Categories: ಲೇಖನ

ಮನುಜ ಮಾಡುತ್ತಿರುವ ತಪ್ಪಿಗೆ.. ದೇವರ ಪಶ್ಚಾತ್ತಾಪ……

ಅಯ್ಯಾ ಮನುಜ, ಎಷ್ಟೊಂದು ಅನ್ಯಾಯ ಮಾಡಿದೆ ನೀನು ನನಗೆ,

ಸೃಷ್ಟಿಸಿದ ನನಗೇ ನೀನು ದ್ರೋಹ ಬಗೆದೆಯಲ್ಲಾ,

ನೀನು ನಿಂತಿರುವ ನೆಲವೇ ನನ್ನದು,

ನೀನು ಉಸಿರಾಡುವ ಗಾಳಿ, ಕುಡಿಯುವ ನೀರು, ಅಷ್ಟೇ ಏಕೆ, ನಿನ್ನ ಇಡೀ ದೇಹ, ಆತ್ಮಗಳೇ ನನ್ನದು,

ನಿನ್ನ ಅನುಕೂಲಕ್ಕಾಗಿಯೇ ಮಳೆ, ಗಾಳಿ, ಚಳಿ, ಬಿಸಿಲನ್ನು ಸೃಷ್ಟಿಸಿದೆ,

ನಿನ್ನ ಸುಖಕ್ಕಾಗಿ ಗಿಡ ಮರ, ಪ್ರಾಣಿ ಪಕ್ಷಿಗಳನ್ನು ನೀಡಿದೆ,

ನಿನ್ನ ದೇಹದ ಪ್ರತಿ ಅಂಗಗಳನ್ನು ಅತ್ಯಂತ ಜಾಗರೂಕವಾಗಿ ರೂಪಿಸಿದೆ,

ನಿನ್ನ ಸಂತೋಷಕ್ಕಾಗಿ ಗಂಡು ಹೆಣ್ಣುಗಳೆಂಬ ಭಿನ್ನತೆ ಸೃಷ್ಟಿಸಿದ್ದೂ ನಾನೇ,

ನಿನ್ನ ಭಾವನೆ, ಆಕಾರ, ರೂಪಗಳನ್ನು ನಾನೇ ಕಷ್ಟಪಟ್ಟು ರಚಿಸಿದೆ,

ಹೋಗಲಿ ಮಜಾ ಮಾಡು ಎಂದು ನೂರು ವರ್ಷಗಳ ಆಯಸ್ಸು ನೀಡಿದೆ,

ಆದರೆ, ಪಾಪಿ ನೀನು ಮಾಡಿದ್ದಾದರೂ ಏನು,…

ನನ್ನನೇ ಬಗೆದು ನಿನಗೆ ಇಷ್ಟ ಬಂದಂತೆ ಬಂಗಲೆ ನಿರ್ಮಿಸಿಕೊಂಡೆ,

ನಡೆದಾಡಲು ಬಲಿಷ್ಠ ಕಾಲುಗಳನ್ನು ಕೊಟ್ಟಿದ್ದರೂ, ಸೋಮಾರಿಯಾಗಿ ಅಲೆದಾಡಲು ವಾಹನಗಳನ್ನು ನಿರ್ಮಿಸಿ ನನ್ನ ಉಸಿರನ್ನೇ ಮಲಿನಗೊಳಿಸಿದೆ,

ನಿನಗೋಸ್ಕರ ಎಷ್ಟೊಂದು ಬಗೆಯ ಹಣ್ಣು, ತರಕಾರಿ, ಸೊಪ್ಪು, ಬೇಳೆಗಳನ್ನು ಕೊಟ್ಟೆ. ಆದರೆ ದುರಾಸೆಯಿಂದ ರಸಾಯನಿಕಗಳೆಂಬ ವಿಷ ಬೆರೆಸಿ ನಿನಗಿಷ್ಟವಾದ ರುಚಿಗಾಗಿ ನನ್ನನ್ನು ಹಾಳು ಮಾಡಿದೆ.

ಸೃಷ್ಟಿಸುವಾಗ ಇತರೆ ಎಲ್ಲಾ ಜೀವಿಗಳನ್ನೂ ನಿರ್ಲಕ್ಷಿಸಿ ನಿನಗೆ ಮಾತ್ರ ಅತಿ ಹೆಚ್ಚು ಬುದ್ದಿ ನೀಡಿದೆ. ಏನೋ ಮನುಷ್ಯ ಪಾಪ ಚೆನ್ನಾಗಿರಲಿ ಎಂದು,

ಅದೇ ದೊಡ್ಡ ಸಮಸ್ಯೆಯಾಗಿ ಮುಂದೆ ಇಷ್ಟೊಂದು ಅನಾಹುತಕಾರಿಯಾಗುತ್ತದೆಂದು ಸೃಷ್ಟಿಸಿದ ನಾನೇ ಊಹಿಸದಾದೆ,

ಮನುಷ್ಯನ ಅಲೋಚನೆ ಇಷ್ಟೊಂದು ಕ್ರೂರವಾಗಿರುತ್ತದೆ ಎಂದು ಅಂದಾಜಿಸಲು ವಿಫಲನಾದೆ,

ಮನುಷ್ಯರನ್ನೆಲ್ಲಾ ಸಮನಾಗಿ ಸೃಷ್ಟಿಸಿದ ನನಗೇ ಮೋಸಮಾಡಿ ಬೇರೆ ಬೇರೆ ಧರ್ಮ ಜಾತಿ ಸೃಷ್ಟಿಸಿ ಮನಸ್ಸುಗಳನ್ನೇ ಒಡೆದೆ,

ಇಡೀ ಭೂ ಪ್ರದೇಶವನ್ನೇ ತುಂಡು ತುಂಡಾಗಿ ಬೌಂಡರಿ ನಿರ್ಮಿಸಿ ಇಭ್ಭಾಗ ಮಾಡಿ ನನ್ನ ಮಾನವನ್ನೇ ಹರಾಜಾಕಿದೆ,

ನನ್ನೆಲ್ಲಾ ಅದ್ಭುತ ಕ್ರಿಯೆಗಳನ್ನು ನಿನ್ನ ತೆವಲಿಗಾಗಿ ಉಪಯೋಗಿಸಿಕೊಂಡು ಕೊನೆಗೆ, ನನ್ನನ್ನೇ ಈ ಸೃಷ್ಟಿಕರ್ತನನ್ನೇ ನಾಶಮಾಡಲು ಹೊರಟಿರುವೆ,

ಆದರೆ ಮೂರ್ಖ, ಅವಿವೇಕಿ ನೆನಪಿಟ್ಟುಕೋ,
ನನ್ನನ್ನು ದುರುಪಯೋಗ ಪಡಿಸಿಕೊಂಡು ನೀನು ನಿರ್ಮಿಸಿದ ಬಂದೂಕು ಬಾಂಬುಗಳೇ ನಿನ್ನನ್ನು ಕೊಲ್ಲುತ್ತವೆ,

ಎಲ್ಲಾ ಸುಖಗಳಿದ್ದರೂ ಅದನ್ನು ಅನುಭವಿಸಲಾಗದೆ ರಕ್ತ ಕಾರುವ ಸ್ಥಿತಿ ನಿನ್ನದಾಗುತ್ತದೆ,

ನಾಶವಾಗುವುದು ನೀನೇ ಹೊರತು ನಾನಲ್ಲ….

ನಾನು ಅಮರ…..ಶಾಶ್ವತ……

ಬೆನ್ನಿಗೂ ….ಹೃದಯಕ್ಕೂ …
ಒಟ್ಟಿಗೆ ಚೂರಿ ಹಾಕಿದ ದ್ರೋಹಿ ನೀನು……

ನಿನಗೆ ಕ್ಷಮೆ ಇಲ್ಲ………..
ಅನುಭವಿಸು……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

14 minutes ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

2 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

3 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

9 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

10 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

13 hours ago