ಮನೆ ಕಳ್ಳತನ ಆರೋಪಿ‌ ಸೆರೆ: ಕಳುವಾಗಿದ್ದ ಚಿನ್ನದ ಒಡವೆ ದೂರುದಾರರಿಗೆ ಹಸ್ತಾಂತರ: ಪೊಲೀಸರ ಕಾರ್ಯಕ್ಕೆ‌ ಸಾರ್ವಜನಿಕರ ಮೆಚ್ಚುಗೆ

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ‌ ಮೇಳೇಕೋಟೆ ಗ್ರಾಮದಲ್ಲಿ ಕಳೆದ ಕೆಲವು ತಿಂಗಳುಗಳ ಹಿಂದೆ ಮನೆ ಕಳ್ಳತನ ನಡೆದಿತ್ತು. ಬೀರುವಿನಲ್ಲಿದ್ದ ಸುಮಾರು 3 ಲಕ್ಷದ 60 ಸಾವಿರ ಮೌಲ್ಯದ 45 ಗ್ರಾಂ ತೂಕದ ಚಿನ್ನದ ಒಡವೆಗಳು ಕಳವು ಆಗಿರುವುದು ಜ.29ರಂದು ಮನೆ ಮಾಲೀಕರಿಗೆ ಕಂಡುಬಂದಿತ್ತು. ಈ ಕುರಿತು‌ ಫೆ.10ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮನೆ ಮಾಲೀಕರು ಪ್ರಕರಣ‌ ದಾಖಲು ಮಾಡಿದರು. ಪ್ರಕರಣ ದಾಖಲಿಸಿಕೊಂಡ‌ ಪೊಲೀಸರು ಸೂಕ್ತ ತನಿಖೆ ನಡೆಸಿ ಮನೆ ಕಳ್ಳನನ್ನು ಬಂಧಿಸಿ, ಬಂಧಿತನಿಂದ‌ ಒಡವೆಗಳನ್ನು ವಶಕ್ಕೆ ಪಡೆದು, ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರು ಇಂದು ಒಡವೆ ಮಾಲೀಕರನ್ನು ಠಾಣೆಗೆ ಕರೆಸಿ ಕಳವು ಆಗಿದ್ದ ಒಡವೆಗಳನ್ನು ಹಸ್ತಾಂತ ಮಾಡಿದರು.

ಘಟನೆ ವಿವರ:

ದೂರುದಾರರಾದ ಸಲ್ಮಾ ಅವರ ತವರು ಮನೆಯವರು 20 ವರ್ಷಗಳಿಂದೆ ಸಲ್ಮಾ ಅವರ ಮದುವೆ ಸಮಯದಲ್ಲಿ 2 ಜೊತೆ ಪ್ಲೇನ್ ಓಲೆ, ಒಂದು ಜೊತೆ ಯಾಂಗಿಂಗ್ಸ್ ವಿತ್ ಮಾಟಿ, 3 ಉಂಗುರಗಳು ಸೇರಿದಂತೆ ಒಟ್ಟು 45 ಗ್ರಾಂ ಚಿನ್ನ ಹಾಕಿದ್ದರು.

ಅಷ್ಟು ಚಿನ್ನದ ಒಡವೆಗಳನ್ನು ಸಲ್ಮಾ ಮನೆಯಲ್ಲಿನ ಬೀರುವಿನಲ್ಲಿ ಇಟ್ಟಿದ್ದರು. ಸಲ್ಮಾ ಅವರ ಗಂಡನಿಗೆ ಹುಷಾರಿಲ್ಲದ ಕಾರಣ ಗಂಡನನ್ನು ಆಸ್ಪತ್ರೆಗೆ ಕರೆದುಕೊಂಡು ಓಡಾಡುತ್ತಿದ್ದರು, ಆಗಾಗಿ ಸುಮಾರು 5-6 ತಿಂಗಳ ಹಿಂದೆ ಬೀರುವಿನಲ್ಲಿ ಇಟ್ಟಿದ್ದ ಚಿನ್ನದ ಒಡವೆಗಳ ಬಗ್ಗೆ ಗಮನ ಹರಿಸಿರಲಿಲ್ಲ.

ಜ.29ರಂದು ಸಲ್ಮಾ ಅವರ ತಾಯಿ ಮನೆಯಲ್ಲಿ ಇಟ್ಟಿದ್ದ ಇನ್ನೆರಡು ಉಂಗುರಗಳನ್ನು ತೆಗೆದುಕೊಂಡು ಬಂದು ಬೀರುವಿನಲ್ಲಿ ಇಡಲು ಹೋದಾಗ ಬೀರುವಿನಲ್ಲಿ ಇಟ್ಟಿದ್ದ ಚಿನ್ನದ ಒಡವೆಗಳು ಇರಲಿಲ್ಲ.

ಸಲ್ಮಾ ಅವರು ಭಯಗೊಂಡು ಕೂಡಲೇ ಈ ವಿಚಾರವನ್ನು ಅವರ ಗಂಡನಿಗೆ ತಿಳಿಸಿದ್ದಾರೆ. ಮನೆಯಲ್ಲಿ ಹುಡುಕಿದಾಗ ಚಿನ್ನದ ಒಡವೆಗಳು ಸಿಗಲಿಲ್ಲ. ಈ ಹಿನ್ನೆಲೆ ಫೆ.10ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲು ಮಾಡುತ್ತಾರೆ.

ದೂರು ದಾಖಲಿಸಿಕೊಂಡು ಈ ಕುರಿತು ತನಿಖೆ ಆರಂಭಿಸಿದ ಇನ್ಸೆಕ್ಟರ್ ಸಾಧಿಕ್ ಪಾಷಾ ನೇತೃತ್ವದ ಸಿಬ್ಬಂದಿ ಸುನೀಲ್ ಬಾಸಗಿ, ಅರ್ಜುನ್ ಲಮಾಣಿ, ಸಚಿನ್ ಉಪ್ಪಾರ್, ಪ್ರವೀಣ್, ಹರೀಶ್ ಕೆ.ಎನ್‌ ಅವರ ತಂಡ ಆರೋಪಿಯನ್ನು ಬಂಧಿಸಿ ಒಡವೆಗಳನ್ನು ವಶಕ್ಕೆ ಪಡೆಯಲು ಯಶಸ್ವಿಯಾಗಿದ್ದಾರೆ.

 

ಕಳ್ಳನ ಕೈಚಳಕ

ಮನೆಯ ಮಾಲೀಕ ಫಕೃದ್ದೀನ್ ಮಗನ ಸ್ನೇಹಿತನಾದ ಮಹೇಶ್ ಅಲಿಯಾಸ್ ಗೇರು ಎಂಬುವವನೇ ಮನೆಯಲ್ಲಿನ‌ ಚಿನ್ನದ ಒಡವೆಗಳನ್ನು‌ ಕದ್ದ ಆರೋಪಿ ಎಂದು ಮೂಲಗಳಿಂದ ತಿಳಿದುಬಂದಿದೆ.

ಈತ ಕೃತ್ಯ ನಡೆದ ಹಿಂದಿನ ದಿನ ರಾತ್ರಿ ಗೆಳೆಯನೊಂದಿಗೆ ಎಣ್ಣೆ ಪಾರ್ಟಿ ಮಾಡಿ, ಮರು ದಿನ ರಾತ್ರಿ ಮನೆಯಲ್ಲಿ ಯಾರೂ‌ ಇಲ್ಲದ ಸಮಯದಲ್ಲಿ ಗೆಳೆಯನ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದಾನೆ‌ ಎನ್ನಲಾಗಿದೆ.

ಈ ವಿಚಾರ ತನಿಖೆಯ ವೇಳೆ ತಿಳಿದು ಬಂದಿದ್ದು, ಆರೋಪಿ ಮಹೇಶ ಅಲಿಯಾಸ್ ಗೇರು ಎಂಬಾತನನ್ನು ಪೊಲೀಸರು ಬಂಧಿಸಿ, ಆತನಿಂದ ಸುಮಾರು 3 ಲಕ್ಷದ 60 ಸಾವಿರ ಮೌಲ್ಯದ 45 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ವಶಕ್ಕೆ ಪಡೆದ ಸಾಧಿಕ್ ಪಾಷಾ ಅವರು ದೂರುದಾರರಾದ ಸಲ್ಮಾ ಅವರಿಗೆ ಹಸ್ತಾಂತರ ಮಾಡಿದ್ದಾರೆ.

ದೂರುದಾರ ಸಲ್ಮಾ ಅವರು ಕಳವು ಆಗಿದ್ದ ತನ್ನ ಒಡವೆಗಳನ್ನು ಪತ್ತೆ ಮಾಡಿ ವಾಪಸ್ ನೀಡಿದ್ದಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಗೆ ಧನ್ಯವಾದ ಅರ್ಪಿಸಿ, ಪೊಲೀಸರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ..

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

14 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

14 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

1 day ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

1 day ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

1 day ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

2 days ago