Categories: ಕೋಲಾರ

ಮಧ್ಯವರ್ತಿಗಳನ್ನು ದೂರವಿಟ್ಟು ನೇರವಾಗಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಿರಿ-ಮೋಹನ್ ರಾವ್

ಕೋಲಾರ: ಮಹಿಳೆಯರು ಸ್ವಾವಲಂಬನೆಯ ಬದುಕನ್ನು ರೂಪಿಸಿಕೊಳ್ಳುವುದರ ಮೂಲಕ ಆರ್ಥಿಕವಾಗಿ ಸಬಲರಾಗಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನಾನಾ ಯೋಜನೆಗಳನ್ನು ಜಾರಿ ಮಾಡಿದ್ದು ಯಾವುದೇ ಮಧ್ಯವರ್ತಿಗಳಿಗೆ ಹಣ ನೀಡದೆ ನೇರವಾಗಿ ಅರ್ಜಿ ಸಲ್ಲಿಸಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ನಿರ್ದೇಶಕ ಡಾ.ಎ.ಮೋಹನ್ ರಾವ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಎಸ್ಸಿ, ಎಸ್ಟಿ, ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಮಂಡಳಿ ಮತ್ತು ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ನಿರುದ್ಯೋಗ ಮಹಿಳೆಯರಿಗೆ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರಕಾರಗಳು ಯಾವುದೇ ಜಾತಿ ಧರ್ಮ ನೋಡದೇ ಎಲ್ಲರಿಗೂ ಉಚಿತವಾಗಿ ಸೌಲಭ್ಯಗಳನ್ನು ನೀಡಲು ಮುಂದಾಗಿದೆ ಕೆಲವರು ಕಮಿಷನ್ ಆಸೆಗಾಗಿ ಮಧ್ಯವರ್ತಿಗಳ ಮೂಲಕ ಅರ್ಜಿಗಳನ್ನು ಹಾಕಲು ಹೊರಟಿದ್ದಾರೆ ಅಂತಹವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮಹಿಳೆಯರಿಗೆ ಕಿವಿಮಾತು ಹೇಳಿದರು.

ಸರಕಾರಗಳಿಂದ ನಿರುದ್ಯೋಗ ಜನರಿಗೆ ಅನೇಕ ಕಾರ್ಯಕ್ರಮಗಳಿವೆ ಆರ್ಥಿಕವಾಗಿ ಮುಂದೆ ಬರಲು ಅವಕಾಶಗಳು ಇವೆ ಆದರೆ ಮಾಹಿತಿ ಹಾಗೂ ಅರಿವಿನ ಕೊರತೆಯಿಂದ ಯೋಜನೆಗಳಿಂದ ವಂಚಿತರಾಗಿದ್ದಾರೆ ಅವರಿಗೆ ಅರಿವು ಮೂಡಿಸುವ ಕೆಲಸವನ್ನು ಇಲಾಖೆ ಮತ್ತು ಮಂಡಳಿಯ ವತಿಯಿಂದ ನಡೆಯುತ್ತಿದೆ ಮಹಿಳೆಯರಿಗೆ ಕೌಶಲ್ಯ ತರಬೇತಿ ಕೊಡಲು ಸಿದ್ದವಿದ್ದು ಸ್ವಯಂ ಉದ್ಯೋಗದಿಂದ ಎಲ್ಲರೂ ಬದುಕುವ ವಾತಾವರಣವನ್ನು ಸೃಷ್ಟಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಕಲ್ಲಂಡೂರು ಪಾಟರಿ ಕ್ಲಸ್ಟರ್ ಅಧ್ಯಕ್ಷ ಡಾ.ಕೆ ನಾಗರಾಜ್ ಮಾತನಾಡಿ ರಾಜ್ಯ ಮತ್ತು ಕೇಂದ್ರ ಸರಕಾರಗಳು ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಸ್ವಯಂ ಉದ್ಯೋಗ ಪ್ರಾರಂಭಿಸಲು ಸಬ್ಸಿಡಿ ಮೂಲಕವೇ ಸೌಲಭ್ಯಗಳನ್ನು ಒದಗಿಸುತ್ತಿದ್ದು ಅದರ ಸದುಪಯೋಗವನ್ನು ಪಡೆಯುವುದರ ಜೊತೆಗೆ ತಾವುಗಳು ಆರ್ಥಿಕವಾಗಿ ಸಬಲರಾಗಬೇಕು ನಿಮ್ಮ ಉದ್ಯೋಗದೊಂದಿಗೆ ಬೇರೆಯವರಿಗೆ ಸಹ ಉದ್ಯೋಗದ ಅವಕಾಶಗಳನ್ನು ಕೊಡಬೇಕು ಮಹಿಳೆಯರಿಗೆ ವಿಶೇಷವಾದ ಯೋಜನೆಗಳನ್ನು ರೂಪಿಸಿದ್ದು ಅವುಗಳ ಬಗ್ಗೆ ಅರಿವು ಪಡೆಯಬೇಕು ಎಂದರು.

ಈ ಸಂದರ್ಭದಲ್ಲಿ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ಸುಬ್ಬಾ ನಾಯಕ್ ಮಾತನಾಡಿ ಮಹಿಳೆಯರು ಆರ್ಥಿಕವಾಗಿ ಮುಂದೆ ತರುವ ಉದ್ದೇಶದಿಂದ ಸರಕಾರಗಳು ಮುಂದೆ ಬಂದಿವೆ ಬ್ಯಾಂಕ್ ಗಳಿಂದ ಸೌಲಭ್ಯಗಳ ಪಡೆಯುವ ಸಂದರ್ಭದಲ್ಲಿ ನಿರ್ಲಕ್ಷ್ಯ ಮಾಡಿದರೆ ಲೀಡ್ ಬ್ಯಾಂಕ್ ಗಮನಕ್ಕೆ ತನ್ನಿ ಮಹಿಳೆಯರ ಸಬಲೀಕರಣದ ಉದ್ದೇಶವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ರೇಷ್ಮೆ ಇಲಾಖೆಯ ಉಪ ನಿರ್ದೇಶಕ ನಾಗರಾಜ್, ಗ್ರಾಮೋದ್ಯೋಗ ಮಂಡಳಿಯ ಹನುಮಾನ್ ಮೀನಾ, ಶಶಿಕಾಂತ್, ಜಿಲ್ಲಾ ಕೈಗಾರಿಕಾ ಕೇಂದ್ರದ ನಂದಿನಿ, ಎಸ್ಸಿ ಎಸ್ಟಿ ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಮಂಡಳಿಯ ಅಧ್ಯಕ್ಷೆ ನೇತ್ರಾವತಿ, ಜಿಲ್ಲಾ ಅಧ್ಯಕ್ಷ ಶಿವಕುಮಾರ್, ರಾಮಾಂಜಿನಪ್ಪ, ರುಕ್ಮಿಣಿ, ಮುಂತಾದವರು ಇದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

14 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

24 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago