Categories: ಲೇಖನ

ಮನುಜ ಮಾಡುತ್ತಿರುವ ತಪ್ಪಿಗೆ.. ದೇವರ ಪಶ್ಚಾತ್ತಾಪ……

ಅಯ್ಯಾ ಮನುಜ, ಎಷ್ಟೊಂದು ಅನ್ಯಾಯ ಮಾಡಿದೆ ನೀನು ನನಗೆ,

ಸೃಷ್ಟಿಸಿದ ನನಗೇ ನೀನು ದ್ರೋಹ ಬಗೆದೆಯಲ್ಲಾ,

ನೀನು ನಿಂತಿರುವ ನೆಲವೇ ನನ್ನದು,

ನೀನು ಉಸಿರಾಡುವ ಗಾಳಿ, ಕುಡಿಯುವ ನೀರು, ಅಷ್ಟೇ ಏಕೆ, ನಿನ್ನ ಇಡೀ ದೇಹ, ಆತ್ಮಗಳೇ ನನ್ನದು,

ನಿನ್ನ ಅನುಕೂಲಕ್ಕಾಗಿಯೇ ಮಳೆ, ಗಾಳಿ, ಚಳಿ, ಬಿಸಿಲನ್ನು ಸೃಷ್ಟಿಸಿದೆ,

ನಿನ್ನ ಸುಖಕ್ಕಾಗಿ ಗಿಡ ಮರ, ಪ್ರಾಣಿ ಪಕ್ಷಿಗಳನ್ನು ನೀಡಿದೆ,

ನಿನ್ನ ದೇಹದ ಪ್ರತಿ ಅಂಗಗಳನ್ನು ಅತ್ಯಂತ ಜಾಗರೂಕವಾಗಿ ರೂಪಿಸಿದೆ,

ನಿನ್ನ ಸಂತೋಷಕ್ಕಾಗಿ ಗಂಡು ಹೆಣ್ಣುಗಳೆಂಬ ಭಿನ್ನತೆ ಸೃಷ್ಟಿಸಿದ್ದೂ ನಾನೇ,

ನಿನ್ನ ಭಾವನೆ, ಆಕಾರ, ರೂಪಗಳನ್ನು ನಾನೇ ಕಷ್ಟಪಟ್ಟು ರಚಿಸಿದೆ,

ಹೋಗಲಿ ಮಜಾ ಮಾಡು ಎಂದು ನೂರು ವರ್ಷಗಳ ಆಯಸ್ಸು ನೀಡಿದೆ,

ಆದರೆ, ಪಾಪಿ ನೀನು ಮಾಡಿದ್ದಾದರೂ ಏನು,…

ನನ್ನನೇ ಬಗೆದು ನಿನಗೆ ಇಷ್ಟ ಬಂದಂತೆ ಬಂಗಲೆ ನಿರ್ಮಿಸಿಕೊಂಡೆ,

ನಡೆದಾಡಲು ಬಲಿಷ್ಠ ಕಾಲುಗಳನ್ನು ಕೊಟ್ಟಿದ್ದರೂ, ಸೋಮಾರಿಯಾಗಿ ಅಲೆದಾಡಲು ವಾಹನಗಳನ್ನು ನಿರ್ಮಿಸಿ ನನ್ನ ಉಸಿರನ್ನೇ ಮಲಿನಗೊಳಿಸಿದೆ,

ನಿನಗೋಸ್ಕರ ಎಷ್ಟೊಂದು ಬಗೆಯ ಹಣ್ಣು, ತರಕಾರಿ, ಸೊಪ್ಪು, ಬೇಳೆಗಳನ್ನು ಕೊಟ್ಟೆ. ಆದರೆ ದುರಾಸೆಯಿಂದ ರಸಾಯನಿಕಗಳೆಂಬ ವಿಷ ಬೆರೆಸಿ ನಿನಗಿಷ್ಟವಾದ ರುಚಿಗಾಗಿ ನನ್ನನ್ನು ಹಾಳು ಮಾಡಿದೆ.

ಸೃಷ್ಟಿಸುವಾಗ ಇತರೆ ಎಲ್ಲಾ ಜೀವಿಗಳನ್ನೂ ನಿರ್ಲಕ್ಷಿಸಿ ನಿನಗೆ ಮಾತ್ರ ಅತಿ ಹೆಚ್ಚು ಬುದ್ದಿ ನೀಡಿದೆ. ಏನೋ ಮನುಷ್ಯ ಪಾಪ ಚೆನ್ನಾಗಿರಲಿ ಎಂದು,

ಅದೇ ದೊಡ್ಡ ಸಮಸ್ಯೆಯಾಗಿ ಮುಂದೆ ಇಷ್ಟೊಂದು ಅನಾಹುತಕಾರಿಯಾಗುತ್ತದೆಂದು ಸೃಷ್ಟಿಸಿದ ನಾನೇ ಊಹಿಸದಾದೆ,

ಮನುಷ್ಯನ ಅಲೋಚನೆ ಇಷ್ಟೊಂದು ಕ್ರೂರವಾಗಿರುತ್ತದೆ ಎಂದು ಅಂದಾಜಿಸಲು ವಿಫಲನಾದೆ,

ಮನುಷ್ಯರನ್ನೆಲ್ಲಾ ಸಮನಾಗಿ ಸೃಷ್ಟಿಸಿದ ನನಗೇ ಮೋಸಮಾಡಿ ಬೇರೆ ಬೇರೆ ಧರ್ಮ ಜಾತಿ ಸೃಷ್ಟಿಸಿ ಮನಸ್ಸುಗಳನ್ನೇ ಒಡೆದೆ,

ಇಡೀ ಭೂ ಪ್ರದೇಶವನ್ನೇ ತುಂಡು ತುಂಡಾಗಿ ಬೌಂಡರಿ ನಿರ್ಮಿಸಿ ಇಭ್ಭಾಗ ಮಾಡಿ ನನ್ನ ಮಾನವನ್ನೇ ಹರಾಜಾಕಿದೆ,

ನನ್ನೆಲ್ಲಾ ಅದ್ಭುತ ಕ್ರಿಯೆಗಳನ್ನು ನಿನ್ನ ತೆವಲಿಗಾಗಿ ಉಪಯೋಗಿಸಿಕೊಂಡು ಕೊನೆಗೆ, ನನ್ನನ್ನೇ ಈ ಸೃಷ್ಟಿಕರ್ತನನ್ನೇ ನಾಶಮಾಡಲು ಹೊರಟಿರುವೆ,

ಆದರೆ ಮೂರ್ಖ, ಅವಿವೇಕಿ ನೆನಪಿಟ್ಟುಕೋ,
ನನ್ನನ್ನು ದುರುಪಯೋಗ ಪಡಿಸಿಕೊಂಡು ನೀನು ನಿರ್ಮಿಸಿದ ಬಂದೂಕು ಬಾಂಬುಗಳೇ ನಿನ್ನನ್ನು ಕೊಲ್ಲುತ್ತವೆ,

ಎಲ್ಲಾ ಸುಖಗಳಿದ್ದರೂ ಅದನ್ನು ಅನುಭವಿಸಲಾಗದೆ ರಕ್ತ ಕಾರುವ ಸ್ಥಿತಿ ನಿನ್ನದಾಗುತ್ತದೆ,

ನಾಶವಾಗುವುದು ನೀನೇ ಹೊರತು ನಾನಲ್ಲ….

ನಾನು ಅಮರ…..ಶಾಶ್ವತ……

ಬೆನ್ನಿಗೂ ….ಹೃದಯಕ್ಕೂ …
ಒಟ್ಟಿಗೆ ಚೂರಿ ಹಾಕಿದ ದ್ರೋಹಿ ನೀನು……

ನಿನಗೆ ಕ್ಷಮೆ ಇಲ್ಲ………..
ಅನುಭವಿಸು……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

4 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago