Categories: Home

ಮನಗೂಳಿ ಕೆನರಾ ಬ್ಯಾಂಕ್ ಕಳವು ಪ್ರಕರಣ: ಚಿನ್ನ, ನಗದು ಕಳವು ಮಾಡಿದ್ದು ಯಾರು ಗೊತ್ತಾ….? ಎಷ್ಟು ಕದ್ದು ಎಸ್ಕೇಪ್ ಆಗಿದ್ದರು…? ಈ ಕುರಿತ ಮಾಹಿತಿ ಇಲ್ಲಿದೆ ಓದಿ….

ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕಿನ ಹಿಂದಿನ ಹಿರಿಯ ವ್ಯವಸ್ಥಾಪಕ, ರೈಲ್ವೆ ಇಲಾಖೆ ಮೂವರು ನೌಕರರು, ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಹಾಗೂ ವಿವಿಧ ಖಾಸಗಿ ಕಂಪನಿಗಳ ನೌಕರರು, ಲಾರಿ ಚಾಲಕ, ವಾಚ್‌ಮನ್, ಎಲೆಕ್ನಿಷಿಯನ್ ಸೇರಿದಂತೆ 15 ಆರೋಪಿಗಳನ್ನು ವಿಜಯಪುರ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.

ಬಂಧಿತ ಆರೋಪಿಗಳಿಂದ ಒಟ್ಟು 39 ಕೆ.ಜಿ.ಚಿನ್ನ, ₹1.16 ಕೋಟಿ ನಗದು ಹಾಗೂ ಕಳ್ಳತನಕ್ಕೆ ಬಳಸಿದ್ದ ರೈಲ್ವೆ ಇಲಾಖೆಗೆ ಸೇರಿದ ಗೂಡ್ಸ್ ಲಾರಿ, 4 ವಾಕಿಟಾಕಿ, ಒಂದು ಪಿಸ್ತೂಲ್‌ನಂತಿರುವ ಸಿಗರೇಟ್ ಲೈಟರ್, 2 ಗ್ಯಾಸ್‌ ಸಿಲಿಂಡ‌ರ್, ಒಂದು ಆಕ್ಸಿಜನ್ ಸಿಲಿಂಡರ್, ಬರ್ನಿಂಗ್ ಗನ್, ನಕಲಿ ಕೀಲಿಕೈಗಳು, ವಿವಿಧ ಕಂಪನಿಗಳ ಐದು ಕಾರುಗಳನ್ನು ವಶಕ್ಕೆ ಪಡೆದಿರುವುದಾಗಿ ಬೆಳಗಾವಿ ಉತ್ತರ ವಲಯ ಐಜಿಪಿ ಚೇತನ್ ಕುಮಾ‌ರ್ ರಾಠೋಡ್ ಮತ್ತು ವಿಜಯಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮನಗೂಳಿ ಕೆನರಾ ಬ್ಯಾಂಕಿನ ಹಿಂದಿನ ಹಿರಿಯ ವ್ಯವಸ್ಥಾಪಕ ವಿಜಯಕುಮಾ‌ರ್ ಮಿರಿಯಾಲ (41), ಖಾಸಗಿ ಉದ್ಯೋಗಿ ಚಂದ್ರಶೇಖರ ನೆರೆಲ್ಲಾ (38), ಸುನೀಲ ಮೋಕಾ (40) ಎಂಬುವವರನ್ನು ಈಗಾಗಲೇ ಬಂಧಿಸಿ ಅವರಿಂದ ₹10.75 ಕೋಟಿ ಮೌಲ್ಯದ 10.5 ಕೆ.ಜಿ.ಬಂಗಾರದ ಆಭರಣ ಮತ್ತು ಕರಗಿಸಿದ ಬಂಗಾರದ ಕಟ್ಟಿಯನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ತಿಳಿಸಿದರು.

ಈ ಮೂವರು ಆರೋಪಿಗಳ ವಿಚಾರಣೆಯಲ್ಲಿ ನೀಡಿದ ಮಾಹಿತಿ ಮೇರೆಗೆ ಇನ್ನುಳಿದ ಆರೋಪಿಗಳಾದ ಹುಬ್ಬಳ್ಳಿ ನೈರುತ್ಯ ರೈಲ್ವೆ ನೌಕರರಾದ ಬಾಲರಾಜ ಮಣಿಕಮ್ ಯೆರುಕುಲಾ(40), ಬಾಬುರಾವ್ ಮಿರಿಯಾಲ (40), ಸೋಲೋಮನ್ನೇ ಪಲುಕುರಿ (40), ಧಾರವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಪೀಟರ್ (40), ಖಾಸಗಿ ನೌಕರ ಗುಂಡು ಜೋಸೆಫ್ (28), ಚಂದನರಾಜ್ (29), ಚಾಲಕ ಇಜಾಜ್ ಧಾರವಾಡ(34), ವಾಚಮನ್ ಸುಸೈರಾಜ್ (44), ನಕಲಿ ಕೀಲಿ ಕೈ ತಯಾರಿಸುವ ಅಂಗಡಿಯವ ಮಹಮ್ಮದ್ ಆಸೀಫ್ ಕಲ್ಲೂರ (31), ಚಾಲಕ ಅನೀಲ ಮಿರಿಯಾಲ (40), ಖಾಸಗಿ ಉದ್ಯೋಗಿ ಅಬು ಅಲಿಯಾಸ್ ಮೋಹನಕುಮಾರ (42), ಇಲೆಕ್ನಿಷಿಯನ್ ಮರಿಯಾದಾಸ (40) ಎಂಬುವವರನ್ನು ಬಂಧಿಸಿಲಾಗಿದೆ ಎಂದರು.

ಬಂಧಿತ ಆರೋಪಿಗಳಿಂದ 39 ಕೆ.ಜಿ ಬಂಗಾರದ ಗಟ್ಟಿ ಹಾಗೂ ಆಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ, ಆರೋಪಿಗಳು ಒಂದಷ್ಟು ಬಂಗಾರ ಮಾರಾಟ ಮಾಡಿ ಬಂದ ಹಣವನ್ನು ಗೋವಾದ ಮೆಜೆಸ್ಟಿಕ್ ಪ್ರೈಡ್ ಕ್ಯಾಸಿನೋದಲ್ಲಿ ಡಿಪಾಸಿಟ್ ಮಾಡಿದ್ದ ₹1.16 ಕೋಟಿ ನಗದನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ಬ್ಯಾಂಕಿನ ಕಳುವಾದ ಸಂದರ್ಭದಲ್ಲಿ ದಾಖಲಿಸಲಾಗಿದ್ದ ಎಫ್‌ಐಆರ್‌ನಲ್ಲಿ 58.97 ಕೆ.ಜಿ. ಚಿನ್ನಾಭರಣ ಎಂದು ಬ್ಯಾಂಕಿನ ಅಧಿಕಾರಿಗಳು ತಿಳಿಸಿದ್ದರು. ಆದರೆ, ತನಿಖೆಯ ವೇಳೆ ಕಳುವಾಗಿದ್ದ ಬಂಗಾರದ ಪ್ರಮಾಣವನ್ನು ನಿಖರವಾಗಿ ಪರಿಶೀಲಿಸಿದಾಗ ಒಟ್ಟು 40.7 ಕೆ.ಜಿ. ಎಂಬುದು ಖಚಿತವಾಗಿದೆ. ಈ ಕುರಿತು ಬ್ಯಾಂಕಿನ ಅಧಿಕಾರಿಗಳು ಲಿಖಿತ ವರದಿ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಬಂಧಿತ ಆರೋಪಿಗಳಿಂದ 39 ಕೆ.ಜಿ ಬಂಗಾರದ ಗಟ್ಟಿ ಹಾಗೂ ಆಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ, ಆರೋಪಿಗಳು ಒಂದಷ್ಟು ಬಂಗಾರ ಮಾರಾಟ ಮಾಡಿ ಬಂದ ಹಣವನ್ನು ಗೋವಾದ ಮೆಜೆಸ್ಟಿಕ್ ಪ್ರೈಡ್ ಕ್ಯಾಸಿನೋದಲ್ಲಿ ಡಿಪಾಸಿಟ್ ಮಾಡಿದ್ದ ₹1.16 ಕೋಟಿ ನಗದನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಮೂರ್ನಾಲ್ಕು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಅವರ ಪತ್ತೆ ಕಾರ್ಯ ನಡೆದಿದೆ. ಕಳವುವಾಗಿದ್ದ ಚಿನ್ನಾಭರಣದಲ್ಲಿ ಶೇ 85ರಷ್ಟು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ತನಿಖೆಯಲ್ಲಿ ಪಾಲ್ಗೊಂಡಿದ್ದ 100 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಯ ಕಠಿಣ ಪರಿಶ್ರಮ, ಕರ್ತವ್ಯ ನಿರ್ವಹಣೆ, ಬದ್ಧತೆಯನ್ನು ಶ್ಲಾಘಿಸಿ, ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.

ಘಟನೆ ವಿವರ

ಮೇ 23 ರಿಂದ 25ರ ನಡುವೆ ಕಳ್ಳರು ಮನಗೂಳಿ ಪಟ್ಟಣದಲ್ಲಿರುವ ಕೆನರಾ ಬ್ಯಾಂಕಿನ ಸೇಫ್ ಲಾಕರ್‌ನಲ್ಲಿದ್ದ ಅಂದಾಜು ₹53.26 ಕೋಟಿ ಮೌಲ್ಯದ ಬಂಗಾರದ ಆಭರಣ ಹಾಗೂ ₹5,20,450 ನಗದು ಸೇರಿದಂತೆ ಒಟ್ಟು ₹53.31 ಕೋಟಿ ಮೌಲ್ಯದ ಬಂಗಾರದ ಆಭರಣಗಳು ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

8 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

18 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

19 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago