ಮನೆಯನ್ನು ನಾವು ಯಾವುದೇ ಕಾರಣಕ್ಕೂ ಧ್ವಂಸ ಮಾಡಿಲ್ಲ- ನಮ್ಮ ಮೇಲೆ ಸುಳ್ಳು ಆರೋಪ ಮಾಡಲಾಗಿದೆ-ಮಧು ಕುಮಾರ್

ದೊಡ್ಡಬಳ್ಳಾಪುರ : ರಾತೋ ರಾತ್ರಿ ಮನೆಯನ್ನು ಯಾವುದೇ ಮಾಹಿತಿ ನೀಡದೆ ಏಕಾಏಕಿ ಜೆಸಿಬಿಯಿಂದ ನಾವು ಧ್ವಂಸಗೊಳಿಸಿಲ್ಲ. ವಿಶ್ವನಾಥ್ ಅವರು ನಮ್ಮ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ವೀರಪುರ ಗ್ರಾಮದ ಸರ್ವೇ ನಂಬರ್ 115 ರ ಜಮೀನು ಮಾಲೀಕರಾದ ಮಧು ಕುಮಾರ್ ತಿಳಿಸಿದ್ದಾರೆ.

ತಾಲ್ಲೂಕಿನ ಹೊರವಲಯದ ವೀರಪುರದಲ್ಲಿ ಈ ಹಿಂದೆ ವಿಶ್ವನಾಥ್ ಎಂಬುವರು ನಮ್ಮ ಮನೆಯನ್ನು ಜೆಸಿಬಿಯಿಂದ ನೆಲಸಮ ಮಾಡಲಾಗಿದೆ. ಮನೆಯ ಒಳಗಿದ್ದ ವಸ್ತುಗಳು ಸಂಪೂರ್ಣ ಹಾಳಾಗಿದ್ದು , ಕೋಳಿ ಹಾಗೂ ಮೇಕೆಗೆ ಹಾನಿ ಮಾಡಲಾಗಿದೆ ಎಂದು ಆರೋಪಿಸಿದ್ದರು. ಈ ಕುರಿತಂತೆ ಜಮೀನು ಮಾಲಿಕ ಮಧುಕುಮಾರ್ ಮಾತನಾಡಿ, ಈಗಾಗಲೇ ಹಲವಾರು ಬಾರಿ ಸರ್ವೆ ಮಾಡಿಸಿದ್ದೇವೆ . ವಿಶ್ವನಾಥ್ ಖುದ್ದು ಸಹಿ ಹಾಕಿ ಸರ್ವೇಯನ್ನು ಒಪ್ಪಿಕೊಂಡಿದ್ದಾರೆ. ಆದರೆ, ಪದೇ ಪದೇ ನಮ್ಮ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾ ಸಮಸ್ಯೆ ಕೊಡುತ್ತಿದ್ದಾರೆ ಎಂದರು.

ವೀರಪುರ ಗ್ರಾಮದ ಸರ್ವೇ ನಂಬರ್ 115ಕ್ಕೆ ಸಂಬಂಧಿಸಿದಂತೆ 32 ಗುಂಟೆ ಜಮೀನಿಗೆ ಮಧು ಕುಮಾರ್, ರವಿ, ಚಂದ್ರಪ್ಪ, ನಾರಾಯಣಪ್ಪ ಎಂಬ ನಾವು ಜಂಟಿ ಮಾಲೀಕರಾಗಿದ್ದು, ನಮ್ಮ ಪಕ್ಕದ 19 ಗುಂಟೆ ಜಮೀನು ವಿಶ್ವನಾಥ್ ಅವರಿಗೆ ಸೇರಿರುತ್ತದೆ. ಆದರೆ, ನಮ್ಮ ಜಮೀನು ನಮಗೆ ಬಿಟ್ಟುಕೊಡದೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಈಗಾಗಲೇ ಹಲವಾರು ಬಾರಿ ಪೊಲೀಸ್ ಠಾಣೆಯಲ್ಲಿ ಮಾತುಕತೆ ನಡೆದಿದೆ. ಆದರೂ, ಯಾವುದೇ ಪ್ರಯೋಜನವಾಗಿಲ್ಲ. ತಾವೇ ಮನೆ ನೆಲಸಮ ಮಾಡಿಕೊಂಡು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

ಮನೆಯನ್ನು ಬಿಳಿಸುವ ಉದ್ದೇಶ ನಮ್ಮದಾಗಿದ್ದರೆ ಕೋರ್ಟ್ ಆದೇಶ ಪಡೆದು ಸಂಪೂರ್ಣ ಮನೆಯನ್ನು ದ್ವಂಸಗೊಳಿಸುತ್ತಿದ್ದೆವು. ಆದರೆ, ನಾವು ಆ ಕೆಲಸ ಮಾಡಿಲ್ಲ. ಮನೆ ಖಾಲಿ ಮಾಡಿಕೊಡುವಂತೆ ಮನವಿ ಮಾಡಿದ್ದೆವು. ಅದಕ್ಕೆ ವಿಶ್ವನಾಥ್ ಕೂಡ ಒಪ್ಪಿದ್ದರು. ಈಗ ಏಕಏಕಿ ಬಂದು ನಾವು ಅವರ ಮನೆ ಧ್ವಂಸಗೊಳಿಸಿದ್ದೇವೆ ಹಾನಿ ಮಾಡಿದ್ದೇವೆ ಎಂದು ಹೇಳುತ್ತಿದ್ದಾರೆ. ನಮ್ಮ ಬಳಿ ಸೂಕ್ತ ದಾಖಲಾತಿ ಇದೆ. ಜಮೀನು ನಮ್ಮದು ನಮ್ಮ ಜಾಗವನ್ನು ನಮಗೆ ಬಿಟ್ಟು ಕೊಡಿ ಎಂದು ಮನವಿ ಮಾಡಿದರು.

ಮನೆಯಲ್ಲಿದ್ದ ವಸ್ತುಗಳು, ಅಡುಗೆ ಪಾತ್ರೆಗಳು ಸಂಪೂರ್ಣ ಹಾಳಾಗಿದ್ದು , ತಾವು ಸಾಕಿದ್ದ ಕೋಳಿಗಳು ಗೋಡೆ ಕೆಳಗೆ ಸಿಲುಕಿ ಸಾವನಪ್ಪಿವೆ ಗೋಡೆ ಬಿದ್ದ ಪರಿಣಾಮ ಮೇಕೆ ಮರಿಯ ಕಾಲು ಮುರಿದಿದೆ ಎಂದು ವಿಶ್ವನಾಥ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಇದು ಎಲ್ಲವೂ ಸುಳ್ಳು ಸತ್ಯಕ್ಕೆ ದೂರವಾದ ಮಾತು. ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿ ಸಮಸ್ಯೆ ಪರಿಹರಿಸುವಂತೆ ಮನವಿ ಮಾಡಿಕೊಳ್ಳುತ್ತೇವೆ ಎಂದರು.

Ramesh Babu

Journalist

Recent Posts

ಓದು, ಪ್ರವಾಸ ಮತ್ತು ಧ್ಯಾನಸ್ಥ ಮನಸ್ಥಿತಿ……..

ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…

3 hours ago

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

15 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

18 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

19 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

1 day ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

2 days ago