ಮನರೇಗಾ: ಮೂರು ತಿಂಗಳ ಸ್ತ್ರೀ ಚೇತನ ಅಭಿಯಾನ

ಮನರೇಗಾ ಯೋಜನೆಯಡಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆಯನ್ನು ಶೇ.10 ರಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಹೊಸಕೋಟೆ ತಾಲ್ಲೂಕಿನ ಎಲ್ಲಾ ಗ್ರಾಪಂಗಳಲ್ಲಿ 3 ತಿಂಗಳು ರವರೆಗೆ ‘ಸ್ತ್ರೀ ಚೇತನ ಅಭಿಯಾನ’ ಆಯೋಜಿಸಲಾಗಿದೆ.

ಮನರೇಗಾ ಯೋಜನೆಯಡಿ ಕೆಲಸಕ್ಕಾಗಿ ನೋಂದಾಯಿಸಿಕೊಂಡ ಮಹಿಳಾ ಕೂಲಿಕಾರರಲ್ಲಿ ಶೇ.52 ರಷ್ಟು ಭಾಗವಹಿಸುತ್ತಿದ್ದು, ಹಲವು ಜಾಗೃತಿ ಕೈಗೊಂಡಿದ್ದರೂ ಶೇ.55 ರಷ್ಟು ತಲುಪಲು ಸಾಧ್ಯವಾಗಿಲ್ಲ. ಮಹಿಳಾ ಕೂಲಿಕಾರರ ಪ್ರಮಾಣ ಹೆಚ್ಚಿಸಲು 3 ತಿಂಗಳ ಕಾಲ ಸ್ತ್ರೀ-ಚೇತನ ಅಭಿಯಾನ ಹಮ್ಮಿಕೊಳ್ಳಲಾಗಿದೆ ಉಪ ಎಂದು ಜಿ.ಪಂ ಉಪ ಕಾರ್ಯದರ್ಶಿ ಟಿ ಕೆ ರಮೇಶ್ ತಿಳಿಸಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 100 ದಿನ ಪೂರೈಸಿರುವ ಮಹಿಳೆಯರಿಗೆ ಹೊಸಕೋಟೆ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಡಾ. ನಾರಾಯಣ ಸ್ವಾಮಿ ರವರು ಸನ್ಮಾನ ಮಾಡಿದರು.

*ವಿವಿಧ ಜಾಗೃತಿ ಕಾರ್ಯಕ್ರಮಗಳು*

* ರಂಗೋಲಿ ಸ್ವರ್ಧೆ
* ವೈಯಕ್ತಿಕ ಕಾಮಗಾರಿಗಳ ಅರಿವು ಮತ್ತು ಫಲಾನುಭವಿಗಳಗೆ ಆದೇಶ ಪತ್ರ ವಿತರಣೆ
* ಮಹಿಳಾ ಕೂಲಿ ಕಾರ್ಮಿಕರಿಗೆ ಗ್ರಾಮೀಣ ಕ್ರೀಡಾ ಕೂಟ ಅಯೋಜನೆ
* ಅರೋಗ್ಯ ತಪಾಸಣಾ ಶಿಬಿರ

ಈ ಎಲ್ಲ ಕಾರ್ಯಕ್ರಮಗಳಿಂದ ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಶೇ.10 ರಷ್ಟು ಹೆಚ್ಚಿಸುವುದು ಹಾಗೂ ಮಹಿಳಾ ಕಾಯಕ ಬಂಧುವಿಗೆ ಪ್ರೋತ್ಸಾಹಧನ ಕಡ್ಡಾಯವಾಗಿ ಪಾವತಿಸುವ ಉದ್ದೇಶ ಹೊಂದಲಾಗಿದೆ. ಅರ್ಹ ಮಹಿಳಾ ಕೂಲಿಕಾರರಿಗೆ ಜಾಗೃತಿ ಮೂಡಿಸುವುದು, ಮೂರು ತಿಂಗಳ ಕಾಲ ಮಹಿಳಾ ಕೂಲಿಕಾರರಿಗೆ ನಿರಂತರ ಕೆಲಸ ನೀಡಲು ಕಾಮಗಾರಿಗಳನ್ನು ಸಿದ್ಧತೆ ಮಾಡಿ ಕೊಳ್ಳುವುದು , ಗ್ರಾಪಂ ಮಟ್ಟದ ಚುನಾಯಿತ ಸದಸ್ಯರು, ಮಹಿಳಾ ಸ್ವಸಹಾಯ ಸಂಘದ ಸದಸ್ಯರನ್ನು ಆಹ್ವಾನಿಸಬೇಕು. ಮಹಿಳಾ ಕೂಲಿಕಾರರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ವಿಶೇಷ ಪ್ರಯತ್ನಗಳನ್ನು ನಡೆಸುವ ಚುನಾಯಿತ ಪ್ರತಿನಿಧಿ ಗಳು, ಅಧಿಕಾರಿ, ಸಿಬ್ಬಂದಿಗಳನ್ನು ಗುರುತಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಕರ್ತವ್ಯ ನಿರ್ವಹಿಸಿದ ಎಲ್ಲಾ ಅಭಿಯಂತರರು, ಗ್ರಾಮ ಕಾಯಕ ಮಿತ್ರರಿಗೆ ಹಾಗೂ ಸಿಬ್ಬಂದಿಗೆ ಸನ್ಮಾನಿಸಿ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಅರ್ಹ ಪಲಾನುಭವಿಗಳಿಗೆ ಯೋಜನೆಯನ್ನು ತಲುಪಿಸಲು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, MVJ ಮೆಡಿಕಲ್ ಕಾಲೇಜಿನ ವೈದ್ಯರು, ಸ್ವ ಸಹಾಯ ಸಂಘದ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಮಕ್ಕಳು, ಆಶಾ ಕಾರ್ಯ ಕರ್ತೆಯರು ಹಾಗೂ ನರೇಗಾ ಕೂಲಿ ಕಾರರು ಹಾಗೂ ಗ್ರಾಮ ಪಂಚಾಯ್ತಿ ಸಿಬ್ಬಂದಿ ವರ್ಗದವರು ಭಾಗವಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

8 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

13 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

13 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

18 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago