Categories: ಲೇಖನ

ಮನುಜ ಮಾಡುತ್ತಿರುವ ತಪ್ಪಿಗೆ.. ದೇವರ ಪಶ್ಚಾತ್ತಾಪ……

ಅಯ್ಯಾ ಮನುಜ, ಎಷ್ಟೊಂದು ಅನ್ಯಾಯ ಮಾಡಿದೆ ನೀನು ನನಗೆ,

ಸೃಷ್ಟಿಸಿದ ನನಗೇ ನೀನು ದ್ರೋಹ ಬಗೆದೆಯಲ್ಲಾ,

ನೀನು ನಿಂತಿರುವ ನೆಲವೇ ನನ್ನದು,

ನೀನು ಉಸಿರಾಡುವ ಗಾಳಿ, ಕುಡಿಯುವ ನೀರು, ಅಷ್ಟೇ ಏಕೆ, ನಿನ್ನ ಇಡೀ ದೇಹ, ಆತ್ಮಗಳೇ ನನ್ನದು,

ನಿನ್ನ ಅನುಕೂಲಕ್ಕಾಗಿಯೇ ಮಳೆ, ಗಾಳಿ, ಚಳಿ, ಬಿಸಿಲನ್ನು ಸೃಷ್ಟಿಸಿದೆ,

ನಿನ್ನ ಸುಖಕ್ಕಾಗಿ ಗಿಡ ಮರ, ಪ್ರಾಣಿ ಪಕ್ಷಿಗಳನ್ನು ನೀಡಿದೆ,

ನಿನ್ನ ದೇಹದ ಪ್ರತಿ ಅಂಗಗಳನ್ನು ಅತ್ಯಂತ ಜಾಗರೂಕವಾಗಿ ರೂಪಿಸಿದೆ,

ನಿನ್ನ ಸಂತೋಷಕ್ಕಾಗಿ ಗಂಡು ಹೆಣ್ಣುಗಳೆಂಬ ಭಿನ್ನತೆ ಸೃಷ್ಟಿಸಿದ್ದೂ ನಾನೇ,

ನಿನ್ನ ಭಾವನೆ, ಆಕಾರ, ರೂಪಗಳನ್ನು ನಾನೇ ಕಷ್ಟಪಟ್ಟು ರಚಿಸಿದೆ,

ಹೋಗಲಿ ಮಜಾ ಮಾಡು ಎಂದು ನೂರು ವರ್ಷಗಳ ಆಯಸ್ಸು ನೀಡಿದೆ,

ಆದರೆ, ಪಾಪಿ ನೀನು ಮಾಡಿದ್ದಾದರೂ ಏನು,…

ನನ್ನನೇ ಬಗೆದು ನಿನಗೆ ಇಷ್ಟ ಬಂದಂತೆ ಬಂಗಲೆ ನಿರ್ಮಿಸಿಕೊಂಡೆ,

ನಡೆದಾಡಲು ಬಲಿಷ್ಠ ಕಾಲುಗಳನ್ನು ಕೊಟ್ಟಿದ್ದರೂ, ಸೋಮಾರಿಯಾಗಿ ಅಲೆದಾಡಲು ವಾಹನಗಳನ್ನು ನಿರ್ಮಿಸಿ ನನ್ನ ಉಸಿರನ್ನೇ ಮಲಿನಗೊಳಿಸಿದೆ,

ನಿನಗೋಸ್ಕರ ಎಷ್ಟೊಂದು ಬಗೆಯ ಹಣ್ಣು, ತರಕಾರಿ, ಸೊಪ್ಪು, ಬೇಳೆಗಳನ್ನು ಕೊಟ್ಟೆ. ಆದರೆ ದುರಾಸೆಯಿಂದ ರಸಾಯನಿಕಗಳೆಂಬ ವಿಷ ಬೆರೆಸಿ ನಿನಗಿಷ್ಟವಾದ ರುಚಿಗಾಗಿ ನನ್ನನ್ನು ಹಾಳು ಮಾಡಿದೆ.

ಸೃಷ್ಟಿಸುವಾಗ ಇತರೆ ಎಲ್ಲಾ ಜೀವಿಗಳನ್ನೂ ನಿರ್ಲಕ್ಷಿಸಿ ನಿನಗೆ ಮಾತ್ರ ಅತಿ ಹೆಚ್ಚು ಬುದ್ದಿ ನೀಡಿದೆ. ಏನೋ ಮನುಷ್ಯ ಪಾಪ ಚೆನ್ನಾಗಿರಲಿ ಎಂದು,

ಅದೇ ದೊಡ್ಡ ಸಮಸ್ಯೆಯಾಗಿ ಮುಂದೆ ಇಷ್ಟೊಂದು ಅನಾಹುತಕಾರಿಯಾಗುತ್ತದೆಂದು ಸೃಷ್ಟಿಸಿದ ನಾನೇ ಊಹಿಸದಾದೆ,

ಮನುಷ್ಯನ ಅಲೋಚನೆ ಇಷ್ಟೊಂದು ಕ್ರೂರವಾಗಿರುತ್ತದೆ ಎಂದು ಅಂದಾಜಿಸಲು ವಿಫಲನಾದೆ,

ಮನುಷ್ಯರನ್ನೆಲ್ಲಾ ಸಮನಾಗಿ ಸೃಷ್ಟಿಸಿದ ನನಗೇ ಮೋಸಮಾಡಿ ಬೇರೆ ಬೇರೆ ಧರ್ಮ ಜಾತಿ ಸೃಷ್ಟಿಸಿ ಮನಸ್ಸುಗಳನ್ನೇ ಒಡೆದೆ,

ಇಡೀ ಭೂ ಪ್ರದೇಶವನ್ನೇ ತುಂಡು ತುಂಡಾಗಿ ಬೌಂಡರಿ ನಿರ್ಮಿಸಿ ಇಭ್ಭಾಗ ಮಾಡಿ ನನ್ನ ಮಾನವನ್ನೇ ಹರಾಜಾಕಿದೆ,

ನನ್ನೆಲ್ಲಾ ಅದ್ಭುತ ಕ್ರಿಯೆಗಳನ್ನು ನಿನ್ನ ತೆವಲಿಗಾಗಿ ಉಪಯೋಗಿಸಿಕೊಂಡು ಕೊನೆಗೆ, ನನ್ನನ್ನೇ ಈ ಸೃಷ್ಟಿಕರ್ತನನ್ನೇ ನಾಶಮಾಡಲು ಹೊರಟಿರುವೆ,

ಆದರೆ ಮೂರ್ಖ, ಅವಿವೇಕಿ ನೆನಪಿಟ್ಟುಕೋ,
ನನ್ನನ್ನು ದುರುಪಯೋಗ ಪಡಿಸಿಕೊಂಡು ನೀನು ನಿರ್ಮಿಸಿದ ಬಂದೂಕು ಬಾಂಬುಗಳೇ ನಿನ್ನನ್ನು ಕೊಲ್ಲುತ್ತವೆ,

ಎಲ್ಲಾ ಸುಖಗಳಿದ್ದರೂ ಅದನ್ನು ಅನುಭವಿಸಲಾಗದೆ ರಕ್ತ ಕಾರುವ ಸ್ಥಿತಿ ನಿನ್ನದಾಗುತ್ತದೆ,

ನಾಶವಾಗುವುದು ನೀನೇ ಹೊರತು ನಾನಲ್ಲ….

ನಾನು ಅಮರ…..ಶಾಶ್ವತ……

ಬೆನ್ನಿಗೂ ….ಹೃದಯಕ್ಕೂ …
ಒಟ್ಟಿಗೆ ಚೂರಿ ಹಾಕಿದ ದ್ರೋಹಿ ನೀನು……

ನಿನಗೆ ಕ್ಷಮೆ ಇಲ್ಲ………..
ಅನುಭವಿಸು……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

7 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

8 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

16 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago