ಮನೆಯನ್ನು ನಾವು ಯಾವುದೇ ಕಾರಣಕ್ಕೂ ಧ್ವಂಸ ಮಾಡಿಲ್ಲ- ನಮ್ಮ ಮೇಲೆ ಸುಳ್ಳು ಆರೋಪ ಮಾಡಲಾಗಿದೆ-ಮಧು ಕುಮಾರ್

ದೊಡ್ಡಬಳ್ಳಾಪುರ : ರಾತೋ ರಾತ್ರಿ ಮನೆಯನ್ನು ಯಾವುದೇ ಮಾಹಿತಿ ನೀಡದೆ ಏಕಾಏಕಿ ಜೆಸಿಬಿಯಿಂದ ನಾವು ಧ್ವಂಸಗೊಳಿಸಿಲ್ಲ. ವಿಶ್ವನಾಥ್ ಅವರು ನಮ್ಮ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ವೀರಪುರ ಗ್ರಾಮದ ಸರ್ವೇ ನಂಬರ್ 115 ರ ಜಮೀನು ಮಾಲೀಕರಾದ ಮಧು ಕುಮಾರ್ ತಿಳಿಸಿದ್ದಾರೆ.

ತಾಲ್ಲೂಕಿನ ಹೊರವಲಯದ ವೀರಪುರದಲ್ಲಿ ಈ ಹಿಂದೆ ವಿಶ್ವನಾಥ್ ಎಂಬುವರು ನಮ್ಮ ಮನೆಯನ್ನು ಜೆಸಿಬಿಯಿಂದ ನೆಲಸಮ ಮಾಡಲಾಗಿದೆ. ಮನೆಯ ಒಳಗಿದ್ದ ವಸ್ತುಗಳು ಸಂಪೂರ್ಣ ಹಾಳಾಗಿದ್ದು , ಕೋಳಿ ಹಾಗೂ ಮೇಕೆಗೆ ಹಾನಿ ಮಾಡಲಾಗಿದೆ ಎಂದು ಆರೋಪಿಸಿದ್ದರು. ಈ ಕುರಿತಂತೆ ಜಮೀನು ಮಾಲಿಕ ಮಧುಕುಮಾರ್ ಮಾತನಾಡಿ, ಈಗಾಗಲೇ ಹಲವಾರು ಬಾರಿ ಸರ್ವೆ ಮಾಡಿಸಿದ್ದೇವೆ . ವಿಶ್ವನಾಥ್ ಖುದ್ದು ಸಹಿ ಹಾಕಿ ಸರ್ವೇಯನ್ನು ಒಪ್ಪಿಕೊಂಡಿದ್ದಾರೆ. ಆದರೆ, ಪದೇ ಪದೇ ನಮ್ಮ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾ ಸಮಸ್ಯೆ ಕೊಡುತ್ತಿದ್ದಾರೆ ಎಂದರು.

ವೀರಪುರ ಗ್ರಾಮದ ಸರ್ವೇ ನಂಬರ್ 115ಕ್ಕೆ ಸಂಬಂಧಿಸಿದಂತೆ 32 ಗುಂಟೆ ಜಮೀನಿಗೆ ಮಧು ಕುಮಾರ್, ರವಿ, ಚಂದ್ರಪ್ಪ, ನಾರಾಯಣಪ್ಪ ಎಂಬ ನಾವು ಜಂಟಿ ಮಾಲೀಕರಾಗಿದ್ದು, ನಮ್ಮ ಪಕ್ಕದ 19 ಗುಂಟೆ ಜಮೀನು ವಿಶ್ವನಾಥ್ ಅವರಿಗೆ ಸೇರಿರುತ್ತದೆ. ಆದರೆ, ನಮ್ಮ ಜಮೀನು ನಮಗೆ ಬಿಟ್ಟುಕೊಡದೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಈಗಾಗಲೇ ಹಲವಾರು ಬಾರಿ ಪೊಲೀಸ್ ಠಾಣೆಯಲ್ಲಿ ಮಾತುಕತೆ ನಡೆದಿದೆ. ಆದರೂ, ಯಾವುದೇ ಪ್ರಯೋಜನವಾಗಿಲ್ಲ. ತಾವೇ ಮನೆ ನೆಲಸಮ ಮಾಡಿಕೊಂಡು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

ಮನೆಯನ್ನು ಬಿಳಿಸುವ ಉದ್ದೇಶ ನಮ್ಮದಾಗಿದ್ದರೆ ಕೋರ್ಟ್ ಆದೇಶ ಪಡೆದು ಸಂಪೂರ್ಣ ಮನೆಯನ್ನು ದ್ವಂಸಗೊಳಿಸುತ್ತಿದ್ದೆವು. ಆದರೆ, ನಾವು ಆ ಕೆಲಸ ಮಾಡಿಲ್ಲ. ಮನೆ ಖಾಲಿ ಮಾಡಿಕೊಡುವಂತೆ ಮನವಿ ಮಾಡಿದ್ದೆವು. ಅದಕ್ಕೆ ವಿಶ್ವನಾಥ್ ಕೂಡ ಒಪ್ಪಿದ್ದರು. ಈಗ ಏಕಏಕಿ ಬಂದು ನಾವು ಅವರ ಮನೆ ಧ್ವಂಸಗೊಳಿಸಿದ್ದೇವೆ ಹಾನಿ ಮಾಡಿದ್ದೇವೆ ಎಂದು ಹೇಳುತ್ತಿದ್ದಾರೆ. ನಮ್ಮ ಬಳಿ ಸೂಕ್ತ ದಾಖಲಾತಿ ಇದೆ. ಜಮೀನು ನಮ್ಮದು ನಮ್ಮ ಜಾಗವನ್ನು ನಮಗೆ ಬಿಟ್ಟು ಕೊಡಿ ಎಂದು ಮನವಿ ಮಾಡಿದರು.

ಮನೆಯಲ್ಲಿದ್ದ ವಸ್ತುಗಳು, ಅಡುಗೆ ಪಾತ್ರೆಗಳು ಸಂಪೂರ್ಣ ಹಾಳಾಗಿದ್ದು , ತಾವು ಸಾಕಿದ್ದ ಕೋಳಿಗಳು ಗೋಡೆ ಕೆಳಗೆ ಸಿಲುಕಿ ಸಾವನಪ್ಪಿವೆ ಗೋಡೆ ಬಿದ್ದ ಪರಿಣಾಮ ಮೇಕೆ ಮರಿಯ ಕಾಲು ಮುರಿದಿದೆ ಎಂದು ವಿಶ್ವನಾಥ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಇದು ಎಲ್ಲವೂ ಸುಳ್ಳು ಸತ್ಯಕ್ಕೆ ದೂರವಾದ ಮಾತು. ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿ ಸಮಸ್ಯೆ ಪರಿಹರಿಸುವಂತೆ ಮನವಿ ಮಾಡಿಕೊಳ್ಳುತ್ತೇವೆ ಎಂದರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago