ಮನುಷ್ಯನ ನೆಮ್ಮದಿ ಬದುಕಿಗೆ ಸಾಹಿತ್ಯ, ಸಂಗೀತ ಮತ್ತು ಪರಿಸರ ಜೀವನ ಶೈಲಿ ಸಹಕಾರಿ- ದರ್ಗಾಜೋಗಿಹಳ್ಳಿ ಮಲ್ಲೇಶ್

 

ಮನುಷ್ಯನ ನೆಮ್ಮದಿ ಬದುಕಿಗೆ ಸಾಹಿತ್ಯ, ಸಂಗೀತ  ಮತ್ತು  ಪರಿಸರ ಜೀವನ ಶೈಲಿ ಸಹಕಾರಿ ಆಗುತ್ತವೆ. ನಮ್ಮ ಜನಪದರು ರೂಪಿಸಿಗೊಂಡಿದ್ದ ಸಂಸ್ಕೃತಿಯೇ ಅವರ  ಜೀವನ ಮೌಲ್ಯಗಳಾಗಿದ್ದವು ಎಂದು ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್ ತಿಳಿಸಿದರು.

ನಗರದ ಗ್ರಾಮೀಣ ಅಭ್ಯುದಯ ಸೇವಾ ಕೇಂದ್ರದಲ್ಲಿ  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯ ನಾಗರೀಕರಿಗಾಗಿ ಸಾಹಿತ್ಯ ಮತ್ತು ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಶ್ರೀಮಂತವಾಗಿ ಉಳಿದು ಬೆಳೆಯಲು ನಮ್ಮ ಹಿರಿಯರ ಕೊಡುಗೆ ಅಪಾರವಾಗಿದೆ. ಬಹು ಸಂಸ್ಕೃತಿಯ ಜನರು ಸಾಮರಸ್ಯದಿಂದ ಬದುಕಲು ಸಹ ಹಿರಿಯರು ನಮಗೆ ದಾರಿದೀಪವಾಗಿದ್ದಾರೆ.‌ ಸರಳತೆ ಮತ್ತು ಸಜ್ಜನಿಕೆ‌ ಬದುಕಿನ ಮಹತ್ವವನ್ನು ನಮ್ಮ ದಾರ್ಶನಿಕರು ಜನಸಾಮಾನ್ಯರಿಗೂ ಮನಮುಟ್ಟುವಂತೆ ತಿಳಿಸಿದ್ದಾರೆ ಎಂದರು.

ಓದು ಬರಹ ಬಾರದಿದ್ದರೂ ನಮ್ಮ ಜನಪದರು  ಉತ್ತಮವಾದ ಜನಪದ ಸಾಹಿತ್ಯವನ್ನು ಸೃಷ್ಟಿ ಮಾಡಿದರು.  ಜನಪದರಿಂದ ನಮ್ಮ ಕನ್ನಡ ಭಾಷೆ ಮತ್ತು ಸಂಸ್ಕೃತಿ ಉನ್ನತ ಸ್ಥಾನವನ್ನು ಪಡೆಯಿತು. ಕನ್ನಡ ನಾಡು, ನುಡಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬ ಕನ್ನಡಿಗರು ಇಂದು  ಪ್ರಾಮಾಣಿಕವಾಗಿ ಶ್ರಮಿಸಬೇಕಾಗಿದೆ. ಪರಿಸರ ಸಂರಕ್ಷಣೆ ನಮ್ಮ ಹೊಣೆ ಆಗಬೇಕಾಗಿದೆ. ಜನರಲ್ಲಿ ಬದ್ದತೆ ಮತ್ತು ಶಿಸ್ತುಬದ್ಧ ಜೀವನ ಶೈಲಿ ಉತ್ತಮ ಸಮಾಜದ ನಿರ್ಮಾಣಕ್ಕೆ ಸಹಕಾರಿ ಆಗಲಿದೆ ಎಂದರು.

ಹಿರಿಯ ನಾಗರೀಕರ ಹಗಲು ಯೋಗಕ್ಷಮ ಕೇಂದ್ರದ ಮೇಲ್ವಿಚಾರಕಿ ಸೌಭಾಗ್ಯ ಮಾತನಾಡಿ, ನಮ್ಮ ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಮತ್ತು ಗ್ರಾಮಾಂತರ  ಹಿರಿಯ ನಾಗರೀಕರು ಮತ್ತು ವಿಕಲಚೇತನರಿಗಾಗಿ ಹಗಲು ಯೋಗ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಹಿರಿಯ ನಾಗರೀಕರಿಗೆ ಧ್ಯಾನ ಮತ್ತು ಯೋಗ, ಸಮಾಲೋಚನೆ, ಸಾಂಸ್ಕೃತಿಕ ಚಟುವಟಿಕೆ, ಉತ್ತಮ ಹವ್ಯಾಸಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಹಿರಿಯ ನಾಗರೀಕರು ಹಗಲು ಯೋಗಕ್ಷೇಮ ಕೇಂದ್ರದ ಸದುಪಯೋಗ ಪಡೆದುಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ಹಿರಿಯ ನಾಗರೀಕರ ಹಗಲು ಯೋಗಕ್ಷೇಮ ಕೇಂದ್ರದ ಸಮಾಜ ವಿಷಯ  ಪರೀಕ್ಷಕರುಗಳಾದ ಎಲ್.ಎನ್. ಮೋಹನ್, ಗೀತಾಲಕ್ಷ್ಮಿ, ಹೇಮಲತಾ, ಅಭಿಷೇಕ್ ಮತ್ತು ಹಿರಿಯ ನಾಗರೀಕರು ಭಾಗವಹಿಸಿದ್ದರು. ‌

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

8 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

14 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

15 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago