ಮನರೇಗಾ: ಮೂರು ತಿಂಗಳ ಸ್ತ್ರೀ ಚೇತನ ಅಭಿಯಾನ

ಮನರೇಗಾ ಯೋಜನೆಯಡಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆಯನ್ನು ಶೇ.10 ರಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಹೊಸಕೋಟೆ ತಾಲ್ಲೂಕಿನ ಎಲ್ಲಾ ಗ್ರಾಪಂಗಳಲ್ಲಿ 3 ತಿಂಗಳು ರವರೆಗೆ ‘ಸ್ತ್ರೀ ಚೇತನ ಅಭಿಯಾನ’ ಆಯೋಜಿಸಲಾಗಿದೆ.

ಮನರೇಗಾ ಯೋಜನೆಯಡಿ ಕೆಲಸಕ್ಕಾಗಿ ನೋಂದಾಯಿಸಿಕೊಂಡ ಮಹಿಳಾ ಕೂಲಿಕಾರರಲ್ಲಿ ಶೇ.52 ರಷ್ಟು ಭಾಗವಹಿಸುತ್ತಿದ್ದು, ಹಲವು ಜಾಗೃತಿ ಕೈಗೊಂಡಿದ್ದರೂ ಶೇ.55 ರಷ್ಟು ತಲುಪಲು ಸಾಧ್ಯವಾಗಿಲ್ಲ. ಮಹಿಳಾ ಕೂಲಿಕಾರರ ಪ್ರಮಾಣ ಹೆಚ್ಚಿಸಲು 3 ತಿಂಗಳ ಕಾಲ ಸ್ತ್ರೀ-ಚೇತನ ಅಭಿಯಾನ ಹಮ್ಮಿಕೊಳ್ಳಲಾಗಿದೆ ಉಪ ಎಂದು ಜಿ.ಪಂ ಉಪ ಕಾರ್ಯದರ್ಶಿ ಟಿ ಕೆ ರಮೇಶ್ ತಿಳಿಸಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 100 ದಿನ ಪೂರೈಸಿರುವ ಮಹಿಳೆಯರಿಗೆ ಹೊಸಕೋಟೆ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಡಾ. ನಾರಾಯಣ ಸ್ವಾಮಿ ರವರು ಸನ್ಮಾನ ಮಾಡಿದರು.

*ವಿವಿಧ ಜಾಗೃತಿ ಕಾರ್ಯಕ್ರಮಗಳು*

* ರಂಗೋಲಿ ಸ್ವರ್ಧೆ
* ವೈಯಕ್ತಿಕ ಕಾಮಗಾರಿಗಳ ಅರಿವು ಮತ್ತು ಫಲಾನುಭವಿಗಳಗೆ ಆದೇಶ ಪತ್ರ ವಿತರಣೆ
* ಮಹಿಳಾ ಕೂಲಿ ಕಾರ್ಮಿಕರಿಗೆ ಗ್ರಾಮೀಣ ಕ್ರೀಡಾ ಕೂಟ ಅಯೋಜನೆ
* ಅರೋಗ್ಯ ತಪಾಸಣಾ ಶಿಬಿರ

ಈ ಎಲ್ಲ ಕಾರ್ಯಕ್ರಮಗಳಿಂದ ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಶೇ.10 ರಷ್ಟು ಹೆಚ್ಚಿಸುವುದು ಹಾಗೂ ಮಹಿಳಾ ಕಾಯಕ ಬಂಧುವಿಗೆ ಪ್ರೋತ್ಸಾಹಧನ ಕಡ್ಡಾಯವಾಗಿ ಪಾವತಿಸುವ ಉದ್ದೇಶ ಹೊಂದಲಾಗಿದೆ. ಅರ್ಹ ಮಹಿಳಾ ಕೂಲಿಕಾರರಿಗೆ ಜಾಗೃತಿ ಮೂಡಿಸುವುದು, ಮೂರು ತಿಂಗಳ ಕಾಲ ಮಹಿಳಾ ಕೂಲಿಕಾರರಿಗೆ ನಿರಂತರ ಕೆಲಸ ನೀಡಲು ಕಾಮಗಾರಿಗಳನ್ನು ಸಿದ್ಧತೆ ಮಾಡಿ ಕೊಳ್ಳುವುದು , ಗ್ರಾಪಂ ಮಟ್ಟದ ಚುನಾಯಿತ ಸದಸ್ಯರು, ಮಹಿಳಾ ಸ್ವಸಹಾಯ ಸಂಘದ ಸದಸ್ಯರನ್ನು ಆಹ್ವಾನಿಸಬೇಕು. ಮಹಿಳಾ ಕೂಲಿಕಾರರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ವಿಶೇಷ ಪ್ರಯತ್ನಗಳನ್ನು ನಡೆಸುವ ಚುನಾಯಿತ ಪ್ರತಿನಿಧಿ ಗಳು, ಅಧಿಕಾರಿ, ಸಿಬ್ಬಂದಿಗಳನ್ನು ಗುರುತಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಕರ್ತವ್ಯ ನಿರ್ವಹಿಸಿದ ಎಲ್ಲಾ ಅಭಿಯಂತರರು, ಗ್ರಾಮ ಕಾಯಕ ಮಿತ್ರರಿಗೆ ಹಾಗೂ ಸಿಬ್ಬಂದಿಗೆ ಸನ್ಮಾನಿಸಿ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಅರ್ಹ ಪಲಾನುಭವಿಗಳಿಗೆ ಯೋಜನೆಯನ್ನು ತಲುಪಿಸಲು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, MVJ ಮೆಡಿಕಲ್ ಕಾಲೇಜಿನ ವೈದ್ಯರು, ಸ್ವ ಸಹಾಯ ಸಂಘದ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಮಕ್ಕಳು, ಆಶಾ ಕಾರ್ಯ ಕರ್ತೆಯರು ಹಾಗೂ ನರೇಗಾ ಕೂಲಿ ಕಾರರು ಹಾಗೂ ಗ್ರಾಮ ಪಂಚಾಯ್ತಿ ಸಿಬ್ಬಂದಿ ವರ್ಗದವರು ಭಾಗವಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

9 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

10 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago