ಮನೆಯನ್ನು ನಾವು ಯಾವುದೇ ಕಾರಣಕ್ಕೂ ಧ್ವಂಸ ಮಾಡಿಲ್ಲ- ನಮ್ಮ ಮೇಲೆ ಸುಳ್ಳು ಆರೋಪ ಮಾಡಲಾಗಿದೆ-ಮಧು ಕುಮಾರ್

ದೊಡ್ಡಬಳ್ಳಾಪುರ : ರಾತೋ ರಾತ್ರಿ ಮನೆಯನ್ನು ಯಾವುದೇ ಮಾಹಿತಿ ನೀಡದೆ ಏಕಾಏಕಿ ಜೆಸಿಬಿಯಿಂದ ನಾವು ಧ್ವಂಸಗೊಳಿಸಿಲ್ಲ. ವಿಶ್ವನಾಥ್ ಅವರು ನಮ್ಮ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ವೀರಪುರ ಗ್ರಾಮದ ಸರ್ವೇ ನಂಬರ್ 115 ರ ಜಮೀನು ಮಾಲೀಕರಾದ ಮಧು ಕುಮಾರ್ ತಿಳಿಸಿದ್ದಾರೆ.

ತಾಲ್ಲೂಕಿನ ಹೊರವಲಯದ ವೀರಪುರದಲ್ಲಿ ಈ ಹಿಂದೆ ವಿಶ್ವನಾಥ್ ಎಂಬುವರು ನಮ್ಮ ಮನೆಯನ್ನು ಜೆಸಿಬಿಯಿಂದ ನೆಲಸಮ ಮಾಡಲಾಗಿದೆ. ಮನೆಯ ಒಳಗಿದ್ದ ವಸ್ತುಗಳು ಸಂಪೂರ್ಣ ಹಾಳಾಗಿದ್ದು , ಕೋಳಿ ಹಾಗೂ ಮೇಕೆಗೆ ಹಾನಿ ಮಾಡಲಾಗಿದೆ ಎಂದು ಆರೋಪಿಸಿದ್ದರು. ಈ ಕುರಿತಂತೆ ಜಮೀನು ಮಾಲಿಕ ಮಧುಕುಮಾರ್ ಮಾತನಾಡಿ, ಈಗಾಗಲೇ ಹಲವಾರು ಬಾರಿ ಸರ್ವೆ ಮಾಡಿಸಿದ್ದೇವೆ . ವಿಶ್ವನಾಥ್ ಖುದ್ದು ಸಹಿ ಹಾಕಿ ಸರ್ವೇಯನ್ನು ಒಪ್ಪಿಕೊಂಡಿದ್ದಾರೆ. ಆದರೆ, ಪದೇ ಪದೇ ನಮ್ಮ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾ ಸಮಸ್ಯೆ ಕೊಡುತ್ತಿದ್ದಾರೆ ಎಂದರು.

ವೀರಪುರ ಗ್ರಾಮದ ಸರ್ವೇ ನಂಬರ್ 115ಕ್ಕೆ ಸಂಬಂಧಿಸಿದಂತೆ 32 ಗುಂಟೆ ಜಮೀನಿಗೆ ಮಧು ಕುಮಾರ್, ರವಿ, ಚಂದ್ರಪ್ಪ, ನಾರಾಯಣಪ್ಪ ಎಂಬ ನಾವು ಜಂಟಿ ಮಾಲೀಕರಾಗಿದ್ದು, ನಮ್ಮ ಪಕ್ಕದ 19 ಗುಂಟೆ ಜಮೀನು ವಿಶ್ವನಾಥ್ ಅವರಿಗೆ ಸೇರಿರುತ್ತದೆ. ಆದರೆ, ನಮ್ಮ ಜಮೀನು ನಮಗೆ ಬಿಟ್ಟುಕೊಡದೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಈಗಾಗಲೇ ಹಲವಾರು ಬಾರಿ ಪೊಲೀಸ್ ಠಾಣೆಯಲ್ಲಿ ಮಾತುಕತೆ ನಡೆದಿದೆ. ಆದರೂ, ಯಾವುದೇ ಪ್ರಯೋಜನವಾಗಿಲ್ಲ. ತಾವೇ ಮನೆ ನೆಲಸಮ ಮಾಡಿಕೊಂಡು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

ಮನೆಯನ್ನು ಬಿಳಿಸುವ ಉದ್ದೇಶ ನಮ್ಮದಾಗಿದ್ದರೆ ಕೋರ್ಟ್ ಆದೇಶ ಪಡೆದು ಸಂಪೂರ್ಣ ಮನೆಯನ್ನು ದ್ವಂಸಗೊಳಿಸುತ್ತಿದ್ದೆವು. ಆದರೆ, ನಾವು ಆ ಕೆಲಸ ಮಾಡಿಲ್ಲ. ಮನೆ ಖಾಲಿ ಮಾಡಿಕೊಡುವಂತೆ ಮನವಿ ಮಾಡಿದ್ದೆವು. ಅದಕ್ಕೆ ವಿಶ್ವನಾಥ್ ಕೂಡ ಒಪ್ಪಿದ್ದರು. ಈಗ ಏಕಏಕಿ ಬಂದು ನಾವು ಅವರ ಮನೆ ಧ್ವಂಸಗೊಳಿಸಿದ್ದೇವೆ ಹಾನಿ ಮಾಡಿದ್ದೇವೆ ಎಂದು ಹೇಳುತ್ತಿದ್ದಾರೆ. ನಮ್ಮ ಬಳಿ ಸೂಕ್ತ ದಾಖಲಾತಿ ಇದೆ. ಜಮೀನು ನಮ್ಮದು ನಮ್ಮ ಜಾಗವನ್ನು ನಮಗೆ ಬಿಟ್ಟು ಕೊಡಿ ಎಂದು ಮನವಿ ಮಾಡಿದರು.

ಮನೆಯಲ್ಲಿದ್ದ ವಸ್ತುಗಳು, ಅಡುಗೆ ಪಾತ್ರೆಗಳು ಸಂಪೂರ್ಣ ಹಾಳಾಗಿದ್ದು , ತಾವು ಸಾಕಿದ್ದ ಕೋಳಿಗಳು ಗೋಡೆ ಕೆಳಗೆ ಸಿಲುಕಿ ಸಾವನಪ್ಪಿವೆ ಗೋಡೆ ಬಿದ್ದ ಪರಿಣಾಮ ಮೇಕೆ ಮರಿಯ ಕಾಲು ಮುರಿದಿದೆ ಎಂದು ವಿಶ್ವನಾಥ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಇದು ಎಲ್ಲವೂ ಸುಳ್ಳು ಸತ್ಯಕ್ಕೆ ದೂರವಾದ ಮಾತು. ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿ ಸಮಸ್ಯೆ ಪರಿಹರಿಸುವಂತೆ ಮನವಿ ಮಾಡಿಕೊಳ್ಳುತ್ತೇವೆ ಎಂದರು.

Ramesh Babu

Journalist

Recent Posts

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

3 minutes ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

3 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

14 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

15 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

19 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

20 hours ago