Categories: Home

ಮನಸಿನೊಳಗೊಂದು ಪಯಣ……….

ಬಹುಶಃ ಇದರಷ್ಟು ರೋಚಕ ಇದರಷ್ಟು ಆತ್ಮ ತೃಪ್ತಿ ಇನ್ನೊಂದಿರಲಾರದು………..

ಹೊರಗೆಲ್ಲೋ ಪ್ರವಾಸ,
ಇನ್ನೊಬ್ಬರ ವಿಮರ್ಶೆ,
ಬದುಕಿನ ಜಂಜಾಟ,
ಅಜ್ಞಾನ, ಅಸಹನೆ, ಅಹಂಕಾರ ಮುಂತಾದ ಕಾರಣಗಳಿಗಾಗಿ
ನಮ್ಮೊಳಗಿನ ಬೇಡಿಕೆಗಳ ಪೂರೈಕೆಯಲ್ಲಿ ನಮ್ಮ ಒಳಗಿನ ಪ್ರಯಾಣಕ್ಕೆ ಸಮಯವೇ ಇರುವುದಿಲ್ಲ…..

ಕೆಲವೊಮ್ಮೆ ಸಮಯವಿದ್ದರು ಅದರ ಆಗಾಧತೆಗೆ ಅಂಜಿ ಅದರೊಳಗೆ ಪ್ರವೇಶಿಸಲು ಭಯ ಮತ್ತು ನಿರಾಸಕ್ತಿ ಮೂಡುತ್ತದೆ…..

ನಮ್ಮೊಳಗೆ ನಾವು ಪ್ರವೇಶಿಸದ ಬದುಕು ಒಂದು ರೀತಿಯಲ್ಲಿ ಅಪೂರ್ಣ…….

ನಮ್ಮೊಳಗೆ ನಾವು ಪ್ರವೇಶಿಸುವುದು ಹೇಗೆ ಮತ್ತು ಅಲ್ಲಿನ ಪಯಣ ಹೇಗೆ…….

ಸೃಷ್ಟಿ……

75 ಭಾಗ ನೀರು – 25 ಭಾಗ ಭೂಮಿ…….

ಆ ಭೂಮಿಯ ಮೇಲೆ ಗಾಳಿ ನೀರು ಬೆಳಕು ಬೆಟ್ಟ ಗುಡ್ಡ ಕಾಡು ನದಿ ಸರೋವರ ಚಿತ್ರ ವಿಚಿತ್ರ ಪ್ರಾಣಿಗಳು…..

ಅದರಲ್ಲೊಂದು ವೈಶಿಷ್ಟ್ಯದ ಪ್ರಾಣಿ ಎಂಬ ಮನುಷ್ಯ……

ಆ ಮನುಷ್ಯ ಪ್ರಾಣಿಯ ಬಣ್ಣದಲ್ಲಿ ಕಪ್ಪು ಬಿಳುಪು ಕಂದು ಎಂಬಿತ್ಯಾದಿ ಒಂದಷ್ಟು ವ್ಯತ್ಯಾಸಗಳು……

ಆ ವ್ಯತ್ಯಾಸಗಳಲ್ಲಿ ಈ ಪ್ರಾಣಿಯ ಆಚರಣೆಯಲ್ಲಿ ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಬೌದ್ದ ಸಿಖ್ ಜೈನ ಲಿಂಗಾಯತ ಪಾರ್ಸಿ ಇತ್ಯಾದಿ ಇತ್ಯಾದಿ ಭಿನ್ನತೆಗಳು…..

ಆ ಭಿನ್ನತೆಗಳಲ್ಲಿ ಅಮೆರಿಕ ಚೀನಾ ಆಫ್ರಿಕಾ ರಷ್ಯಾ ಆಸ್ಟ್ರೇಲಿಯಾ ಪಾಕಿಸ್ತಾನ ಭಾರತ ಶ್ರೀಲಂಕಾ ಮುಂತಾದ ಪ್ರದೇಶಗಳ ವಿಂಗಡನೆ…..

ಆ ವಿಂಗಡನೆಗಳಲ್ಲಿ ಕನ್ನಡ ತಮಿಳು ಹಿಂದಿ ಇಂಗ್ಲಿಷ್ ಫ್ರೆಂಚ್ ಸಂಸ್ಕೃತ ಮುಂತಾದ ಅನೇಕ ಭಾಷಾ ಪ್ರಬೇಧಗಳು….

ಆ ಪ್ರಬೇಧಗಳ ಮನುಷ್ಯ ಪ್ರಾಣಿಗಳಲ್ಲಿ ಅಸ್ಪೃಶ್ಯ ಬ್ರಾಹ್ಮಣ ಗೌಡ ಠಾಕೂರ್ ಯಾದವ್ ಜಾಟ್ ನಂಬೂದಿರಿ ಕಮ್ಮ ಪಟೇಲ ಎಂಬಿತ್ಯಾದಿ ಭೇದಗಳು……

ಆ ಭೇದಗಳಲ್ಲಿ ಬಡವ ಶ್ರೀಮಂತ ಮೇಲು ಕೀಳು ವಿದ್ಯಾವಂತ ಅನಕ್ಷರಸ್ಥ ಎಂಬ ತಾರತಮ್ಯಗಳು…..

ಆ ತಾರತಮ್ಯಗಳಲ್ಲಿ ಜವಾನ ಅಧಿಕಾರಿ ಮಂತ್ರಿ ಒಡೆಯ ಆಳು ಕೂಲಿ ಎಂಬ ವಿಭಾಗಗಳು……

ಆ ವಿಭಾಗಗಳಲ್ಲಿ ಅಪ್ಪ ಅಮ್ಮ ಅಜ್ಜ ಅಜ್ಜಿ ಗಂಡ ಹೆಂಡತಿ ಅತ್ತೆ ಸೊಸೆ ಮಕ್ಕಳು ಎಂಬ ಅನೇಕ ಸಂಬಂಧಗಳು……

ಆ ಸಂಬಂಧಗಳಲ್ಲಿ ಆರ್ಥಿಕ ಸಾಮಾಜಿಕ ಶೈಕ್ಷಣಿಕ ಸಾಂಸ್ಕೃತಿಕ ರಾಜಕೀಯ ಮುಂತಾದ ಅಸಮಾನತೆಗಳು….

ಆ ಅಸಮಾನತೆಗಳಲ್ಲಿ ನಮ್ಮ ಸ್ಥಾನಮಾನವನ್ನು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಬೇಕು…..

ಅಂದರೆ ಸೃಷ್ಟಿಯ ಮೂಲದಿಂದ ನಮ್ಮ ಯೋಚನಾ ಶಕ್ತಿ ರೂಪಗೊಳ್ಳಬೇಕು ಮತ್ತು ಪ್ರಾರಂಭವಾಗಬೇಕು……

ಮುಂದೆ….

ಇಷ್ಟು ಅರ್ಥಮಾಡಿಕೊಳ್ಳುವ ವೇಳೆಗಾಗಲೇ ಸೃಷ್ಟಿಯಲ್ಲಿ ನಮ್ಮ ‌ಅಸ್ತಿತ್ವದ ಒಂದು ಅಂದಾಜು, ಈ ಸಮಾಜ ಅಥವಾ ದೇಶದಲ್ಲಿ ಹಾಗು ಕೌಟುಂಬಿಕ ವ್ಯವಸ್ಥೆಯಲ್ಲಿ ನಮ್ಮ ಸ್ಥಾನಮಾನದ ಒಂದು ಚಿತ್ರಣ ನಮ್ಮ ಮನಸ್ಸಿನಲ್ಲಿ ಮೂಡುತ್ತದೆ…..

ಆ ಮನಸ್ಸಿನ ಪ್ರವೇಶ ದ್ವಾರದ ಮೂಲಕ ಆತ್ಮದೊಳಗೆ ಹೆಜ್ಜೆ ಇಡಲು ಪ್ರಾರಂಭಿಸಿ….

ಇಲ್ಲಿಯವರೆಗಿನ ನಿಮ್ಮ ಅನುಭವ ಅಧ್ಯಯನ ಚಿಂತನೆ ಅರಿವು ಎಲ್ಲವನ್ನೂ ಒಟ್ಟುಗೂಡಿಸಿ ಒಂದೊಂದು ಹೆಜ್ಜೆ ಇಡುತ್ತಾ ಮುಕ್ತವಾಗಿ ಸಂಚರಿಸಿ……

ಹುಟ್ಟಿನಿಂದ ಸಾಯುವವರೆಗಿನ ಸಮಯ ಅಥವಾ ಕಾಲವನ್ನು ಮನುಷ್ಯ ಪ್ರಾಣಿಯ ಜೀವನ ಅಥವಾ ಬದುಕು ಎಂದು ಪರಿಗಣಿಸಲಾಗುತ್ತದೆ………

ಈ ಬದುಕಿನ ಪಯಣದ ಹಾದಿ, ಅರ್ಥ, ಉದ್ದೇಶ, ಗುರಿ, ಸಾರ್ಥಕತೆ, ಸೃಷ್ಟಿಯ ಸಹಜತೆ ಎಲ್ಲವನ್ನೂ ನಮ್ಮ ತಿಳಿವಳಿಕೆಯ ಮಿತಿಯಲ್ಲಿ, ನಾವು ಗ್ರಹಿಸಿದಂತೆ ನಮ್ಮೊಳಗೆ ಒಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ನಮ್ಮ ಜವಾಬ್ದಾರಿ, ಕರ್ತವ್ಯ ಯಾವುದು ಎಂದು ಸ್ಪಷ್ಟಪಡಿಸಿಕೊಳ್ಳಬೇಕು. ನಮ್ಮ ದೇಹ ಮತ್ತು ಮನಸ್ಸಿನ ಬೇಡಿಕೆ ಮತ್ತು ಪೂರೈಕೆಯ ಮಾರ್ಗಗಳನ್ನು ಗುರುತಿಸಿಕೊಳ್ಳಬೇಕು…..

ವೈಯಕ್ತಿಕತೆ, ಕೌಟುಂಬಿಕತೆ, ಸಾಮಾಜಿಕತೆ, ನೈತಿಕತೆ, ಮಾನವೀಯತೆ ಎಲ್ಲವನ್ನೂ ಸಮಗ್ರವಾಗಿ ಪರಿಶೀಲಿಸಿ ನಮ್ಮ ನಡೆಯನ್ನು ರೂಪಿಸಿಕೊಳ್ಳಲು ಪ್ರಯತ್ನಿಸಬೇಕು……

ಅತಿಮುಖ್ಯವಾಗಿ ಬದುಕಿನ ಏರಿಳಿತಗಳಲ್ಲಿ ನಮ್ಮ ಪ್ರತಿಕ್ರಿಯೆ ಮತ್ತು ‌ನಿಯಂತ್ರಣ ಮನಸ್ಸಿನೊಳಗಿನ ಪಯಣದಲ್ಲಿ ಮಹತ್ವ ಪಡೆಯಬೇಕಾದ ವಿಷಯ…..

ಏಕೆಂದರೆ, ಈ ಪಯಣದಲ್ಲಿ ನಮ್ಮ ಹುಡುಕಾಟ ನಮ್ಮೊಳಗಿನ ಅಂತಃ ಶಕ್ತಿಯನ್ನು ಉದ್ದೀಪನಗೊಳಿಸುವಂತಿರಬೇಕು. ಭವಿಷ್ಯದ ಕನಸುಗಳಿಗೆ ನೀರೆರೆಯುವಂತಿರಬೇಕು. ನಮ್ಮಲ್ಲಿರುವ ಕತ್ತಲನ್ನು ಕಳೆದು ಬೆಳಕು ಮೂಡುವಂತಿರಬೇಕು. ನಮ್ಮ ನೆಮ್ಮದಿಯ ಮಟ್ಟ ಹೆಚ್ಚುವಂತಿರಬೇಕು. ಒಟ್ಟಿನಲ್ಲಿ ಈ ಪಯಣ ನಮ್ಮಲ್ಲಿ ಸ್ಪೂರ್ತಿ ತುಂಬಿ ನಮ್ಮನ್ನು ಪುನಶ್ಚೇತನ ಗೊಳಿಸುವಂತಿರಬೇಕು. ನಮ್ಮಲ್ಲಿನ ಸಂಕುಚಿತತೆ ಕಡಿಮೆಯಾಗಿ ವಿಶಾಲ ಮನೋಭಾವ ಬೆಳೆಸುವಂತಿರಬೇಕು…….

ಏಕೆಂದರೆ, ಮನಸ್ಸೆಂಬುದು ರೀ ಚಾರ್ಜಬಲ್ ಬ್ಯಾಟರಿ ಇದ್ದಂತೆ. ಅದನ್ನು ಆಗಾಗ ರೀ ಚಾರ್ಜ್ ಮಾಡುತ್ತಲೇ ಇರಬೇಕು ಮತ್ತು ಅದನ್ನು ಹೊರಗಿನ ಮೂಲಗಳ ಜೊತೆಗೆ ಒಳಗಿನ ಸಂಪನ್ಮೂಲಗಳನ್ನು ಹೆಚ್ಚಾಗಿ ಬಳಸಿ ರೀ ಚಾರ್ಜ್ ಮಾಡಿದರೆ ಅದು ದೀರ್ಘ ಬಾಳಿಕೆ ಮತ್ತು ಹೆಚ್ಚು ದಕ್ಷತೆಯಿಂದ ಕ್ರಿಯಾತ್ಮಕವಾಗಿ ಕೆಲಸ ಮಾಡುತ್ತದೆ…..

ಅದಕ್ಕಾಗಿ ಆಗಾಗ ಅನಂತತೆಯೆಂಬ ಮನಸ್ಸಿನೊಳಗೆ ಸದಾ ಪಯಣಿಸುತ್ತಲೇ ಇರಬೇಕು. ಯಾರೋ ಯೋಗಿಗಳು, ಆಧ್ಯಾತ್ಮಿಕ ಗುರುಗಳು, ಸಾಧಕರು, ಋಷಿ ಮುನಿಗಳು ಮುಂತಾದವರು ಮಾತ್ರ ಮಾಡುವ ಮತ್ತು ಮಾಡಲು ಸಾಧ್ಯವಾಗುವ ವಿಷಯವಿದು. ಸಾಮಾನ್ಯ ಜನರಿಗೆ ಅಸಾಧ್ಯ ಎಂಬ ತಪ್ಪು ಕಲ್ಪನೆ ಮೂಡಿಸಲಾಗಿದೆ…..

ಎಲ್ಲಾ ಆರೋಗ್ಯವಂತ, ಸಹಜ, ಸಾಮಾನ್ಯ ವ್ಯಕ್ತಿಗಳು ಸಹ ತಮ್ಮ ಮನಸ್ಸಿನೊಳಗೆ, ತಮಗೆ ಸಾಧ್ಯವಿರುವ, ತಮ್ಮ ಮಿತಿಯಲ್ಲಿ ಸದಾ ಪ್ರಯಾಣಿಸಬಹುದು. ನೀವು ಸಹ ಸ್ವಚ್ಛಂದವಾಗಿ, ಮುಕ್ತವಾಗಿ ಪ್ರಯತ್ನಿಸಿ ನೋಡಿ. ಪರಿಣಾಮ – ಫಲಿತಾಂಶ ನಿಮ್ಮ ವಿವೇಚನೆಗೆ ಬಿಡುತ್ತಾ…,.

ಇದೊಂದು ದೀರ್ಘ ಮತ್ತು ನಿರಂತರ ಅಭ್ಯಾಸ. ಬದುಕಿನ ಕೊನೆಯ ಪುಟದವರೆಗೂ ನಡೆಯುತ್ತಲೇ ಇರಬೇಕು. ಆ ವ್ಯಕ್ತಿಯ ಜೀವನಮಟ್ಟ ಖಂಡಿತ ಸುಧಾರಣೆಯಾಗಿ Quality of Life ಉನ್ನತ ದರ್ಜೆಗೇರುವ ಎಲ್ಲಾ ಸಾಧ್ಯತೆ ಇದೆ ಎಂಬ ಭರವಸೆ ಮೂಡಿಸುತ್ತಾ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

2 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

3 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

4 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

4 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

8 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

15 hours ago