ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಗಿಲು ಮುರಿದು ಅರ್ಧ ಕೆಜಿಯಷ್ಟು ಬಂಗಾರ ಜೊತೆಗೆ ನಗದು ದೋಚಿ ಕಳ್ಳರು ಎಸ್ಕೇಪ್ ಆಗಿರುವ ಘಟನೆ ಗೌರಿಬಿದನೂರು ನಗರದಲ್ಲಿ ನಡೆದಿದೆ.
ನಗರದ ತ್ಯಾಗರಾಜ ಕಾಲೋನಿಯಲ್ಲಿ ವಾಸವಿರುವ ಅಶ್ವತ್ಥನಾರಾಯಣ ಶೆಟ್ಟಿ, ಶೈಲಜಾ ದಂಪತಿಆರೋಗ್ಯ ಪರೀಕ್ಷೆಗೆಂದು ಮಗನ ಮನೆ ಬೆಂಗಳೂರಿಗೆ ಕಳೆದ ಶುಕ್ರವಾರ ಹೋಗಿದ್ದರು. ಚಿಕಿತ್ಸೆಯ ನಂತರ ಗೌರಿಬಿದನೂರು ನಗರದ ಮನೆಗೆ ವಾಪಸ್ ಬರಬೇಕಾಗಿತ್ತು. ಆದರೆ ಮಕ್ಕಳ ಬಲವಂತದಿಂದ ಸಂಕ್ರಾಂತಿ ಹಬ್ಬಕ್ಕೆ ಬೆಂಗಳೂರಿನ ಮಗನ ಮನೆಯಲ್ಲೇ ಉಳಿದುಕೊಂಡಿದ್ದರು. ಇದೇ ಸಮಯ ಕಳ್ಳರಿಗೆ ಅನುಕೂಲವಾಗಿದ್ದು, ರಾತ್ರಿ ಕಳ್ಳರು ಮನೆಯ ಬೀಗವನ್ನು ಹೊಡೆದು ಮನೆಯಲ್ಲಿದ್ದ ಚಿನ್ನಾಭರಣವನ್ನು ಕದ್ದು ಎಸ್ಕೇಪ್ ಆಗಿದ್ದಾರೆ.
ಮನೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಎರಡು ಬೀರುವಗಳನ್ನು ತೆಗೆದು 3 ಚಿನ್ನದ ನಕ್ಲೀಸ್, 4 ಚಿನ್ನದ ಚೈನ್ಗಳು, ಒಂದು ಜೊತೆ ಬಳೆ, ಒಂದು ಬ್ರಾಸ್ ಲೈಟ್, 7 ಉಂಗರುಗಳೊಂದಿಗೆ ಸುಮಾರು ಒಂದು ಲಕ್ಷ ರೂಗಳ ನಗದನ್ನು ದೋಚಿ ಎಸ್ಕೇಪ್ ಆಗಿದ್ದಾರೆ.
ಇನ್ನೂ ಮನೆ ದರೋಡೆ ವಿಷಯ ತಿಳಿದು ಪೊಲೀಸರ ಗಮನಕ್ಕೆ ತಂದಿದ್ದಾರೆ.
ಕಳೆದ ಮೂರು ತಿಂಗಳ ಹಿಂದೆ ಇದೇ ಮನೆಯ 2ನೇ ಮಹಡಿಯಲ್ಲಿ ಕಳ್ಳತನಕ್ಕೆ ಯತ್ನ ನಡೆದಿತ್ತು. ಆಗ ಸಿ ಸಿ ಕ್ಯಾಮೆರಾ ಇರುವುದರಿಂದ ಜಾಗೃತಗೊಂಡ ಮನೆ ಮಾಲೀಕರು ಸ್ಥಳೀಯ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದು, ಪೊಲೀಸರು ಕಾರ್ಯಪ್ರವೃತ್ತರಾಗಿ ಅನಾಹುತ ತಪ್ಪಿಸಿದ್ದರು. ಆದರೆ, ಈ ದಿನ ಮತ್ತೆ ಕಳ್ಳತನವಾಗಿರುವ ಘಟನೆ ನಡೆದಿದೆ. ಮನೆಗಳಿಗೆ ಸಿಸಿ ಕ್ಯಾಮೆರಾ ಅಳವಡಿಸುವುದರಿಂದ ಯಾವುದೇ ತೊಂದರೆ ಇರುವುದಿಲ್ಲ. ಊರು ಮತ್ತು ಪ್ರವಾಸ ಇತ್ಯಾದಿ ಕಡೆಗಳಿಗೆ ಹೋಗಬೇಕಾದರೆ ಮಾಹಿತಿ ನೀಡಿ ಹೋಗಿ ಎಂದು ತಿಳಿಸಿದ್ದೇವೆ. ಅವರ ನಿರ್ಲಕ್ಷದಿಂದ ಈ ದಿನ ಕಳ್ಳತನವಾಗಿದೆ. 70 ರಿಂದ 80 ಲಕ್ಷ ಖರ್ಚು ಮಾಡಿ ಮನೆ ಕಟ್ಟುತ್ತಾರೆ.ಆದರೆ 10 ಸಾವಿರ ರೂಪಾಯಿ ಕೊಟ್ಟು ಕ್ಯಾಮೆರಾ ಹಾಕಿಸಿದರೆ ಬಹಳ ಉತ್ತಮ ಅವರಿಗೂ ಸಹ ರಕ್ಷಣೆ ಆಗಿರುತ್ತದೆ ಎಂದು ಕಾರ್ಪೋರೆಟರ್ ಅಮರ್ ಮಾಹಿತಿ ನೀಡಿದ್ದಾರೆ.
ಇನ್ನೂ ಸ್ಥಳಕ್ಕೆ ನಗರಠಾಣೆಯ ಪೊಲೀಸರು ಹಾಗೂ ಬೆರಳಚ್ಚು ತಜ್ಙರು, ಶ್ವಾನ ದಳ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಕಳ್ಳರಿಗಾಗಿ ಬಲೆ ಬೀಸಿದ್ದಾರೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…