ಮನುಷ್ಯನ ನೆಮ್ಮದಿ ಬದುಕಿಗೆ ಸಾಹಿತ್ಯ, ಸಂಗೀತ ಮತ್ತು ಪರಿಸರ ಜೀವನ ಶೈಲಿ ಸಹಕಾರಿ- ದರ್ಗಾಜೋಗಿಹಳ್ಳಿ ಮಲ್ಲೇಶ್

 

ಮನುಷ್ಯನ ನೆಮ್ಮದಿ ಬದುಕಿಗೆ ಸಾಹಿತ್ಯ, ಸಂಗೀತ  ಮತ್ತು  ಪರಿಸರ ಜೀವನ ಶೈಲಿ ಸಹಕಾರಿ ಆಗುತ್ತವೆ. ನಮ್ಮ ಜನಪದರು ರೂಪಿಸಿಗೊಂಡಿದ್ದ ಸಂಸ್ಕೃತಿಯೇ ಅವರ  ಜೀವನ ಮೌಲ್ಯಗಳಾಗಿದ್ದವು ಎಂದು ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್ ತಿಳಿಸಿದರು.

ನಗರದ ಗ್ರಾಮೀಣ ಅಭ್ಯುದಯ ಸೇವಾ ಕೇಂದ್ರದಲ್ಲಿ  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯ ನಾಗರೀಕರಿಗಾಗಿ ಸಾಹಿತ್ಯ ಮತ್ತು ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಶ್ರೀಮಂತವಾಗಿ ಉಳಿದು ಬೆಳೆಯಲು ನಮ್ಮ ಹಿರಿಯರ ಕೊಡುಗೆ ಅಪಾರವಾಗಿದೆ. ಬಹು ಸಂಸ್ಕೃತಿಯ ಜನರು ಸಾಮರಸ್ಯದಿಂದ ಬದುಕಲು ಸಹ ಹಿರಿಯರು ನಮಗೆ ದಾರಿದೀಪವಾಗಿದ್ದಾರೆ.‌ ಸರಳತೆ ಮತ್ತು ಸಜ್ಜನಿಕೆ‌ ಬದುಕಿನ ಮಹತ್ವವನ್ನು ನಮ್ಮ ದಾರ್ಶನಿಕರು ಜನಸಾಮಾನ್ಯರಿಗೂ ಮನಮುಟ್ಟುವಂತೆ ತಿಳಿಸಿದ್ದಾರೆ ಎಂದರು.

ಓದು ಬರಹ ಬಾರದಿದ್ದರೂ ನಮ್ಮ ಜನಪದರು  ಉತ್ತಮವಾದ ಜನಪದ ಸಾಹಿತ್ಯವನ್ನು ಸೃಷ್ಟಿ ಮಾಡಿದರು.  ಜನಪದರಿಂದ ನಮ್ಮ ಕನ್ನಡ ಭಾಷೆ ಮತ್ತು ಸಂಸ್ಕೃತಿ ಉನ್ನತ ಸ್ಥಾನವನ್ನು ಪಡೆಯಿತು. ಕನ್ನಡ ನಾಡು, ನುಡಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬ ಕನ್ನಡಿಗರು ಇಂದು  ಪ್ರಾಮಾಣಿಕವಾಗಿ ಶ್ರಮಿಸಬೇಕಾಗಿದೆ. ಪರಿಸರ ಸಂರಕ್ಷಣೆ ನಮ್ಮ ಹೊಣೆ ಆಗಬೇಕಾಗಿದೆ. ಜನರಲ್ಲಿ ಬದ್ದತೆ ಮತ್ತು ಶಿಸ್ತುಬದ್ಧ ಜೀವನ ಶೈಲಿ ಉತ್ತಮ ಸಮಾಜದ ನಿರ್ಮಾಣಕ್ಕೆ ಸಹಕಾರಿ ಆಗಲಿದೆ ಎಂದರು.

ಹಿರಿಯ ನಾಗರೀಕರ ಹಗಲು ಯೋಗಕ್ಷಮ ಕೇಂದ್ರದ ಮೇಲ್ವಿಚಾರಕಿ ಸೌಭಾಗ್ಯ ಮಾತನಾಡಿ, ನಮ್ಮ ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಮತ್ತು ಗ್ರಾಮಾಂತರ  ಹಿರಿಯ ನಾಗರೀಕರು ಮತ್ತು ವಿಕಲಚೇತನರಿಗಾಗಿ ಹಗಲು ಯೋಗ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಹಿರಿಯ ನಾಗರೀಕರಿಗೆ ಧ್ಯಾನ ಮತ್ತು ಯೋಗ, ಸಮಾಲೋಚನೆ, ಸಾಂಸ್ಕೃತಿಕ ಚಟುವಟಿಕೆ, ಉತ್ತಮ ಹವ್ಯಾಸಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಹಿರಿಯ ನಾಗರೀಕರು ಹಗಲು ಯೋಗಕ್ಷೇಮ ಕೇಂದ್ರದ ಸದುಪಯೋಗ ಪಡೆದುಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ಹಿರಿಯ ನಾಗರೀಕರ ಹಗಲು ಯೋಗಕ್ಷೇಮ ಕೇಂದ್ರದ ಸಮಾಜ ವಿಷಯ  ಪರೀಕ್ಷಕರುಗಳಾದ ಎಲ್.ಎನ್. ಮೋಹನ್, ಗೀತಾಲಕ್ಷ್ಮಿ, ಹೇಮಲತಾ, ಅಭಿಷೇಕ್ ಮತ್ತು ಹಿರಿಯ ನಾಗರೀಕರು ಭಾಗವಹಿಸಿದ್ದರು. ‌

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

2 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

3 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

11 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago