Categories: ಕೋಲಾರ

ಮಧ್ಯವರ್ತಿಗಳನ್ನು ದೂರವಿಟ್ಟು ನೇರವಾಗಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಿರಿ-ಮೋಹನ್ ರಾವ್

ಕೋಲಾರ: ಮಹಿಳೆಯರು ಸ್ವಾವಲಂಬನೆಯ ಬದುಕನ್ನು ರೂಪಿಸಿಕೊಳ್ಳುವುದರ ಮೂಲಕ ಆರ್ಥಿಕವಾಗಿ ಸಬಲರಾಗಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನಾನಾ ಯೋಜನೆಗಳನ್ನು ಜಾರಿ ಮಾಡಿದ್ದು ಯಾವುದೇ ಮಧ್ಯವರ್ತಿಗಳಿಗೆ ಹಣ ನೀಡದೆ ನೇರವಾಗಿ ಅರ್ಜಿ ಸಲ್ಲಿಸಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ನಿರ್ದೇಶಕ ಡಾ.ಎ.ಮೋಹನ್ ರಾವ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಎಸ್ಸಿ, ಎಸ್ಟಿ, ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಮಂಡಳಿ ಮತ್ತು ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ನಿರುದ್ಯೋಗ ಮಹಿಳೆಯರಿಗೆ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರಕಾರಗಳು ಯಾವುದೇ ಜಾತಿ ಧರ್ಮ ನೋಡದೇ ಎಲ್ಲರಿಗೂ ಉಚಿತವಾಗಿ ಸೌಲಭ್ಯಗಳನ್ನು ನೀಡಲು ಮುಂದಾಗಿದೆ ಕೆಲವರು ಕಮಿಷನ್ ಆಸೆಗಾಗಿ ಮಧ್ಯವರ್ತಿಗಳ ಮೂಲಕ ಅರ್ಜಿಗಳನ್ನು ಹಾಕಲು ಹೊರಟಿದ್ದಾರೆ ಅಂತಹವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮಹಿಳೆಯರಿಗೆ ಕಿವಿಮಾತು ಹೇಳಿದರು.

ಸರಕಾರಗಳಿಂದ ನಿರುದ್ಯೋಗ ಜನರಿಗೆ ಅನೇಕ ಕಾರ್ಯಕ್ರಮಗಳಿವೆ ಆರ್ಥಿಕವಾಗಿ ಮುಂದೆ ಬರಲು ಅವಕಾಶಗಳು ಇವೆ ಆದರೆ ಮಾಹಿತಿ ಹಾಗೂ ಅರಿವಿನ ಕೊರತೆಯಿಂದ ಯೋಜನೆಗಳಿಂದ ವಂಚಿತರಾಗಿದ್ದಾರೆ ಅವರಿಗೆ ಅರಿವು ಮೂಡಿಸುವ ಕೆಲಸವನ್ನು ಇಲಾಖೆ ಮತ್ತು ಮಂಡಳಿಯ ವತಿಯಿಂದ ನಡೆಯುತ್ತಿದೆ ಮಹಿಳೆಯರಿಗೆ ಕೌಶಲ್ಯ ತರಬೇತಿ ಕೊಡಲು ಸಿದ್ದವಿದ್ದು ಸ್ವಯಂ ಉದ್ಯೋಗದಿಂದ ಎಲ್ಲರೂ ಬದುಕುವ ವಾತಾವರಣವನ್ನು ಸೃಷ್ಟಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಕಲ್ಲಂಡೂರು ಪಾಟರಿ ಕ್ಲಸ್ಟರ್ ಅಧ್ಯಕ್ಷ ಡಾ.ಕೆ ನಾಗರಾಜ್ ಮಾತನಾಡಿ ರಾಜ್ಯ ಮತ್ತು ಕೇಂದ್ರ ಸರಕಾರಗಳು ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಸ್ವಯಂ ಉದ್ಯೋಗ ಪ್ರಾರಂಭಿಸಲು ಸಬ್ಸಿಡಿ ಮೂಲಕವೇ ಸೌಲಭ್ಯಗಳನ್ನು ಒದಗಿಸುತ್ತಿದ್ದು ಅದರ ಸದುಪಯೋಗವನ್ನು ಪಡೆಯುವುದರ ಜೊತೆಗೆ ತಾವುಗಳು ಆರ್ಥಿಕವಾಗಿ ಸಬಲರಾಗಬೇಕು ನಿಮ್ಮ ಉದ್ಯೋಗದೊಂದಿಗೆ ಬೇರೆಯವರಿಗೆ ಸಹ ಉದ್ಯೋಗದ ಅವಕಾಶಗಳನ್ನು ಕೊಡಬೇಕು ಮಹಿಳೆಯರಿಗೆ ವಿಶೇಷವಾದ ಯೋಜನೆಗಳನ್ನು ರೂಪಿಸಿದ್ದು ಅವುಗಳ ಬಗ್ಗೆ ಅರಿವು ಪಡೆಯಬೇಕು ಎಂದರು.

ಈ ಸಂದರ್ಭದಲ್ಲಿ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ಸುಬ್ಬಾ ನಾಯಕ್ ಮಾತನಾಡಿ ಮಹಿಳೆಯರು ಆರ್ಥಿಕವಾಗಿ ಮುಂದೆ ತರುವ ಉದ್ದೇಶದಿಂದ ಸರಕಾರಗಳು ಮುಂದೆ ಬಂದಿವೆ ಬ್ಯಾಂಕ್ ಗಳಿಂದ ಸೌಲಭ್ಯಗಳ ಪಡೆಯುವ ಸಂದರ್ಭದಲ್ಲಿ ನಿರ್ಲಕ್ಷ್ಯ ಮಾಡಿದರೆ ಲೀಡ್ ಬ್ಯಾಂಕ್ ಗಮನಕ್ಕೆ ತನ್ನಿ ಮಹಿಳೆಯರ ಸಬಲೀಕರಣದ ಉದ್ದೇಶವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ರೇಷ್ಮೆ ಇಲಾಖೆಯ ಉಪ ನಿರ್ದೇಶಕ ನಾಗರಾಜ್, ಗ್ರಾಮೋದ್ಯೋಗ ಮಂಡಳಿಯ ಹನುಮಾನ್ ಮೀನಾ, ಶಶಿಕಾಂತ್, ಜಿಲ್ಲಾ ಕೈಗಾರಿಕಾ ಕೇಂದ್ರದ ನಂದಿನಿ, ಎಸ್ಸಿ ಎಸ್ಟಿ ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಮಂಡಳಿಯ ಅಧ್ಯಕ್ಷೆ ನೇತ್ರಾವತಿ, ಜಿಲ್ಲಾ ಅಧ್ಯಕ್ಷ ಶಿವಕುಮಾರ್, ರಾಮಾಂಜಿನಪ್ಪ, ರುಕ್ಮಿಣಿ, ಮುಂತಾದವರು ಇದ್ದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

3 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

10 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

23 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago