ಮನುಷ್ಯನ ಸಣ್ಣ ತಪ್ಪುಗಳಿಂದಲೇ ದೊಡ್ಡ ಅನಾಹುತಗಳಾಗುತ್ತವೆ- ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು- ನಗರ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಅಮರೇಶ್ ಗೌಡ ಸೂಚನೆ

ಮನುಷ್ಯನ ಸಣ್ಣ ತಪ್ಪುಗಳಿಂದಲೇ ದೊಡ್ಡ ಅನಾಹುತಗಳಾಗುತ್ತವೆ. ಹಾಗಾಗಿ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ನಗರ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಅಮರೇಶ್ ಗೌಡ ಹೇಳಿದರು.

ಶ್ರೀ ಕೊಂಗಾಡಿಯಪ್ಪ ಪದವಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ- 2025ನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಸಂಚಾರಿ ಸುರಕ್ಷತಾ ನಿಯಮಗಳ ಕುರಿತು ತಿಳಿಸಿದ ಅವರು ಚಾಲಕರು ವಾಹನದಲ್ಲಿ ಕುಳಿತಾಗ ತಮ್ಮ ಕುಟುಂಬದವರನ್ನು ಮತ್ತು ತಮ್ಮ ಜವಾಬ್ದಾರಿಯನ್ನು ಅರಿತು ವಾಹನ ಚಲಿಸಬೇಕು ಎಂದರು.

ವಾಹನ ಸವಾರರು ಎಲ್ಲಕಿಂತ ಜೀವ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಮದ್ಯಸೇವಿಸಿ ವಾಹನ ಚಾಲನೆ ಮಾಡುವುದು, ವಾಹನ ಚಲಾಯಿಸುವಾಗ ಮೊಬೈಲ್‌ನಲ್ಲಿ ಮಾತನಾಡುವುದು ಅಪಘಾತಕ್ಕೆ ದಾರಿ ಮಾಡಿಕೊಡುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಈ ವೇಳೆ ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ನಗರದ ಮುಖ್ಯ ರಸ್ತೆಯಲ್ಲಿ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ಭಿತ್ತಿ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ವಾಹನ ಸವಾರಿಗೆ ಹಾಗೂ ಸಾರ್ವಜನಿಕರಿಗೆ ಸಂಚಾರಿ ನಿಯಮಗಳ ಕುರಿತು ಅರಿವು ಮೂಡಿಸಲಾಯಿತು.

ಶಾಲಾ ಸಿಬ್ಬಂದಿ ವರ್ಗ ಮತ್ತು ಪೊಲೀಸ್ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಸಾಥ್ ನೀಡಿದರು.

Ramesh Babu

Journalist

Recent Posts

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

11 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

20 hours ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

20 hours ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

1 day ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

1 day ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

1 day ago