ಬೀಗ ಹಾಕಿರುವ ಮನೆಗಳನ್ನು ಗುರುತಿಸಲು ಪಾರಿವಾಳಗಳನ್ನು ಬಳಸಿ ಕಳ್ಳತನ ಮಾಡಿದ ಆರೋಪ ಹೊತ್ತಿರುವ ಮಂಜುನಾಥ್ ಎಂಬ 38 ವರ್ಷದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಅಪರಾಧ ಎಸಗುವ ಬಳಕೆಯಲ್ಲಿನ ಹಳೆಯ ತಂತ್ರಕ್ಕೆ ಇದು ಹೊಸ ತಿರುವು ಪಡೆದುಕೊಂಡಿದೆ. ಈ ಮಂಜುನಾಥ್ ಪಾರಿವಾಳಗಳನ್ನು ಸಾಕುತ್ತಿದ್ದನು. ಈ ಪಾರಿವಾಳಗಳಿಗೆ ಸಣ್ಣ ಟ್ರಾನ್ಸ್ಮಿಟರ್ ಸಾಧನಗಳಿಗೆ ಜೋಡಿಸಲಾದ ಸಣ್ಣ ಮಿನಿಕ್ಯಾಮೆರಾಗಳೊಂದಿಗೆ ಹೊಂದಿಸುತ್ತಾರೆ. ನಗರದಲ್ಲಿ 50ಕ್ಕೂ ಹೆಚ್ಚು ಮನೆಗಳ್ಳತನಕ್ಕೆ ಯೋಜನೆ ರೂಪಿಸಿದ್ದ ಎನ್ನಲಾಗಿದೆ.
ಬೆಂಗಳೂರಿನ ನಾಗರತ್ಪೇಟೆ ಮೂಲದ ಹೊಸೂರು ನಿವಾಸಿ ಪಾರಿವಾಳ ಮಂಜ ಅಲಿಯಾಸ್ ಮಂಜುನಾಥ್ ಸುಮಾರು 50 ಮನೆಗಳ್ಳತನದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಆತನಿಂದ 30 ಲಕ್ಷ ಮೌಲ್ಯದ 475 ಗ್ರಾಂ ಚಿನ್ನಾಭರಣ ಹಾಗೂ ಸ್ಕೂಟರ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಂಜುನಾಥನ ವಿಶಿಷ್ಟ ತಂತ್ರವೆಂದರೆ ಬೀಗ ಹಾಕಿದ ಮನೆಗಳನ್ನು ಹುಡುಕುವಾಗ ಒಂದು ಅಥವಾ ಒಂದು ಜೋಡಿ ಪಾರಿವಾಳಗಳನ್ನು ಒಯ್ಯುವುದು. ಪ್ರಾಥಮಿಕವಾಗಿ ಭದ್ರತಾ ಸಿಬ್ಬಂದಿ ಇಲ್ಲದ ಬಹುಮಹಡಿ ಕಟ್ಟಡಗಳನ್ನು ಗುರಿಯಾಗಿಸಿಕೊಂಡು ಪಾರಿವಾಳಗಳನ್ನು ಬಿಡುಗಡೆ ಮಾಡುತ್ತಾನೆ, ಅವು ಕಟ್ಟಡಗಳ ಮೇಲೆ ಹೋಗಿ ಕುಳಿತುಕೊಳ್ಳುತ್ತದೆ. ನಂತರ ಅವನು ಕಟ್ಟಡದ ಮೆಟ್ಟಿಲುಗಳನ್ನು ಏರುತ್ತಾನೆ ಮತ್ತು ಯಾರಾದರೂ ಅವನನ್ನು ಪ್ರಶ್ನಿಸಿದರೆ, ಅವನು ಪಾರಿವಾಳಗಳನ್ನು ತೋರಿಸತ್ತಾನೆ. ಪಾರಿವಾಳಗಳನ್ನು ಹಿಡಿಯಲು ಪ್ರಯತ್ನಿಸುತ್ತಿರುವುದಾಗಿ ಹೇಳಿಕೊಳ್ಳುತ್ತಾನೆ. ಮನೆ ಹೊರಗಿನಿಂದ ಬೀಗ ಹಾಕಿರುವುದು ಕಂಡು ಬಂದರೆ ತಕ್ಷಣ ಕಳ್ಳನ ಕೈಚಳಕ ಶುರುವಾಗುತ್ತದೆ.
“ಕಳ್ಳ ಕಬ್ಬಿಣದ ರಾಡ್ ಬಳಸಿ ಮುಂಭಾಗದ ಬಾಗಿಲುಗಳನ್ನು ಒಡೆದು, ನಂತರ ಅದೇ ರಾಡ್ನಿಂದ ಅಲ್ಮೆರಾಗಳು ಅಥವಾ ಬೀರುಗಳನ್ನು ಮುರಿದು ಚಿನ್ನಾಭರಣಗಳು ಮತ್ತು ನಗದು ಹಣದೊಂದಿಗೆ ಪರಾರಿಯಾಗಿದ್ದಾನೆ” ಎಂದು ಪೊಲೀಸರು ಹೇಳಿದರು.
ಮಂಜುನಾಥ್ ಹೊಸೂರಿನಲ್ಲಿ ಕದ್ದ ಬೆಲೆ ಬಾಳುವ ವಸ್ತುಗಳನ್ನು ವಿಲೇವಾರಿ ಮಾಡಲಾಗಿದೆ. ಈ ಹಿಂದೆ ನಗರದಲ್ಲಿ ಬಂಧಿತನಾಗಿದ್ದರೂ ಜಾಮೀನಿನ ಮೇಲೆ ಹೊರಬಂದಾಗಲೆಲ್ಲಾ ಕಳ್ಳತನ ಮಾಡುತ್ತಲೇ ಇದ್ದ.
ಆತನ ಬಂಧನದೊಂದಿಗೆ ಸಿಟಿ ಮಾರ್ಕೆಟ್ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳನ್ನು ಭೇದಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…