ಮನುಷ್ಯನ ನೆಮ್ಮದಿ ಬದುಕಿಗೆ ಸಾಹಿತ್ಯ, ಸಂಗೀತ ಮತ್ತು ಪರಿಸರ ಜೀವನ ಶೈಲಿ ಸಹಕಾರಿ ಆಗುತ್ತವೆ. ನಮ್ಮ ಜನಪದರು ರೂಪಿಸಿಗೊಂಡಿದ್ದ ಸಂಸ್ಕೃತಿಯೇ ಅವರ ಜೀವನ ಮೌಲ್ಯಗಳಾಗಿದ್ದವು ಎಂದು ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್ ತಿಳಿಸಿದರು.
ನಗರದ ಗ್ರಾಮೀಣ ಅಭ್ಯುದಯ ಸೇವಾ ಕೇಂದ್ರದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯ ನಾಗರೀಕರಿಗಾಗಿ ಸಾಹಿತ್ಯ ಮತ್ತು ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಶ್ರೀಮಂತವಾಗಿ ಉಳಿದು ಬೆಳೆಯಲು ನಮ್ಮ ಹಿರಿಯರ ಕೊಡುಗೆ ಅಪಾರವಾಗಿದೆ. ಬಹು ಸಂಸ್ಕೃತಿಯ ಜನರು ಸಾಮರಸ್ಯದಿಂದ ಬದುಕಲು ಸಹ ಹಿರಿಯರು ನಮಗೆ ದಾರಿದೀಪವಾಗಿದ್ದಾರೆ. ಸರಳತೆ ಮತ್ತು ಸಜ್ಜನಿಕೆ ಬದುಕಿನ ಮಹತ್ವವನ್ನು ನಮ್ಮ ದಾರ್ಶನಿಕರು ಜನಸಾಮಾನ್ಯರಿಗೂ ಮನಮುಟ್ಟುವಂತೆ ತಿಳಿಸಿದ್ದಾರೆ ಎಂದರು.
ಓದು ಬರಹ ಬಾರದಿದ್ದರೂ ನಮ್ಮ ಜನಪದರು ಉತ್ತಮವಾದ ಜನಪದ ಸಾಹಿತ್ಯವನ್ನು ಸೃಷ್ಟಿ ಮಾಡಿದರು. ಜನಪದರಿಂದ ನಮ್ಮ ಕನ್ನಡ ಭಾಷೆ ಮತ್ತು ಸಂಸ್ಕೃತಿ ಉನ್ನತ ಸ್ಥಾನವನ್ನು ಪಡೆಯಿತು. ಕನ್ನಡ ನಾಡು, ನುಡಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬ ಕನ್ನಡಿಗರು ಇಂದು ಪ್ರಾಮಾಣಿಕವಾಗಿ ಶ್ರಮಿಸಬೇಕಾಗಿದೆ. ಪರಿಸರ ಸಂರಕ್ಷಣೆ ನಮ್ಮ ಹೊಣೆ ಆಗಬೇಕಾಗಿದೆ. ಜನರಲ್ಲಿ ಬದ್ದತೆ ಮತ್ತು ಶಿಸ್ತುಬದ್ಧ ಜೀವನ ಶೈಲಿ ಉತ್ತಮ ಸಮಾಜದ ನಿರ್ಮಾಣಕ್ಕೆ ಸಹಕಾರಿ ಆಗಲಿದೆ ಎಂದರು.
ಹಿರಿಯ ನಾಗರೀಕರ ಹಗಲು ಯೋಗಕ್ಷಮ ಕೇಂದ್ರದ ಮೇಲ್ವಿಚಾರಕಿ ಸೌಭಾಗ್ಯ ಮಾತನಾಡಿ, ನಮ್ಮ ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಮತ್ತು ಗ್ರಾಮಾಂತರ ಹಿರಿಯ ನಾಗರೀಕರು ಮತ್ತು ವಿಕಲಚೇತನರಿಗಾಗಿ ಹಗಲು ಯೋಗ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಹಿರಿಯ ನಾಗರೀಕರಿಗೆ ಧ್ಯಾನ ಮತ್ತು ಯೋಗ, ಸಮಾಲೋಚನೆ, ಸಾಂಸ್ಕೃತಿಕ ಚಟುವಟಿಕೆ, ಉತ್ತಮ ಹವ್ಯಾಸಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಹಿರಿಯ ನಾಗರೀಕರು ಹಗಲು ಯೋಗಕ್ಷೇಮ ಕೇಂದ್ರದ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಹಿರಿಯ ನಾಗರೀಕರ ಹಗಲು ಯೋಗಕ್ಷೇಮ ಕೇಂದ್ರದ ಸಮಾಜ ವಿಷಯ ಪರೀಕ್ಷಕರುಗಳಾದ ಎಲ್.ಎನ್. ಮೋಹನ್, ಗೀತಾಲಕ್ಷ್ಮಿ, ಹೇಮಲತಾ, ಅಭಿಷೇಕ್ ಮತ್ತು ಹಿರಿಯ ನಾಗರೀಕರು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…