ಮನುಷ್ಯನ ನೆಮ್ಮದಿ ಬದುಕಿಗೆ ಸಾಹಿತ್ಯ, ಸಂಗೀತ ಮತ್ತು ಪರಿಸರ ಜೀವನ ಶೈಲಿ ಸಹಕಾರಿ- ದರ್ಗಾಜೋಗಿಹಳ್ಳಿ ಮಲ್ಲೇಶ್

 

ಮನುಷ್ಯನ ನೆಮ್ಮದಿ ಬದುಕಿಗೆ ಸಾಹಿತ್ಯ, ಸಂಗೀತ  ಮತ್ತು  ಪರಿಸರ ಜೀವನ ಶೈಲಿ ಸಹಕಾರಿ ಆಗುತ್ತವೆ. ನಮ್ಮ ಜನಪದರು ರೂಪಿಸಿಗೊಂಡಿದ್ದ ಸಂಸ್ಕೃತಿಯೇ ಅವರ  ಜೀವನ ಮೌಲ್ಯಗಳಾಗಿದ್ದವು ಎಂದು ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್ ತಿಳಿಸಿದರು.

ನಗರದ ಗ್ರಾಮೀಣ ಅಭ್ಯುದಯ ಸೇವಾ ಕೇಂದ್ರದಲ್ಲಿ  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯ ನಾಗರೀಕರಿಗಾಗಿ ಸಾಹಿತ್ಯ ಮತ್ತು ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಶ್ರೀಮಂತವಾಗಿ ಉಳಿದು ಬೆಳೆಯಲು ನಮ್ಮ ಹಿರಿಯರ ಕೊಡುಗೆ ಅಪಾರವಾಗಿದೆ. ಬಹು ಸಂಸ್ಕೃತಿಯ ಜನರು ಸಾಮರಸ್ಯದಿಂದ ಬದುಕಲು ಸಹ ಹಿರಿಯರು ನಮಗೆ ದಾರಿದೀಪವಾಗಿದ್ದಾರೆ.‌ ಸರಳತೆ ಮತ್ತು ಸಜ್ಜನಿಕೆ‌ ಬದುಕಿನ ಮಹತ್ವವನ್ನು ನಮ್ಮ ದಾರ್ಶನಿಕರು ಜನಸಾಮಾನ್ಯರಿಗೂ ಮನಮುಟ್ಟುವಂತೆ ತಿಳಿಸಿದ್ದಾರೆ ಎಂದರು.

ಓದು ಬರಹ ಬಾರದಿದ್ದರೂ ನಮ್ಮ ಜನಪದರು  ಉತ್ತಮವಾದ ಜನಪದ ಸಾಹಿತ್ಯವನ್ನು ಸೃಷ್ಟಿ ಮಾಡಿದರು.  ಜನಪದರಿಂದ ನಮ್ಮ ಕನ್ನಡ ಭಾಷೆ ಮತ್ತು ಸಂಸ್ಕೃತಿ ಉನ್ನತ ಸ್ಥಾನವನ್ನು ಪಡೆಯಿತು. ಕನ್ನಡ ನಾಡು, ನುಡಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬ ಕನ್ನಡಿಗರು ಇಂದು  ಪ್ರಾಮಾಣಿಕವಾಗಿ ಶ್ರಮಿಸಬೇಕಾಗಿದೆ. ಪರಿಸರ ಸಂರಕ್ಷಣೆ ನಮ್ಮ ಹೊಣೆ ಆಗಬೇಕಾಗಿದೆ. ಜನರಲ್ಲಿ ಬದ್ದತೆ ಮತ್ತು ಶಿಸ್ತುಬದ್ಧ ಜೀವನ ಶೈಲಿ ಉತ್ತಮ ಸಮಾಜದ ನಿರ್ಮಾಣಕ್ಕೆ ಸಹಕಾರಿ ಆಗಲಿದೆ ಎಂದರು.

ಹಿರಿಯ ನಾಗರೀಕರ ಹಗಲು ಯೋಗಕ್ಷಮ ಕೇಂದ್ರದ ಮೇಲ್ವಿಚಾರಕಿ ಸೌಭಾಗ್ಯ ಮಾತನಾಡಿ, ನಮ್ಮ ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಮತ್ತು ಗ್ರಾಮಾಂತರ  ಹಿರಿಯ ನಾಗರೀಕರು ಮತ್ತು ವಿಕಲಚೇತನರಿಗಾಗಿ ಹಗಲು ಯೋಗ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಹಿರಿಯ ನಾಗರೀಕರಿಗೆ ಧ್ಯಾನ ಮತ್ತು ಯೋಗ, ಸಮಾಲೋಚನೆ, ಸಾಂಸ್ಕೃತಿಕ ಚಟುವಟಿಕೆ, ಉತ್ತಮ ಹವ್ಯಾಸಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಹಿರಿಯ ನಾಗರೀಕರು ಹಗಲು ಯೋಗಕ್ಷೇಮ ಕೇಂದ್ರದ ಸದುಪಯೋಗ ಪಡೆದುಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ಹಿರಿಯ ನಾಗರೀಕರ ಹಗಲು ಯೋಗಕ್ಷೇಮ ಕೇಂದ್ರದ ಸಮಾಜ ವಿಷಯ  ಪರೀಕ್ಷಕರುಗಳಾದ ಎಲ್.ಎನ್. ಮೋಹನ್, ಗೀತಾಲಕ್ಷ್ಮಿ, ಹೇಮಲತಾ, ಅಭಿಷೇಕ್ ಮತ್ತು ಹಿರಿಯ ನಾಗರೀಕರು ಭಾಗವಹಿಸಿದ್ದರು. ‌

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

6 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

10 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

17 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

18 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago