ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ಬುಧವಾರ ಸ್ಪಷ್ಪಪಡಿಸಿದ್ದಾರೆ.

ನಗರದ ಆಹಾರ ಭವನದಲ್ಲಿ IOC, BPC, HPC, GAIL ಸಂಸ್ಥೆಗಳ ಅಧಿಕಾರಿಗಳೊಂದಿಗೆ ಸಭೆ ಬಳಿಕ ಮಾತನಾಡಿದ ಸಚಿವರು, ಅರಬ್ ರಾಷ್ಟ್ರಗಳಾದ ಯುಎಸ್ಎ, ಗಲ್ಫ್ ರಷ್ಯಾದ ದೇಶಗಳಿಂದ ನಮ್ಮ ದೇಶಕ್ಕೆ ಅನಿಲ ಉತ್ಪನ್ನಗಳನ್ನು ನಾವು ಆಮದು ಮಾಡಿಕೊಳ್ಳುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ದದ ಕಾರಣದಿಂದ ಅನಿಲದ ವೆಸೆಲ್ (ಶಿಪ್ ಗಳಿಗೆ) ಹಾನಿ ಉಂಟಾದ ಹಿನ್ನಲೆಯಲ್ಲಿ ನಮಗೆ ಅನಿಲ ಸಮಸ್ಯೆ ಉಂಟಾಗಿದ್ದು ಗ್ರಾಹಕರು ಯಾವುದೆ ಆತಂಕಕ್ಕೆ ಒಳಗಾಗಬಾರದು ಎಂದರು.

ಸಾಮಾನ್ಯವಾಗಿ ಜನರು ಉಪಯೋಗಿಸುವ ಡೊಮೆಸ್ಟಿಕ್ ಗ್ಯಾಸ್ ಮತ್ತು ಕಮರ್ಷಿಯಲ್ ಗ್ಯಾಸ್ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. ಸುಮಾರು 1000 ಮೆಟ್ರಿಕ್ ಟನ್ ಅಂದ್ರೆ ಒಂದು ದಿನಕ್ಕೆ ಸುಮಾರು 50,000 ಕಮರ್ಷಿಯಲ್ ಸಿಲಿಂಡರ್ (19 kg) ಬೇಕಾಗುತ್ತದೆ. ಡೊಮೆಸ್ಟಿಕ್ ಬಳಕೆಗೆ ಸುಮಾರು 5,000 ಮೆಟ್ರಿಕ್ ಟನ್ ಅಂದ್ರೆ ದಿನಕ್ಕೆ ಸುಮಾರು 3,50,000 ಸಿಲಿಂಡರ್ (14.2 kg) ಬೇಕಾಗುತ್ತದೆ. ಇದು ಕರ್ನಾಟಕ ರಾಜ್ಯದ ಪ್ರತಿ ದಿನದ ಅವಶ್ಯಕತೆಯಾಗಿದೆ ಎಂದು ವಿವರಿಸಿದರು.

ಭಾರತದಲ್ಲಿ ಸುಮಾರು ಶೇ.30 ರಷ್ಟು ಮಾತ್ರ ಉತ್ಪಾದನೆ ಇದೆ. ಉಳಿದ ಶೇ. 60 ರಿಂದ 70 ರಷ್ಟನ್ನು ಆಮದು ಮಾಡಿಕೊಳ್ತಾ ಇದ್ದೀವಿ — ಅಮೇರಿಕಾ, ಗಲ್ಫ್ ಅರೇಬಿಯನ್ ಮತ್ತು ರಷ್ಯಾ ದೇಶಗಳಿಂದ ಆಮದು ಬರುತ್ತದೆ. ಈಗ ಯುದ್ಧದ ಪರಿಸ್ಥಿತಿಯಿಂದ ವೆಸಲ್ಸ್ ಬರೋದು ಸ್ವಲ್ಪ ತಡವಾಗುತ್ತಿದೆ ಎಂದು ತಿಳಿಸಿದರು.

ಜನರು ಆತಂಕ ಪಡಬೇಕಾಗಿಲ್ಲ. ಕೇಂದ್ರ ಸರ್ಕಾರದ ಸೂಚನೆಯಂತೆ ಒಂದು ಕುಟುಂಬದ ಬಳಕೆಗೆ 25 ದಿನಕ್ಕೆ ಒಂದು ಸಿಲಿಂಡರ್ ನೀಡಲಾಗುತ್ತದೆ. ಹಳ್ಳಿಗಳಾಗಲಿ, ನಗರದಲ್ಲಿರಲಿ ಜನರು ಮಿತವಾಗಿ ಗ್ಯಾಸ್ ನ್ನು ಉಪಯೋಗಿಸಬೇಕು. ತೀರಾ ಅವಶ್ಯಕತೆ ಇದ್ದದ್ದನ್ನು ಮಾತ್ರ ಬಳಸಬೇಕು. ಆತಂಕಪಟ್ಟು ಗ್ರಾಹಕರು ಹೆಚ್ಚು ಹೆಚ್ಚು ಸಿಲಿಂಡರ್ ಬುಕ್ ಮಾಡಬಾರದು. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಸರ್ಕಾರ ಮತ್ತು ಆಯಿಲ್ ಕಂಪನಿಗಳ ಜೊತೆ ಸಹಕರಿಸಬೇಕೆಂದು ನಾನು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.

ಕಮರ್ಷಿಯಲ್ ಸಿಲಿಂಡರ್ ಬಳಕೆಯಲ್ಲಿ ಸ್ವಲ್ಪ ಕಷ್ಟವಾಗಬಹುದು. ಯಾಕಂದ್ರೆ ಮೊದಲು ಮನೆ ಬಳಕೆಗೆ ಆದ್ಯತೆ ನೀಡಲಾಗುತ್ತದೆ. ತದನಂತರ ಆಸ್ಪತ್ರೆ, ಶಾಲೆ, ಕಾಲೇಜುಗಳಿಗೆ ಸರಬರಾಜುನಲ್ಲಿ ವ್ಯತೆಯಾಗದಂತೆ ನೋಡಿಕೊಳ್ಳಬೇಕಾಗಿದೆ. ಹೋಟೆಲ್ ಕಲ್ಯಾಣ ಮಂಟಪಗಳಿಗೆ ಕಷ್ಟವಿದ್ದು ಆದ್ಯತೆಯ ಮೇರೆಗೆ ಸಿಲಿಂಡರ್ ಗಳನ್ನು ವಿತರಿಸಲಾಗುವುದು. ಈ ಕಠಿಣ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಲು ಸರ್ಕಾರದ ಕಾರ್ಯದರ್ಶಿ ಮಟ್ಟದಲ್ಲಿ ಪ್ರತಿವಾರ ಆಯಿಲ್ ಕಂಪನಿಗಳ ಜೊತೆ ಸಭೆ ನಡೆಯಲು ಸೂಚಿಸಿದ್ದು ಜನರು ಆತಂಕಪಡದೆ ಮಿತವಾಗಿ ಉಪಯೋಗಿಸಿದರೆ ಯಾವುದೇ ದೊಡ್ಡ ಸಮಸ್ಯೆ ಎದುರಾಗುವುದಿಲ್ಲ ಎಂದರು.

ಸಂಕಷ್ಟದ ಸಮಯದಲ್ಲಿ ಅಡಿಗೆ ಅನಿಲವನ್ನು ಮಿತವಾಗಿ ಅವಶ್ಯಕತೆ ಇದ್ದರೆ ಮಾತ್ರ ಬಳಸಬೇಕು ಎಂದು ಗ್ರಾಹಕರಲ್ಲಿ ಮನವಿ ಮಾಡಿದರು.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

16 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

19 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

2 days ago