ಅಯ್ಯಾ ಮನುಜ, ಎಷ್ಟೊಂದು ಅನ್ಯಾಯ ಮಾಡಿದೆ ನೀನು ನನಗೆ,
ಸೃಷ್ಟಿಸಿದ ನನಗೇ ನೀನು ದ್ರೋಹ ಬಗೆದೆಯಲ್ಲಾ,
ನೀನು ನಿಂತಿರುವ ನೆಲವೇ ನನ್ನದು,
ನೀನು ಉಸಿರಾಡುವ ಗಾಳಿ, ಕುಡಿಯುವ ನೀರು, ಅಷ್ಟೇ ಏಕೆ, ನಿನ್ನ ಇಡೀ ದೇಹ, ಆತ್ಮಗಳೇ ನನ್ನದು,
ನಿನ್ನ ಅನುಕೂಲಕ್ಕಾಗಿಯೇ ಮಳೆ, ಗಾಳಿ, ಚಳಿ, ಬಿಸಿಲನ್ನು ಸೃಷ್ಟಿಸಿದೆ,
ನಿನ್ನ ಸುಖಕ್ಕಾಗಿ ಗಿಡ ಮರ, ಪ್ರಾಣಿ ಪಕ್ಷಿಗಳನ್ನು ನೀಡಿದೆ,
ನಿನ್ನ ದೇಹದ ಪ್ರತಿ ಅಂಗಗಳನ್ನು ಅತ್ಯಂತ ಜಾಗರೂಕವಾಗಿ ರೂಪಿಸಿದೆ,
ನಿನ್ನ ಸಂತೋಷಕ್ಕಾಗಿ ಗಂಡು ಹೆಣ್ಣುಗಳೆಂಬ ಭಿನ್ನತೆ ಸೃಷ್ಟಿಸಿದ್ದೂ ನಾನೇ,
ನಿನ್ನ ಭಾವನೆ, ಆಕಾರ, ರೂಪಗಳನ್ನು ನಾನೇ ಕಷ್ಟಪಟ್ಟು ರಚಿಸಿದೆ,
ಹೋಗಲಿ ಮಜಾ ಮಾಡು ಎಂದು ನೂರು ವರ್ಷಗಳ ಆಯಸ್ಸು ನೀಡಿದೆ,
ಆದರೆ, ಪಾಪಿ ನೀನು ಮಾಡಿದ್ದಾದರೂ ಏನು,…
ನನ್ನನೇ ಬಗೆದು ನಿನಗೆ ಇಷ್ಟ ಬಂದಂತೆ ಬಂಗಲೆ ನಿರ್ಮಿಸಿಕೊಂಡೆ,
ನಡೆದಾಡಲು ಬಲಿಷ್ಠ ಕಾಲುಗಳನ್ನು ಕೊಟ್ಟಿದ್ದರೂ, ಸೋಮಾರಿಯಾಗಿ ಅಲೆದಾಡಲು ವಾಹನಗಳನ್ನು ನಿರ್ಮಿಸಿ ನನ್ನ ಉಸಿರನ್ನೇ ಮಲಿನಗೊಳಿಸಿದೆ,
ನಿನಗೋಸ್ಕರ ಎಷ್ಟೊಂದು ಬಗೆಯ ಹಣ್ಣು, ತರಕಾರಿ, ಸೊಪ್ಪು, ಬೇಳೆಗಳನ್ನು ಕೊಟ್ಟೆ. ಆದರೆ ದುರಾಸೆಯಿಂದ ರಸಾಯನಿಕಗಳೆಂಬ ವಿಷ ಬೆರೆಸಿ ನಿನಗಿಷ್ಟವಾದ ರುಚಿಗಾಗಿ ನನ್ನನ್ನು ಹಾಳು ಮಾಡಿದೆ.
ಸೃಷ್ಟಿಸುವಾಗ ಇತರೆ ಎಲ್ಲಾ ಜೀವಿಗಳನ್ನೂ ನಿರ್ಲಕ್ಷಿಸಿ ನಿನಗೆ ಮಾತ್ರ ಅತಿ ಹೆಚ್ಚು ಬುದ್ದಿ ನೀಡಿದೆ. ಏನೋ ಮನುಷ್ಯ ಪಾಪ ಚೆನ್ನಾಗಿರಲಿ ಎಂದು,
ಅದೇ ದೊಡ್ಡ ಸಮಸ್ಯೆಯಾಗಿ ಮುಂದೆ ಇಷ್ಟೊಂದು ಅನಾಹುತಕಾರಿಯಾಗುತ್ತದೆಂದು ಸೃಷ್ಟಿಸಿದ ನಾನೇ ಊಹಿಸದಾದೆ,
ಮನುಷ್ಯನ ಅಲೋಚನೆ ಇಷ್ಟೊಂದು ಕ್ರೂರವಾಗಿರುತ್ತದೆ ಎಂದು ಅಂದಾಜಿಸಲು ವಿಫಲನಾದೆ,
ಮನುಷ್ಯರನ್ನೆಲ್ಲಾ ಸಮನಾಗಿ ಸೃಷ್ಟಿಸಿದ ನನಗೇ ಮೋಸಮಾಡಿ ಬೇರೆ ಬೇರೆ ಧರ್ಮ ಜಾತಿ ಸೃಷ್ಟಿಸಿ ಮನಸ್ಸುಗಳನ್ನೇ ಒಡೆದೆ,
ಇಡೀ ಭೂ ಪ್ರದೇಶವನ್ನೇ ತುಂಡು ತುಂಡಾಗಿ ಬೌಂಡರಿ ನಿರ್ಮಿಸಿ ಇಭ್ಭಾಗ ಮಾಡಿ ನನ್ನ ಮಾನವನ್ನೇ ಹರಾಜಾಕಿದೆ,
ನನ್ನೆಲ್ಲಾ ಅದ್ಭುತ ಕ್ರಿಯೆಗಳನ್ನು ನಿನ್ನ ತೆವಲಿಗಾಗಿ ಉಪಯೋಗಿಸಿಕೊಂಡು ಕೊನೆಗೆ, ನನ್ನನ್ನೇ ಈ ಸೃಷ್ಟಿಕರ್ತನನ್ನೇ ನಾಶಮಾಡಲು ಹೊರಟಿರುವೆ,
ಆದರೆ ಮೂರ್ಖ, ಅವಿವೇಕಿ ನೆನಪಿಟ್ಟುಕೋ,
ನನ್ನನ್ನು ದುರುಪಯೋಗ ಪಡಿಸಿಕೊಂಡು ನೀನು ನಿರ್ಮಿಸಿದ ಬಂದೂಕು ಬಾಂಬುಗಳೇ ನಿನ್ನನ್ನು ಕೊಲ್ಲುತ್ತವೆ,
ಎಲ್ಲಾ ಸುಖಗಳಿದ್ದರೂ ಅದನ್ನು ಅನುಭವಿಸಲಾಗದೆ ರಕ್ತ ಕಾರುವ ಸ್ಥಿತಿ ನಿನ್ನದಾಗುತ್ತದೆ,
ನಾಶವಾಗುವುದು ನೀನೇ ಹೊರತು ನಾನಲ್ಲ….
ನಾನು ಅಮರ…..ಶಾಶ್ವತ……
ಬೆನ್ನಿಗೂ ….ಹೃದಯಕ್ಕೂ …
ಒಟ್ಟಿಗೆ ಚೂರಿ ಹಾಕಿದ ದ್ರೋಹಿ ನೀನು……
ನಿನಗೆ ಕ್ಷಮೆ ಇಲ್ಲ………..
ಅನುಭವಿಸು……
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ- ವಿವೇಕಾನಂದ. ಎಚ್.ಕೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…