Categories: ಲೇಖನ

ಮನುಜ ಮಾಡುತ್ತಿರುವ ತಪ್ಪಿಗೆ.. ದೇವರ ಪಶ್ಚಾತ್ತಾಪ……

ಅಯ್ಯಾ ಮನುಜ, ಎಷ್ಟೊಂದು ಅನ್ಯಾಯ ಮಾಡಿದೆ ನೀನು ನನಗೆ,

ಸೃಷ್ಟಿಸಿದ ನನಗೇ ನೀನು ದ್ರೋಹ ಬಗೆದೆಯಲ್ಲಾ,

ನೀನು ನಿಂತಿರುವ ನೆಲವೇ ನನ್ನದು,

ನೀನು ಉಸಿರಾಡುವ ಗಾಳಿ, ಕುಡಿಯುವ ನೀರು, ಅಷ್ಟೇ ಏಕೆ, ನಿನ್ನ ಇಡೀ ದೇಹ, ಆತ್ಮಗಳೇ ನನ್ನದು,

ನಿನ್ನ ಅನುಕೂಲಕ್ಕಾಗಿಯೇ ಮಳೆ, ಗಾಳಿ, ಚಳಿ, ಬಿಸಿಲನ್ನು ಸೃಷ್ಟಿಸಿದೆ,

ನಿನ್ನ ಸುಖಕ್ಕಾಗಿ ಗಿಡ ಮರ, ಪ್ರಾಣಿ ಪಕ್ಷಿಗಳನ್ನು ನೀಡಿದೆ,

ನಿನ್ನ ದೇಹದ ಪ್ರತಿ ಅಂಗಗಳನ್ನು ಅತ್ಯಂತ ಜಾಗರೂಕವಾಗಿ ರೂಪಿಸಿದೆ,

ನಿನ್ನ ಸಂತೋಷಕ್ಕಾಗಿ ಗಂಡು ಹೆಣ್ಣುಗಳೆಂಬ ಭಿನ್ನತೆ ಸೃಷ್ಟಿಸಿದ್ದೂ ನಾನೇ,

ನಿನ್ನ ಭಾವನೆ, ಆಕಾರ, ರೂಪಗಳನ್ನು ನಾನೇ ಕಷ್ಟಪಟ್ಟು ರಚಿಸಿದೆ,

ಹೋಗಲಿ ಮಜಾ ಮಾಡು ಎಂದು ನೂರು ವರ್ಷಗಳ ಆಯಸ್ಸು ನೀಡಿದೆ,

ಆದರೆ, ಪಾಪಿ ನೀನು ಮಾಡಿದ್ದಾದರೂ ಏನು,…

ನನ್ನನೇ ಬಗೆದು ನಿನಗೆ ಇಷ್ಟ ಬಂದಂತೆ ಬಂಗಲೆ ನಿರ್ಮಿಸಿಕೊಂಡೆ,

ನಡೆದಾಡಲು ಬಲಿಷ್ಠ ಕಾಲುಗಳನ್ನು ಕೊಟ್ಟಿದ್ದರೂ, ಸೋಮಾರಿಯಾಗಿ ಅಲೆದಾಡಲು ವಾಹನಗಳನ್ನು ನಿರ್ಮಿಸಿ ನನ್ನ ಉಸಿರನ್ನೇ ಮಲಿನಗೊಳಿಸಿದೆ,

ನಿನಗೋಸ್ಕರ ಎಷ್ಟೊಂದು ಬಗೆಯ ಹಣ್ಣು, ತರಕಾರಿ, ಸೊಪ್ಪು, ಬೇಳೆಗಳನ್ನು ಕೊಟ್ಟೆ. ಆದರೆ ದುರಾಸೆಯಿಂದ ರಸಾಯನಿಕಗಳೆಂಬ ವಿಷ ಬೆರೆಸಿ ನಿನಗಿಷ್ಟವಾದ ರುಚಿಗಾಗಿ ನನ್ನನ್ನು ಹಾಳು ಮಾಡಿದೆ.

ಸೃಷ್ಟಿಸುವಾಗ ಇತರೆ ಎಲ್ಲಾ ಜೀವಿಗಳನ್ನೂ ನಿರ್ಲಕ್ಷಿಸಿ ನಿನಗೆ ಮಾತ್ರ ಅತಿ ಹೆಚ್ಚು ಬುದ್ದಿ ನೀಡಿದೆ. ಏನೋ ಮನುಷ್ಯ ಪಾಪ ಚೆನ್ನಾಗಿರಲಿ ಎಂದು,

ಅದೇ ದೊಡ್ಡ ಸಮಸ್ಯೆಯಾಗಿ ಮುಂದೆ ಇಷ್ಟೊಂದು ಅನಾಹುತಕಾರಿಯಾಗುತ್ತದೆಂದು ಸೃಷ್ಟಿಸಿದ ನಾನೇ ಊಹಿಸದಾದೆ,

ಮನುಷ್ಯನ ಅಲೋಚನೆ ಇಷ್ಟೊಂದು ಕ್ರೂರವಾಗಿರುತ್ತದೆ ಎಂದು ಅಂದಾಜಿಸಲು ವಿಫಲನಾದೆ,

ಮನುಷ್ಯರನ್ನೆಲ್ಲಾ ಸಮನಾಗಿ ಸೃಷ್ಟಿಸಿದ ನನಗೇ ಮೋಸಮಾಡಿ ಬೇರೆ ಬೇರೆ ಧರ್ಮ ಜಾತಿ ಸೃಷ್ಟಿಸಿ ಮನಸ್ಸುಗಳನ್ನೇ ಒಡೆದೆ,

ಇಡೀ ಭೂ ಪ್ರದೇಶವನ್ನೇ ತುಂಡು ತುಂಡಾಗಿ ಬೌಂಡರಿ ನಿರ್ಮಿಸಿ ಇಭ್ಭಾಗ ಮಾಡಿ ನನ್ನ ಮಾನವನ್ನೇ ಹರಾಜಾಕಿದೆ,

ನನ್ನೆಲ್ಲಾ ಅದ್ಭುತ ಕ್ರಿಯೆಗಳನ್ನು ನಿನ್ನ ತೆವಲಿಗಾಗಿ ಉಪಯೋಗಿಸಿಕೊಂಡು ಕೊನೆಗೆ, ನನ್ನನ್ನೇ ಈ ಸೃಷ್ಟಿಕರ್ತನನ್ನೇ ನಾಶಮಾಡಲು ಹೊರಟಿರುವೆ,

ಆದರೆ ಮೂರ್ಖ, ಅವಿವೇಕಿ ನೆನಪಿಟ್ಟುಕೋ,
ನನ್ನನ್ನು ದುರುಪಯೋಗ ಪಡಿಸಿಕೊಂಡು ನೀನು ನಿರ್ಮಿಸಿದ ಬಂದೂಕು ಬಾಂಬುಗಳೇ ನಿನ್ನನ್ನು ಕೊಲ್ಲುತ್ತವೆ,

ಎಲ್ಲಾ ಸುಖಗಳಿದ್ದರೂ ಅದನ್ನು ಅನುಭವಿಸಲಾಗದೆ ರಕ್ತ ಕಾರುವ ಸ್ಥಿತಿ ನಿನ್ನದಾಗುತ್ತದೆ,

ನಾಶವಾಗುವುದು ನೀನೇ ಹೊರತು ನಾನಲ್ಲ….

ನಾನು ಅಮರ…..ಶಾಶ್ವತ……

ಬೆನ್ನಿಗೂ ….ಹೃದಯಕ್ಕೂ …
ಒಟ್ಟಿಗೆ ಚೂರಿ ಹಾಕಿದ ದ್ರೋಹಿ ನೀನು……

ನಿನಗೆ ಕ್ಷಮೆ ಇಲ್ಲ………..
ಅನುಭವಿಸು……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

14 minutes ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

2 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

3 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

4 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

5 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

11 hours ago