Categories: ಲೇಖನ

ಮನುಜ ಮಾಡುತ್ತಿರುವ ತಪ್ಪಿಗೆ.. ದೇವರ ಪಶ್ಚಾತ್ತಾಪ……

ಅಯ್ಯಾ ಮನುಜ, ಎಷ್ಟೊಂದು ಅನ್ಯಾಯ ಮಾಡಿದೆ ನೀನು ನನಗೆ,

ಸೃಷ್ಟಿಸಿದ ನನಗೇ ನೀನು ದ್ರೋಹ ಬಗೆದೆಯಲ್ಲಾ,

ನೀನು ನಿಂತಿರುವ ನೆಲವೇ ನನ್ನದು,

ನೀನು ಉಸಿರಾಡುವ ಗಾಳಿ, ಕುಡಿಯುವ ನೀರು, ಅಷ್ಟೇ ಏಕೆ, ನಿನ್ನ ಇಡೀ ದೇಹ, ಆತ್ಮಗಳೇ ನನ್ನದು,

ನಿನ್ನ ಅನುಕೂಲಕ್ಕಾಗಿಯೇ ಮಳೆ, ಗಾಳಿ, ಚಳಿ, ಬಿಸಿಲನ್ನು ಸೃಷ್ಟಿಸಿದೆ,

ನಿನ್ನ ಸುಖಕ್ಕಾಗಿ ಗಿಡ ಮರ, ಪ್ರಾಣಿ ಪಕ್ಷಿಗಳನ್ನು ನೀಡಿದೆ,

ನಿನ್ನ ದೇಹದ ಪ್ರತಿ ಅಂಗಗಳನ್ನು ಅತ್ಯಂತ ಜಾಗರೂಕವಾಗಿ ರೂಪಿಸಿದೆ,

ನಿನ್ನ ಸಂತೋಷಕ್ಕಾಗಿ ಗಂಡು ಹೆಣ್ಣುಗಳೆಂಬ ಭಿನ್ನತೆ ಸೃಷ್ಟಿಸಿದ್ದೂ ನಾನೇ,

ನಿನ್ನ ಭಾವನೆ, ಆಕಾರ, ರೂಪಗಳನ್ನು ನಾನೇ ಕಷ್ಟಪಟ್ಟು ರಚಿಸಿದೆ,

ಹೋಗಲಿ ಮಜಾ ಮಾಡು ಎಂದು ನೂರು ವರ್ಷಗಳ ಆಯಸ್ಸು ನೀಡಿದೆ,

ಆದರೆ, ಪಾಪಿ ನೀನು ಮಾಡಿದ್ದಾದರೂ ಏನು,…

ನನ್ನನೇ ಬಗೆದು ನಿನಗೆ ಇಷ್ಟ ಬಂದಂತೆ ಬಂಗಲೆ ನಿರ್ಮಿಸಿಕೊಂಡೆ,

ನಡೆದಾಡಲು ಬಲಿಷ್ಠ ಕಾಲುಗಳನ್ನು ಕೊಟ್ಟಿದ್ದರೂ, ಸೋಮಾರಿಯಾಗಿ ಅಲೆದಾಡಲು ವಾಹನಗಳನ್ನು ನಿರ್ಮಿಸಿ ನನ್ನ ಉಸಿರನ್ನೇ ಮಲಿನಗೊಳಿಸಿದೆ,

ನಿನಗೋಸ್ಕರ ಎಷ್ಟೊಂದು ಬಗೆಯ ಹಣ್ಣು, ತರಕಾರಿ, ಸೊಪ್ಪು, ಬೇಳೆಗಳನ್ನು ಕೊಟ್ಟೆ. ಆದರೆ ದುರಾಸೆಯಿಂದ ರಸಾಯನಿಕಗಳೆಂಬ ವಿಷ ಬೆರೆಸಿ ನಿನಗಿಷ್ಟವಾದ ರುಚಿಗಾಗಿ ನನ್ನನ್ನು ಹಾಳು ಮಾಡಿದೆ.

ಸೃಷ್ಟಿಸುವಾಗ ಇತರೆ ಎಲ್ಲಾ ಜೀವಿಗಳನ್ನೂ ನಿರ್ಲಕ್ಷಿಸಿ ನಿನಗೆ ಮಾತ್ರ ಅತಿ ಹೆಚ್ಚು ಬುದ್ದಿ ನೀಡಿದೆ. ಏನೋ ಮನುಷ್ಯ ಪಾಪ ಚೆನ್ನಾಗಿರಲಿ ಎಂದು,

ಅದೇ ದೊಡ್ಡ ಸಮಸ್ಯೆಯಾಗಿ ಮುಂದೆ ಇಷ್ಟೊಂದು ಅನಾಹುತಕಾರಿಯಾಗುತ್ತದೆಂದು ಸೃಷ್ಟಿಸಿದ ನಾನೇ ಊಹಿಸದಾದೆ,

ಮನುಷ್ಯನ ಅಲೋಚನೆ ಇಷ್ಟೊಂದು ಕ್ರೂರವಾಗಿರುತ್ತದೆ ಎಂದು ಅಂದಾಜಿಸಲು ವಿಫಲನಾದೆ,

ಮನುಷ್ಯರನ್ನೆಲ್ಲಾ ಸಮನಾಗಿ ಸೃಷ್ಟಿಸಿದ ನನಗೇ ಮೋಸಮಾಡಿ ಬೇರೆ ಬೇರೆ ಧರ್ಮ ಜಾತಿ ಸೃಷ್ಟಿಸಿ ಮನಸ್ಸುಗಳನ್ನೇ ಒಡೆದೆ,

ಇಡೀ ಭೂ ಪ್ರದೇಶವನ್ನೇ ತುಂಡು ತುಂಡಾಗಿ ಬೌಂಡರಿ ನಿರ್ಮಿಸಿ ಇಭ್ಭಾಗ ಮಾಡಿ ನನ್ನ ಮಾನವನ್ನೇ ಹರಾಜಾಕಿದೆ,

ನನ್ನೆಲ್ಲಾ ಅದ್ಭುತ ಕ್ರಿಯೆಗಳನ್ನು ನಿನ್ನ ತೆವಲಿಗಾಗಿ ಉಪಯೋಗಿಸಿಕೊಂಡು ಕೊನೆಗೆ, ನನ್ನನ್ನೇ ಈ ಸೃಷ್ಟಿಕರ್ತನನ್ನೇ ನಾಶಮಾಡಲು ಹೊರಟಿರುವೆ,

ಆದರೆ ಮೂರ್ಖ, ಅವಿವೇಕಿ ನೆನಪಿಟ್ಟುಕೋ,
ನನ್ನನ್ನು ದುರುಪಯೋಗ ಪಡಿಸಿಕೊಂಡು ನೀನು ನಿರ್ಮಿಸಿದ ಬಂದೂಕು ಬಾಂಬುಗಳೇ ನಿನ್ನನ್ನು ಕೊಲ್ಲುತ್ತವೆ,

ಎಲ್ಲಾ ಸುಖಗಳಿದ್ದರೂ ಅದನ್ನು ಅನುಭವಿಸಲಾಗದೆ ರಕ್ತ ಕಾರುವ ಸ್ಥಿತಿ ನಿನ್ನದಾಗುತ್ತದೆ,

ನಾಶವಾಗುವುದು ನೀನೇ ಹೊರತು ನಾನಲ್ಲ….

ನಾನು ಅಮರ…..ಶಾಶ್ವತ……

ಬೆನ್ನಿಗೂ ….ಹೃದಯಕ್ಕೂ …
ಒಟ್ಟಿಗೆ ಚೂರಿ ಹಾಕಿದ ದ್ರೋಹಿ ನೀನು……

ನಿನಗೆ ಕ್ಷಮೆ ಇಲ್ಲ………..
ಅನುಭವಿಸು……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

6 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

13 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

14 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago