ಮನುಷ್ಯನ ಸಣ್ಣ ತಪ್ಪುಗಳಿಂದಲೇ ದೊಡ್ಡ ಅನಾಹುತಗಳಾಗುತ್ತವೆ- ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು- ನಗರ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಅಮರೇಶ್ ಗೌಡ ಸೂಚನೆ

ಮನುಷ್ಯನ ಸಣ್ಣ ತಪ್ಪುಗಳಿಂದಲೇ ದೊಡ್ಡ ಅನಾಹುತಗಳಾಗುತ್ತವೆ. ಹಾಗಾಗಿ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ನಗರ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಅಮರೇಶ್ ಗೌಡ ಹೇಳಿದರು.

ಶ್ರೀ ಕೊಂಗಾಡಿಯಪ್ಪ ಪದವಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ- 2025ನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಸಂಚಾರಿ ಸುರಕ್ಷತಾ ನಿಯಮಗಳ ಕುರಿತು ತಿಳಿಸಿದ ಅವರು ಚಾಲಕರು ವಾಹನದಲ್ಲಿ ಕುಳಿತಾಗ ತಮ್ಮ ಕುಟುಂಬದವರನ್ನು ಮತ್ತು ತಮ್ಮ ಜವಾಬ್ದಾರಿಯನ್ನು ಅರಿತು ವಾಹನ ಚಲಿಸಬೇಕು ಎಂದರು.

ವಾಹನ ಸವಾರರು ಎಲ್ಲಕಿಂತ ಜೀವ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಮದ್ಯಸೇವಿಸಿ ವಾಹನ ಚಾಲನೆ ಮಾಡುವುದು, ವಾಹನ ಚಲಾಯಿಸುವಾಗ ಮೊಬೈಲ್‌ನಲ್ಲಿ ಮಾತನಾಡುವುದು ಅಪಘಾತಕ್ಕೆ ದಾರಿ ಮಾಡಿಕೊಡುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಈ ವೇಳೆ ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ನಗರದ ಮುಖ್ಯ ರಸ್ತೆಯಲ್ಲಿ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ಭಿತ್ತಿ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ವಾಹನ ಸವಾರಿಗೆ ಹಾಗೂ ಸಾರ್ವಜನಿಕರಿಗೆ ಸಂಚಾರಿ ನಿಯಮಗಳ ಕುರಿತು ಅರಿವು ಮೂಡಿಸಲಾಯಿತು.

ಶಾಲಾ ಸಿಬ್ಬಂದಿ ವರ್ಗ ಮತ್ತು ಪೊಲೀಸ್ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಸಾಥ್ ನೀಡಿದರು.

Ramesh Babu

Journalist

Recent Posts

ಹೋರಾಟ ಮತ್ತು ಹೋರಾಟಗಾರರು……

ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…

4 hours ago

ತಿರುಮಗೊಂಡಹಳ್ಳಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಘಾಟಿ ಪ್ರಾಧಿಕಾರದ ಸದಸ್ಯರ ಮನವಿ

ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ‌‌ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…

17 hours ago

ಅಧಿಕಾರಿಗಳಲ್ಲಿ ಮಾಹಿತಿ ಕೊರತೆಯಿಂದ ಆರ್‌ಟಿಐ ಅರ್ಜಿಗಳ ವಿಲೇವಾರಿ ವಿಳಂಬ- ಮಾಹಿತಿ ಆಯುಕ್ತ ಹರೀಶ್ ಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…

18 hours ago

ಧರ್ಮಸ್ಥಳ ಕೇಸ್ ವಿಚಾರ: ತನಿಖೆ ಬೇಗ ಮುಗಿಸಿ ನ್ಯಾಯ ಕೊಡಿಸಿ ಭಾರತೀಯ ಪರಂಪರೆಯನ್ನ ಉಳಿಸಬೇಕು- ಸಚಿವ ವಿ.ಸೋಮಣ್ಣ

ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…

19 hours ago

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ…

19 hours ago

ಪ್ರಜ್ವಲ್ ರೇವಣ್ಣ ಕೇಸ್: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಜೀವನ‌ಪರ್ಯಂತ ಸೆರೆಮನೆ ವಾಸ

ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ದೋಷಿ ಎಂದು…

21 hours ago