ಮನೆ ಕಳ್ಳತನ ಆರೋಪಿ‌ ಸೆರೆ: ಕಳುವಾಗಿದ್ದ ಚಿನ್ನದ ಒಡವೆ ದೂರುದಾರರಿಗೆ ಹಸ್ತಾಂತರ: ಪೊಲೀಸರ ಕಾರ್ಯಕ್ಕೆ‌ ಸಾರ್ವಜನಿಕರ ಮೆಚ್ಚುಗೆ

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ‌ ಮೇಳೇಕೋಟೆ ಗ್ರಾಮದಲ್ಲಿ ಕಳೆದ ಕೆಲವು ತಿಂಗಳುಗಳ ಹಿಂದೆ ಮನೆ ಕಳ್ಳತನ ನಡೆದಿತ್ತು. ಬೀರುವಿನಲ್ಲಿದ್ದ ಸುಮಾರು 3 ಲಕ್ಷದ 60 ಸಾವಿರ ಮೌಲ್ಯದ 45 ಗ್ರಾಂ ತೂಕದ ಚಿನ್ನದ ಒಡವೆಗಳು ಕಳವು ಆಗಿರುವುದು ಜ.29ರಂದು ಮನೆ ಮಾಲೀಕರಿಗೆ ಕಂಡುಬಂದಿತ್ತು. ಈ ಕುರಿತು‌ ಫೆ.10ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮನೆ ಮಾಲೀಕರು ಪ್ರಕರಣ‌ ದಾಖಲು ಮಾಡಿದರು. ಪ್ರಕರಣ ದಾಖಲಿಸಿಕೊಂಡ‌ ಪೊಲೀಸರು ಸೂಕ್ತ ತನಿಖೆ ನಡೆಸಿ ಮನೆ ಕಳ್ಳನನ್ನು ಬಂಧಿಸಿ, ಬಂಧಿತನಿಂದ‌ ಒಡವೆಗಳನ್ನು ವಶಕ್ಕೆ ಪಡೆದು, ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರು ಇಂದು ಒಡವೆ ಮಾಲೀಕರನ್ನು ಠಾಣೆಗೆ ಕರೆಸಿ ಕಳವು ಆಗಿದ್ದ ಒಡವೆಗಳನ್ನು ಹಸ್ತಾಂತ ಮಾಡಿದರು.

ಘಟನೆ ವಿವರ:

ದೂರುದಾರರಾದ ಸಲ್ಮಾ ಅವರ ತವರು ಮನೆಯವರು 20 ವರ್ಷಗಳಿಂದೆ ಸಲ್ಮಾ ಅವರ ಮದುವೆ ಸಮಯದಲ್ಲಿ 2 ಜೊತೆ ಪ್ಲೇನ್ ಓಲೆ, ಒಂದು ಜೊತೆ ಯಾಂಗಿಂಗ್ಸ್ ವಿತ್ ಮಾಟಿ, 3 ಉಂಗುರಗಳು ಸೇರಿದಂತೆ ಒಟ್ಟು 45 ಗ್ರಾಂ ಚಿನ್ನ ಹಾಕಿದ್ದರು.

ಅಷ್ಟು ಚಿನ್ನದ ಒಡವೆಗಳನ್ನು ಸಲ್ಮಾ ಮನೆಯಲ್ಲಿನ ಬೀರುವಿನಲ್ಲಿ ಇಟ್ಟಿದ್ದರು. ಸಲ್ಮಾ ಅವರ ಗಂಡನಿಗೆ ಹುಷಾರಿಲ್ಲದ ಕಾರಣ ಗಂಡನನ್ನು ಆಸ್ಪತ್ರೆಗೆ ಕರೆದುಕೊಂಡು ಓಡಾಡುತ್ತಿದ್ದರು, ಆಗಾಗಿ ಸುಮಾರು 5-6 ತಿಂಗಳ ಹಿಂದೆ ಬೀರುವಿನಲ್ಲಿ ಇಟ್ಟಿದ್ದ ಚಿನ್ನದ ಒಡವೆಗಳ ಬಗ್ಗೆ ಗಮನ ಹರಿಸಿರಲಿಲ್ಲ.

ಜ.29ರಂದು ಸಲ್ಮಾ ಅವರ ತಾಯಿ ಮನೆಯಲ್ಲಿ ಇಟ್ಟಿದ್ದ ಇನ್ನೆರಡು ಉಂಗುರಗಳನ್ನು ತೆಗೆದುಕೊಂಡು ಬಂದು ಬೀರುವಿನಲ್ಲಿ ಇಡಲು ಹೋದಾಗ ಬೀರುವಿನಲ್ಲಿ ಇಟ್ಟಿದ್ದ ಚಿನ್ನದ ಒಡವೆಗಳು ಇರಲಿಲ್ಲ.

ಸಲ್ಮಾ ಅವರು ಭಯಗೊಂಡು ಕೂಡಲೇ ಈ ವಿಚಾರವನ್ನು ಅವರ ಗಂಡನಿಗೆ ತಿಳಿಸಿದ್ದಾರೆ. ಮನೆಯಲ್ಲಿ ಹುಡುಕಿದಾಗ ಚಿನ್ನದ ಒಡವೆಗಳು ಸಿಗಲಿಲ್ಲ. ಈ ಹಿನ್ನೆಲೆ ಫೆ.10ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲು ಮಾಡುತ್ತಾರೆ.

ದೂರು ದಾಖಲಿಸಿಕೊಂಡು ಈ ಕುರಿತು ತನಿಖೆ ಆರಂಭಿಸಿದ ಇನ್ಸೆಕ್ಟರ್ ಸಾಧಿಕ್ ಪಾಷಾ ನೇತೃತ್ವದ ಸಿಬ್ಬಂದಿ ಸುನೀಲ್ ಬಾಸಗಿ, ಅರ್ಜುನ್ ಲಮಾಣಿ, ಸಚಿನ್ ಉಪ್ಪಾರ್, ಪ್ರವೀಣ್, ಹರೀಶ್ ಕೆ.ಎನ್‌ ಅವರ ತಂಡ ಆರೋಪಿಯನ್ನು ಬಂಧಿಸಿ ಒಡವೆಗಳನ್ನು ವಶಕ್ಕೆ ಪಡೆಯಲು ಯಶಸ್ವಿಯಾಗಿದ್ದಾರೆ.

 

ಕಳ್ಳನ ಕೈಚಳಕ

ಮನೆಯ ಮಾಲೀಕ ಫಕೃದ್ದೀನ್ ಮಗನ ಸ್ನೇಹಿತನಾದ ಮಹೇಶ್ ಅಲಿಯಾಸ್ ಗೇರು ಎಂಬುವವನೇ ಮನೆಯಲ್ಲಿನ‌ ಚಿನ್ನದ ಒಡವೆಗಳನ್ನು‌ ಕದ್ದ ಆರೋಪಿ ಎಂದು ಮೂಲಗಳಿಂದ ತಿಳಿದುಬಂದಿದೆ.

ಈತ ಕೃತ್ಯ ನಡೆದ ಹಿಂದಿನ ದಿನ ರಾತ್ರಿ ಗೆಳೆಯನೊಂದಿಗೆ ಎಣ್ಣೆ ಪಾರ್ಟಿ ಮಾಡಿ, ಮರು ದಿನ ರಾತ್ರಿ ಮನೆಯಲ್ಲಿ ಯಾರೂ‌ ಇಲ್ಲದ ಸಮಯದಲ್ಲಿ ಗೆಳೆಯನ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದಾನೆ‌ ಎನ್ನಲಾಗಿದೆ.

ಈ ವಿಚಾರ ತನಿಖೆಯ ವೇಳೆ ತಿಳಿದು ಬಂದಿದ್ದು, ಆರೋಪಿ ಮಹೇಶ ಅಲಿಯಾಸ್ ಗೇರು ಎಂಬಾತನನ್ನು ಪೊಲೀಸರು ಬಂಧಿಸಿ, ಆತನಿಂದ ಸುಮಾರು 3 ಲಕ್ಷದ 60 ಸಾವಿರ ಮೌಲ್ಯದ 45 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ವಶಕ್ಕೆ ಪಡೆದ ಸಾಧಿಕ್ ಪಾಷಾ ಅವರು ದೂರುದಾರರಾದ ಸಲ್ಮಾ ಅವರಿಗೆ ಹಸ್ತಾಂತರ ಮಾಡಿದ್ದಾರೆ.

ದೂರುದಾರ ಸಲ್ಮಾ ಅವರು ಕಳವು ಆಗಿದ್ದ ತನ್ನ ಒಡವೆಗಳನ್ನು ಪತ್ತೆ ಮಾಡಿ ವಾಪಸ್ ನೀಡಿದ್ದಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಗೆ ಧನ್ಯವಾದ ಅರ್ಪಿಸಿ, ಪೊಲೀಸರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ..

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

5 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

8 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

8 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

21 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

23 hours ago