ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕಿನ ಹಿಂದಿನ ಹಿರಿಯ ವ್ಯವಸ್ಥಾಪಕ, ರೈಲ್ವೆ ಇಲಾಖೆ ಮೂವರು ನೌಕರರು, ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಹಾಗೂ ವಿವಿಧ ಖಾಸಗಿ ಕಂಪನಿಗಳ ನೌಕರರು, ಲಾರಿ ಚಾಲಕ, ವಾಚ್ಮನ್, ಎಲೆಕ್ನಿಷಿಯನ್ ಸೇರಿದಂತೆ 15 ಆರೋಪಿಗಳನ್ನು ವಿಜಯಪುರ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.
ಬಂಧಿತ ಆರೋಪಿಗಳಿಂದ ಒಟ್ಟು 39 ಕೆ.ಜಿ.ಚಿನ್ನ, ₹1.16 ಕೋಟಿ ನಗದು ಹಾಗೂ ಕಳ್ಳತನಕ್ಕೆ ಬಳಸಿದ್ದ ರೈಲ್ವೆ ಇಲಾಖೆಗೆ ಸೇರಿದ ಗೂಡ್ಸ್ ಲಾರಿ, 4 ವಾಕಿಟಾಕಿ, ಒಂದು ಪಿಸ್ತೂಲ್ನಂತಿರುವ ಸಿಗರೇಟ್ ಲೈಟರ್, 2 ಗ್ಯಾಸ್ ಸಿಲಿಂಡರ್, ಒಂದು ಆಕ್ಸಿಜನ್ ಸಿಲಿಂಡರ್, ಬರ್ನಿಂಗ್ ಗನ್, ನಕಲಿ ಕೀಲಿಕೈಗಳು, ವಿವಿಧ ಕಂಪನಿಗಳ ಐದು ಕಾರುಗಳನ್ನು ವಶಕ್ಕೆ ಪಡೆದಿರುವುದಾಗಿ ಬೆಳಗಾವಿ ಉತ್ತರ ವಲಯ ಐಜಿಪಿ ಚೇತನ್ ಕುಮಾರ್ ರಾಠೋಡ್ ಮತ್ತು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮನಗೂಳಿ ಕೆನರಾ ಬ್ಯಾಂಕಿನ ಹಿಂದಿನ ಹಿರಿಯ ವ್ಯವಸ್ಥಾಪಕ ವಿಜಯಕುಮಾರ್ ಮಿರಿಯಾಲ (41), ಖಾಸಗಿ ಉದ್ಯೋಗಿ ಚಂದ್ರಶೇಖರ ನೆರೆಲ್ಲಾ (38), ಸುನೀಲ ಮೋಕಾ (40) ಎಂಬುವವರನ್ನು ಈಗಾಗಲೇ ಬಂಧಿಸಿ ಅವರಿಂದ ₹10.75 ಕೋಟಿ ಮೌಲ್ಯದ 10.5 ಕೆ.ಜಿ.ಬಂಗಾರದ ಆಭರಣ ಮತ್ತು ಕರಗಿಸಿದ ಬಂಗಾರದ ಕಟ್ಟಿಯನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ತಿಳಿಸಿದರು.
ಈ ಮೂವರು ಆರೋಪಿಗಳ ವಿಚಾರಣೆಯಲ್ಲಿ ನೀಡಿದ ಮಾಹಿತಿ ಮೇರೆಗೆ ಇನ್ನುಳಿದ ಆರೋಪಿಗಳಾದ ಹುಬ್ಬಳ್ಳಿ ನೈರುತ್ಯ ರೈಲ್ವೆ ನೌಕರರಾದ ಬಾಲರಾಜ ಮಣಿಕಮ್ ಯೆರುಕುಲಾ(40), ಬಾಬುರಾವ್ ಮಿರಿಯಾಲ (40), ಸೋಲೋಮನ್ನೇ ಪಲುಕುರಿ (40), ಧಾರವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಪೀಟರ್ (40), ಖಾಸಗಿ ನೌಕರ ಗುಂಡು ಜೋಸೆಫ್ (28), ಚಂದನರಾಜ್ (29), ಚಾಲಕ ಇಜಾಜ್ ಧಾರವಾಡ(34), ವಾಚಮನ್ ಸುಸೈರಾಜ್ (44), ನಕಲಿ ಕೀಲಿ ಕೈ ತಯಾರಿಸುವ ಅಂಗಡಿಯವ ಮಹಮ್ಮದ್ ಆಸೀಫ್ ಕಲ್ಲೂರ (31), ಚಾಲಕ ಅನೀಲ ಮಿರಿಯಾಲ (40), ಖಾಸಗಿ ಉದ್ಯೋಗಿ ಅಬು ಅಲಿಯಾಸ್ ಮೋಹನಕುಮಾರ (42), ಇಲೆಕ್ನಿಷಿಯನ್ ಮರಿಯಾದಾಸ (40) ಎಂಬುವವರನ್ನು ಬಂಧಿಸಿಲಾಗಿದೆ ಎಂದರು.
ಬಂಧಿತ ಆರೋಪಿಗಳಿಂದ 39 ಕೆ.ಜಿ ಬಂಗಾರದ ಗಟ್ಟಿ ಹಾಗೂ ಆಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ, ಆರೋಪಿಗಳು ಒಂದಷ್ಟು ಬಂಗಾರ ಮಾರಾಟ ಮಾಡಿ ಬಂದ ಹಣವನ್ನು ಗೋವಾದ ಮೆಜೆಸ್ಟಿಕ್ ಪ್ರೈಡ್ ಕ್ಯಾಸಿನೋದಲ್ಲಿ ಡಿಪಾಸಿಟ್ ಮಾಡಿದ್ದ ₹1.16 ಕೋಟಿ ನಗದನ್ನು ವಶಕ್ಕೆ ಪಡೆಯಲಾಗಿದೆ ಎಂದರು.
ಬ್ಯಾಂಕಿನ ಕಳುವಾದ ಸಂದರ್ಭದಲ್ಲಿ ದಾಖಲಿಸಲಾಗಿದ್ದ ಎಫ್ಐಆರ್ನಲ್ಲಿ 58.97 ಕೆ.ಜಿ. ಚಿನ್ನಾಭರಣ ಎಂದು ಬ್ಯಾಂಕಿನ ಅಧಿಕಾರಿಗಳು ತಿಳಿಸಿದ್ದರು. ಆದರೆ, ತನಿಖೆಯ ವೇಳೆ ಕಳುವಾಗಿದ್ದ ಬಂಗಾರದ ಪ್ರಮಾಣವನ್ನು ನಿಖರವಾಗಿ ಪರಿಶೀಲಿಸಿದಾಗ ಒಟ್ಟು 40.7 ಕೆ.ಜಿ. ಎಂಬುದು ಖಚಿತವಾಗಿದೆ. ಈ ಕುರಿತು ಬ್ಯಾಂಕಿನ ಅಧಿಕಾರಿಗಳು ಲಿಖಿತ ವರದಿ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಬಂಧಿತ ಆರೋಪಿಗಳಿಂದ 39 ಕೆ.ಜಿ ಬಂಗಾರದ ಗಟ್ಟಿ ಹಾಗೂ ಆಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ, ಆರೋಪಿಗಳು ಒಂದಷ್ಟು ಬಂಗಾರ ಮಾರಾಟ ಮಾಡಿ ಬಂದ ಹಣವನ್ನು ಗೋವಾದ ಮೆಜೆಸ್ಟಿಕ್ ಪ್ರೈಡ್ ಕ್ಯಾಸಿನೋದಲ್ಲಿ ಡಿಪಾಸಿಟ್ ಮಾಡಿದ್ದ ₹1.16 ಕೋಟಿ ನಗದನ್ನು ವಶಕ್ಕೆ ಪಡೆಯಲಾಗಿದೆ ಎಂದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಮೂರ್ನಾಲ್ಕು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಅವರ ಪತ್ತೆ ಕಾರ್ಯ ನಡೆದಿದೆ. ಕಳವುವಾಗಿದ್ದ ಚಿನ್ನಾಭರಣದಲ್ಲಿ ಶೇ 85ರಷ್ಟು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.
ತನಿಖೆಯಲ್ಲಿ ಪಾಲ್ಗೊಂಡಿದ್ದ 100 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಯ ಕಠಿಣ ಪರಿಶ್ರಮ, ಕರ್ತವ್ಯ ನಿರ್ವಹಣೆ, ಬದ್ಧತೆಯನ್ನು ಶ್ಲಾಘಿಸಿ, ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.
ಘಟನೆ ವಿವರ
ಮೇ 23 ರಿಂದ 25ರ ನಡುವೆ ಕಳ್ಳರು ಮನಗೂಳಿ ಪಟ್ಟಣದಲ್ಲಿರುವ ಕೆನರಾ ಬ್ಯಾಂಕಿನ ಸೇಫ್ ಲಾಕರ್ನಲ್ಲಿದ್ದ ಅಂದಾಜು ₹53.26 ಕೋಟಿ ಮೌಲ್ಯದ ಬಂಗಾರದ ಆಭರಣ ಹಾಗೂ ₹5,20,450 ನಗದು ಸೇರಿದಂತೆ ಒಟ್ಟು ₹53.31 ಕೋಟಿ ಮೌಲ್ಯದ ಬಂಗಾರದ ಆಭರಣಗಳು ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದರು.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…