ತುಮಕೂರಿನಲ್ಲಿ ಘನಘೋರ ಕೃತ್ಯವೊಂದು ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ತನ್ನ 4 ವರ್ಷ ಮತ್ತು 2 ವರ್ಷದ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ತಾಯಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಪತಿಯ ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಪತ್ನಿ ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅನುಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪನಕೆರೆಯಲ್ಲಿ ಈ ದುರಂತ ಘಟನೆ ನಡೆದಿದ್ದು, ಇಬ್ಬರು ಮುದ್ದು ಮಕ್ಕಳನ್ನು ಕೊಂದ ತಾಯಿ ತಾನೂ ನೇಣಿಗೆ ಶರಣಾಗಿದ್ದಾರೆ.
23 ವರ್ಷದ ಸರಿತಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಆತ್ಮಹತ್ಯೆಗೂ (Suicide) ಮುನ್ನ 4 ವರ್ಷದ ಮಗ ಕೌಶಿಕ್ ಹಾಗೂ 2 ವರ್ಷದ ಮಗು ಯುಕ್ತಿಯನ್ನು ಕೊಲೆ ಮಾಡಿದ್ದಾರೆ. ಬಳಿಕ ತಾನೂ ನೇಣಿಗೆ ಶರಣಾಗಿದ್ದಾರೆ..
ಈ ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸರಿತಾ ತನ್ನ ಇಬ್ಬರು ಮಕ್ಕಳ ಹತ್ಯೆಗೈದಿದ್ದು, ಬಳಿಕ ತಾನು ನೇಣಿಗೆ ಶರಣಾಗಿದ್ದಾರೆ.
ಮೂಲತಃ ಕಡಪನಕೆರೆಯ ಸರಿತಾ ತನ್ನದೇ ಊರಿನ ಸಂತೋಷ್ ಜೊತೆ ವಿವಾಹವಾಗಿದ್ದರು. ಕಳೆದ 6 ವರ್ಷಗಳ ಹಿಂದೆ ಸಂತೋಷ್ ಜೊತೆ ವಿವಾಹವಾಗಿತ್ತು. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಸಂತೋಷ್ ಈ ಘಟನೆ ನಡೆದ ವೇಳೆ ಮನೆಯಲ್ಲಿರಲಿಲ್ಲ ಎಂದು ತಿಳಿದುಬಂದಿದೆ.
ಮದುವೆಯಾದಾಗಿನಿಂದ ಪತಿ ಹಾಗೂ ಆತನ ಕುಟುಂಬದಿಂದ ಸರಿತಾ ಅವರಿಗೆ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ವರದಕ್ಷಿಣೆ ಕಿರುಕುಳ ನೀಡಿದ್ದ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ತಾಯಿ ಸರಿತಾ ನೊಂದು ಮಕ್ಕಳ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…