ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ ಅಧ್ಯಕ್ಷ ಮುನಿಕೃಷ್ಣ ಹೇಳಿದರು.
ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಮನರೇಗಾ ಯೋಜನೆ ಉಳಿಸಿ ಬೃಹತ್ ಹೋರಾಟಕ್ಕೆ ನಗರದ ಬಸವಭವನದಿಂದ ಕಾರ್ಯಕರ್ತರೊಂದಿಗೆ ತೆರಳುವ ವೇಳೆ ಬಸ್ ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾಂಗ್ರೆಸ್ ನೇತೃತ್ವದ ಸರ್ಕಾರ ಗ್ರಾಮೀಣ ಭಾಗದಲ್ಲಿ ಗುಳೆ ತಪ್ಪಿಸಲು 2005ರಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ) ಜಾರಿಗೆ ತರಲಾಗಿತ್ತು. ಹಳ್ಳಿಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಎಂದು ಮಹಾತ್ಮ ಗಾಂಧೀಜಿ ಕಂಡಿದ್ದ ಕನಸನ್ನು ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತರುವ ಮೂಲಕ ಯುಪಿಎ ಸರ್ಕಾರ ನನಸು ಮಾಡಿತ್ತು. 20 ವರ್ಷಗಳ ಗ್ರಾಮೀಣ ಭಾಗದ ಜನರ ಜೀವನ ಜೊತೆ ಗ್ರಾಮಗಳು ಬಹಳಷ್ಟು ಸುಧಾರಣೆ ಕಂಡಿದೆ. ಆದರೆ ಈಗಿನ ಕೇಂದ್ರ ಸರ್ಕಾರ ಯೋಜನೆ ಮೂಲ ಉದ್ದೇಶಕ್ಕೆ ಕತ್ತರಿ ಹಾಕಿ ಜನರ ದುಡಿಯುವ ಹಕ್ಕು ಕಿತ್ತಿಕೊಂಡಿದೆ. ಮನರೇಗಾ ಯೋಜನೆಯ ಹೆಸರು ಮತ್ತು ಸ್ವರೂಪದ ಬದಲಾವಣೆ ಮೂಲಕ ಉದ್ಯೋಗ ಖಾತ್ರಿ ಯೋಜನೆಯ ಆತ್ಮಕ್ಕೆ ಕೇಂದ್ರ ಸರ್ಕಾರ ಕೊಡಲಿಯೇಟು ನೀಡಿದೆ. ವಿಬಿ ಜಿ–ರಾಮ–ಜಿ ಯೋಜನೆ ಜನರಿಗೆ ಉದ್ಯೋಗ ಒದಗಿಸಲಾರದು. ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರೆ ಹೊರಿಸುತ್ತಿದೆ. ರಾಜ್ಯಗಳಿಗೆ ಸಿಗಬೇಕಾದ ಅನುದಾನ ನೀಡದೇ ಕೇಂದ್ರ ವಂಚನೆ ಮಾಡುತ್ತಿದೆ. ಮನರೇಗಾ ಯೋಜನೆ ಮರು ಜಾರಿಗಾಗಿ ತಾಲ್ಲೂಕಿನ ಎಲ್ಲಾ ಗ್ರಾ.ಪಂಗಳಲ್ಲಿ ಹೋರಾಟ ರೂಪಿಸಲಾಗುವುದು ಎಂದು ಹೇಳಿದರು.
ಈ ವೇಳೆ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರಾಮೇಗೌಡ, ನರಸಿಂಹ, ಎಂಪಿಸಿಎಸ್ ಅಧ್ಯಕ್ಷ ಕೆಂಪಣ್ಣ, ಹಿರಿಯ ಮುಖಂಡರಾದ ಹನುಮಂತಣ್ಣ, ಮನೋಹರ್, ರಾಮಾಂಜಿನಪ್ಪ, ಮಂಜುನಾಥ, ಸತೀಶ್, ಪಿಳ್ಳವೀರಣ್ಣ ಮತ್ತಿತ್ತರರು ಇದ್ದರು.
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…