ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ ಅಧ್ಯಕ್ಷ ಮುನಿಕೃಷ್ಣ ಹೇಳಿದರು.

ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಮನರೇಗಾ ಯೋಜನೆ ಉಳಿಸಿ ಬೃಹತ್ ಹೋರಾಟಕ್ಕೆ ನಗರದ ಬಸವಭವನದಿಂದ ಕಾರ್ಯಕರ್ತರೊಂದಿಗೆ ತೆರಳುವ ವೇಳೆ ಬಸ್ ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕಾಂಗ್ರೆಸ್ ನೇತೃತ್ವದ ಸರ್ಕಾರ ಗ್ರಾಮೀಣ ಭಾಗದಲ್ಲಿ ಗುಳೆ ತಪ್ಪಿಸಲು 2005ರಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ) ಜಾರಿಗೆ ತರಲಾಗಿತ್ತು. ಹಳ್ಳಿಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಎಂದು ಮಹಾತ್ಮ ಗಾಂಧೀಜಿ ಕಂಡಿದ್ದ ಕನಸನ್ನು ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತರುವ ಮೂಲಕ ಯುಪಿಎ ಸರ್ಕಾರ ನನಸು ಮಾಡಿತ್ತು. 20 ವರ್ಷಗಳ ಗ್ರಾಮೀಣ ಭಾಗದ ಜನರ ಜೀವನ ಜೊತೆ ಗ್ರಾಮಗಳು ಬಹಳಷ್ಟು ಸುಧಾರಣೆ ಕಂಡಿದೆ. ಆದರೆ ಈಗಿನ ಕೇಂದ್ರ ಸರ್ಕಾರ ಯೋಜನೆ ಮೂಲ ಉದ್ದೇಶಕ್ಕೆ ಕತ್ತರಿ ಹಾಕಿ ಜನರ ದುಡಿಯುವ ಹಕ್ಕು ಕಿತ್ತಿಕೊಂಡಿದೆ. ಮನರೇಗಾ ಯೋಜನೆಯ ಹೆಸರು ಮತ್ತು ಸ್ವರೂಪದ ಬದಲಾವಣೆ ಮೂಲಕ ಉದ್ಯೋಗ ಖಾತ್ರಿ ಯೋಜನೆಯ ಆತ್ಮಕ್ಕೆ ಕೇಂದ್ರ ಸರ್ಕಾರ ಕೊಡಲಿಯೇಟು ನೀಡಿದೆ. ವಿಬಿ ಜಿ–ರಾಮ–ಜಿ ಯೋಜನೆ ಜನರಿಗೆ ಉದ್ಯೋಗ ಒದಗಿಸಲಾರದು. ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರೆ ಹೊರಿಸುತ್ತಿದೆ. ರಾಜ್ಯಗಳಿಗೆ ಸಿಗಬೇಕಾದ ಅನುದಾನ ನೀಡದೇ ಕೇಂದ್ರ ವಂಚನೆ ಮಾಡುತ್ತಿದೆ. ಮನರೇಗಾ ಯೋಜನೆ ಮರು ಜಾರಿಗಾಗಿ ತಾಲ್ಲೂಕಿನ ಎಲ್ಲಾ ಗ್ರಾ.ಪಂಗಳಲ್ಲಿ ಹೋರಾಟ ರೂಪಿಸಲಾಗುವುದು ಎಂದು ಹೇಳಿದರು.

ಈ ವೇಳೆ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರಾಮೇಗೌಡ, ನರಸಿಂಹ, ಎಂಪಿಸಿಎಸ್ ಅಧ್ಯಕ್ಷ ಕೆಂಪಣ್ಣ, ಹಿರಿಯ ಮುಖಂಡರಾದ ಹನುಮಂತಣ್ಣ, ಮನೋಹರ್, ರಾಮಾಂಜಿನಪ್ಪ, ಮಂಜುನಾಥ, ಸತೀಶ್, ಪಿಳ್ಳವೀರಣ್ಣ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…

11 hours ago

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…

14 hours ago

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

1 day ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

1 day ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

1 day ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

1 day ago