬೇಕಾಗುತ್ತದೆ. ಡೊಮೆಸ್ಟಿಕ್ ಬಳಕೆಗೆ ಸುಮಾರು 5,000 ಮೆಟ್ರಿಕ್ ಟನ್ ಅಂದ್ರೆ ದಿನಕ್ಕೆ ಸುಮಾರು 3,50,000 ಸಿಲಿಂಡರ್ (14.2 kg) ಬೇಕಾಗುತ್ತದೆ. ಇದು ಕರ್ನಾಟಕ ರಾಜ್ಯದ ಪ್ರತಿ ದಿನದ ಅವಶ್ಯಕತೆಯಾಗಿದೆ ಎಂದು ವಿವರಿಸಿದರು.

ಭಾರತದಲ್ಲಿ ಸುಮಾರು ಶೇ.30 ರಷ್ಟು ಮಾತ್ರ ಉತ್ಪಾದನೆ ಇದೆ. ಉಳಿದ ಶೇ. 60 ರಿಂದ 70 ರಷ್ಟನ್ನು ಆಮದು ಮಾಡಿಕೊಳ್ತಾ ಇದ್ದೀವಿ — ಅಮೇರಿಕಾ, ಗಲ್ಫ್ ಅರೇಬಿಯನ್ ಮತ್ತು ರಷ್ಯಾ ದೇಶಗಳಿಂದ ಆಮದು ಬರುತ್ತದೆ. ಈಗ ಯುದ್ಧದ ಪರಿಸ್ಥಿತಿಯಿಂದ ವೆಸಲ್ಸ್ ಬರೋದು ಸ್ವಲ್ಪ ತಡವಾಗುತ್ತಿದೆ ಎಂದು ತಿಳಿಸಿದರು.

ಜನರು ಆತಂಕ ಪಡಬೇಕಾಗಿಲ್ಲ. ಕೇಂದ್ರ ಸರ್ಕಾರದ ಸೂಚನೆಯಂತೆ ಒಂದು ಕುಟುಂಬದ ಬಳಕೆಗೆ 25 ದಿನಕ್ಕೆ ಒಂದು ಸಿಲಿಂಡರ್ ನೀಡಲಾಗುತ್ತದೆ. ಹಳ್ಳಿಗಳಾಗಲಿ, ನಗರದಲ್ಲಿರಲಿ ಜನರು ಮಿತವಾಗಿ ಗ್ಯಾಸ್ ನ್ನು ಉಪಯೋಗಿಸಬೇಕು. ತೀರಾ ಅವಶ್ಯಕತೆ ಇದ್ದದ್ದನ್ನು ಮಾತ್ರ ಬಳಸಬೇಕು. ಆತಂಕಪಟ್ಟು ಗ್ರಾಹಕರು ಹೆಚ್ಚು ಹೆಚ್ಚು ಸಿಲಿಂಡರ್ ಬುಕ್ ಮಾಡಬಾರದು. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಸರ್ಕಾರ ಮತ್ತು ಆಯಿಲ್ ಕಂಪನಿಗಳ ಜೊತೆ ಸಹಕರಿಸಬೇಕೆಂದು ನಾನು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.

ಕಮರ್ಷಿಯಲ್ ಸಿಲಿಂಡರ್ ಬಳಕೆಯಲ್ಲಿ ಸ್ವಲ್ಪ ಕಷ್ಟವಾಗಬಹುದು. ಯಾಕಂದ್ರೆ ಮೊದಲು ಮನೆ ಬಳಕೆಗೆ ಆದ್ಯತೆ ನೀಡಲಾಗುತ್ತದೆ. ತದನಂತರ ಆಸ್ಪತ್ರೆ, ಶಾಲೆ, ಕಾಲೇಜುಗಳಿಗೆ ಸರಬರಾಜುನಲ್ಲಿ ವ್ಯತೆಯಾಗದಂತೆ ನೋಡಿಕೊಳ್ಳಬೇಕಾಗಿದೆ. ಹೋಟೆಲ್ ಕಲ್ಯಾಣ ಮಂಟಪಗಳಿಗೆ ಕಷ್ಟವಿದ್ದು ಆದ್ಯತೆಯ ಮೇರೆಗೆ ಸಿಲಿಂಡರ್ ಗಳನ್ನು ವಿತರಿಸಲಾಗುವುದು. ಈ ಕಠಿಣ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಲು ಸರ್ಕಾರದ ಕಾರ್ಯದರ್ಶಿ ಮಟ್ಟದಲ್ಲಿ ಪ್ರತಿವಾರ ಆಯಿಲ್ ಕಂಪನಿಗಳ ಜೊತೆ ಸಭೆ ನಡೆಯಲು ಸೂಚಿಸಿದ್ದು ಜನರು ಆತಂಕಪಡದೆ ಮಿತವಾಗಿ ಉಪಯೋಗಿಸಿದರೆ ಯಾವುದೇ ದೊಡ್ಡ ಸಮಸ್ಯೆ ಎದುರಾಗುವುದಿಲ್ಲ ಎಂದರು.

ಸಂಕಷ್ಟದ ಸಮಯದಲ್ಲಿ ಅಡಿಗೆ ಅನಿಲವನ್ನು ಮಿತವಾಗಿ ಅವಶ್ಯಕತೆ ಇದ್ದರೆ ಮಾತ್ರ ಬಳಸಬೇಕು ಎಂದು ಗ್ರಾಹಕರಲ್ಲಿ ಮನವಿ ಮಾಡಿದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

15 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago