ಮನುಷ್ಯನ ನೆಮ್ಮದಿ ಬದುಕಿಗೆ ಸಾಹಿತ್ಯ, ಸಂಗೀತ ಮತ್ತು ಪರಿಸರ ಜೀವನ ಶೈಲಿ ಸಹಕಾರಿ- ದರ್ಗಾಜೋಗಿಹಳ್ಳಿ ಮಲ್ಲೇಶ್

 

ಮನುಷ್ಯನ ನೆಮ್ಮದಿ ಬದುಕಿಗೆ ಸಾಹಿತ್ಯ, ಸಂಗೀತ  ಮತ್ತು  ಪರಿಸರ ಜೀವನ ಶೈಲಿ ಸಹಕಾರಿ ಆಗುತ್ತವೆ. ನಮ್ಮ ಜನಪದರು ರೂಪಿಸಿಗೊಂಡಿದ್ದ ಸಂಸ್ಕೃತಿಯೇ ಅವರ  ಜೀವನ ಮೌಲ್ಯಗಳಾಗಿದ್ದವು ಎಂದು ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್ ತಿಳಿಸಿದರು.

ನಗರದ ಗ್ರಾಮೀಣ ಅಭ್ಯುದಯ ಸೇವಾ ಕೇಂದ್ರದಲ್ಲಿ  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯ ನಾಗರೀಕರಿಗಾಗಿ ಸಾಹಿತ್ಯ ಮತ್ತು ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಶ್ರೀಮಂತವಾಗಿ ಉಳಿದು ಬೆಳೆಯಲು ನಮ್ಮ ಹಿರಿಯರ ಕೊಡುಗೆ ಅಪಾರವಾಗಿದೆ. ಬಹು ಸಂಸ್ಕೃತಿಯ ಜನರು ಸಾಮರಸ್ಯದಿಂದ ಬದುಕಲು ಸಹ ಹಿರಿಯರು ನಮಗೆ ದಾರಿದೀಪವಾಗಿದ್ದಾರೆ.‌ ಸರಳತೆ ಮತ್ತು ಸಜ್ಜನಿಕೆ‌ ಬದುಕಿನ ಮಹತ್ವವನ್ನು ನಮ್ಮ ದಾರ್ಶನಿಕರು ಜನಸಾಮಾನ್ಯರಿಗೂ ಮನಮುಟ್ಟುವಂತೆ ತಿಳಿಸಿದ್ದಾರೆ ಎಂದರು.

ಓದು ಬರಹ ಬಾರದಿದ್ದರೂ ನಮ್ಮ ಜನಪದರು  ಉತ್ತಮವಾದ ಜನಪದ ಸಾಹಿತ್ಯವನ್ನು ಸೃಷ್ಟಿ ಮಾಡಿದರು.  ಜನಪದರಿಂದ ನಮ್ಮ ಕನ್ನಡ ಭಾಷೆ ಮತ್ತು ಸಂಸ್ಕೃತಿ ಉನ್ನತ ಸ್ಥಾನವನ್ನು ಪಡೆಯಿತು. ಕನ್ನಡ ನಾಡು, ನುಡಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬ ಕನ್ನಡಿಗರು ಇಂದು  ಪ್ರಾಮಾಣಿಕವಾಗಿ ಶ್ರಮಿಸಬೇಕಾಗಿದೆ. ಪರಿಸರ ಸಂರಕ್ಷಣೆ ನಮ್ಮ ಹೊಣೆ ಆಗಬೇಕಾಗಿದೆ. ಜನರಲ್ಲಿ ಬದ್ದತೆ ಮತ್ತು ಶಿಸ್ತುಬದ್ಧ ಜೀವನ ಶೈಲಿ ಉತ್ತಮ ಸಮಾಜದ ನಿರ್ಮಾಣಕ್ಕೆ ಸಹಕಾರಿ ಆಗಲಿದೆ ಎಂದರು.

ಹಿರಿಯ ನಾಗರೀಕರ ಹಗಲು ಯೋಗಕ್ಷಮ ಕೇಂದ್ರದ ಮೇಲ್ವಿಚಾರಕಿ ಸೌಭಾಗ್ಯ ಮಾತನಾಡಿ, ನಮ್ಮ ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಮತ್ತು ಗ್ರಾಮಾಂತರ  ಹಿರಿಯ ನಾಗರೀಕರು ಮತ್ತು ವಿಕಲಚೇತನರಿಗಾಗಿ ಹಗಲು ಯೋಗ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಹಿರಿಯ ನಾಗರೀಕರಿಗೆ ಧ್ಯಾನ ಮತ್ತು ಯೋಗ, ಸಮಾಲೋಚನೆ, ಸಾಂಸ್ಕೃತಿಕ ಚಟುವಟಿಕೆ, ಉತ್ತಮ ಹವ್ಯಾಸಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಹಿರಿಯ ನಾಗರೀಕರು ಹಗಲು ಯೋಗಕ್ಷೇಮ ಕೇಂದ್ರದ ಸದುಪಯೋಗ ಪಡೆದುಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ಹಿರಿಯ ನಾಗರೀಕರ ಹಗಲು ಯೋಗಕ್ಷೇಮ ಕೇಂದ್ರದ ಸಮಾಜ ವಿಷಯ  ಪರೀಕ್ಷಕರುಗಳಾದ ಎಲ್.ಎನ್. ಮೋಹನ್, ಗೀತಾಲಕ್ಷ್ಮಿ, ಹೇಮಲತಾ, ಅಭಿಷೇಕ್ ಮತ್ತು ಹಿರಿಯ ನಾಗರೀಕರು ಭಾಗವಹಿಸಿದ್ದರು. ‌

Ramesh Babu

Journalist

Recent Posts

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

9 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

12 hours ago

Instant Play Casino

Instant play casinos allow you to play casino games online without installing any software. These…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

1 day ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

1 day ago

Facharbeit Schreiben_ Ein Leitfaden für Schüler und Studenten(2)

Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…

1 day ago