ಮನೆ ಕಳ್ಳತನ ಆರೋಪಿ‌ ಸೆರೆ: ಕಳುವಾಗಿದ್ದ ಚಿನ್ನದ ಒಡವೆ ದೂರುದಾರರಿಗೆ ಹಸ್ತಾಂತರ: ಪೊಲೀಸರ ಕಾರ್ಯಕ್ಕೆ‌ ಸಾರ್ವಜನಿಕರ ಮೆಚ್ಚುಗೆ

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ‌ ಮೇಳೇಕೋಟೆ ಗ್ರಾಮದಲ್ಲಿ ಕಳೆದ ಕೆಲವು ತಿಂಗಳುಗಳ ಹಿಂದೆ ಮನೆ ಕಳ್ಳತನ ನಡೆದಿತ್ತು. ಬೀರುವಿನಲ್ಲಿದ್ದ ಸುಮಾರು 3 ಲಕ್ಷದ 60 ಸಾವಿರ ಮೌಲ್ಯದ 45 ಗ್ರಾಂ ತೂಕದ ಚಿನ್ನದ ಒಡವೆಗಳು ಕಳವು ಆಗಿರುವುದು ಜ.29ರಂದು ಮನೆ ಮಾಲೀಕರಿಗೆ ಕಂಡುಬಂದಿತ್ತು. ಈ ಕುರಿತು‌ ಫೆ.10ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮನೆ ಮಾಲೀಕರು ಪ್ರಕರಣ‌ ದಾಖಲು ಮಾಡಿದರು. ಪ್ರಕರಣ ದಾಖಲಿಸಿಕೊಂಡ‌ ಪೊಲೀಸರು ಸೂಕ್ತ ತನಿಖೆ ನಡೆಸಿ ಮನೆ ಕಳ್ಳನನ್ನು ಬಂಧಿಸಿ, ಬಂಧಿತನಿಂದ‌ ಒಡವೆಗಳನ್ನು ವಶಕ್ಕೆ ಪಡೆದು, ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರು ಇಂದು ಒಡವೆ ಮಾಲೀಕರನ್ನು ಠಾಣೆಗೆ ಕರೆಸಿ ಕಳವು ಆಗಿದ್ದ ಒಡವೆಗಳನ್ನು ಹಸ್ತಾಂತ ಮಾಡಿದರು.

ಘಟನೆ ವಿವರ:

ದೂರುದಾರರಾದ ಸಲ್ಮಾ ಅವರ ತವರು ಮನೆಯವರು 20 ವರ್ಷಗಳಿಂದೆ ಸಲ್ಮಾ ಅವರ ಮದುವೆ ಸಮಯದಲ್ಲಿ 2 ಜೊತೆ ಪ್ಲೇನ್ ಓಲೆ, ಒಂದು ಜೊತೆ ಯಾಂಗಿಂಗ್ಸ್ ವಿತ್ ಮಾಟಿ, 3 ಉಂಗುರಗಳು ಸೇರಿದಂತೆ ಒಟ್ಟು 45 ಗ್ರಾಂ ಚಿನ್ನ ಹಾಕಿದ್ದರು.

ಅಷ್ಟು ಚಿನ್ನದ ಒಡವೆಗಳನ್ನು ಸಲ್ಮಾ ಮನೆಯಲ್ಲಿನ ಬೀರುವಿನಲ್ಲಿ ಇಟ್ಟಿದ್ದರು. ಸಲ್ಮಾ ಅವರ ಗಂಡನಿಗೆ ಹುಷಾರಿಲ್ಲದ ಕಾರಣ ಗಂಡನನ್ನು ಆಸ್ಪತ್ರೆಗೆ ಕರೆದುಕೊಂಡು ಓಡಾಡುತ್ತಿದ್ದರು, ಆಗಾಗಿ ಸುಮಾರು 5-6 ತಿಂಗಳ ಹಿಂದೆ ಬೀರುವಿನಲ್ಲಿ ಇಟ್ಟಿದ್ದ ಚಿನ್ನದ ಒಡವೆಗಳ ಬಗ್ಗೆ ಗಮನ ಹರಿಸಿರಲಿಲ್ಲ.

ಜ.29ರಂದು ಸಲ್ಮಾ ಅವರ ತಾಯಿ ಮನೆಯಲ್ಲಿ ಇಟ್ಟಿದ್ದ ಇನ್ನೆರಡು ಉಂಗುರಗಳನ್ನು ತೆಗೆದುಕೊಂಡು ಬಂದು ಬೀರುವಿನಲ್ಲಿ ಇಡಲು ಹೋದಾಗ ಬೀರುವಿನಲ್ಲಿ ಇಟ್ಟಿದ್ದ ಚಿನ್ನದ ಒಡವೆಗಳು ಇರಲಿಲ್ಲ.

ಸಲ್ಮಾ ಅವರು ಭಯಗೊಂಡು ಕೂಡಲೇ ಈ ವಿಚಾರವನ್ನು ಅವರ ಗಂಡನಿಗೆ ತಿಳಿಸಿದ್ದಾರೆ. ಮನೆಯಲ್ಲಿ ಹುಡುಕಿದಾಗ ಚಿನ್ನದ ಒಡವೆಗಳು ಸಿಗಲಿಲ್ಲ. ಈ ಹಿನ್ನೆಲೆ ಫೆ.10ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲು ಮಾಡುತ್ತಾರೆ.

ದೂರು ದಾಖಲಿಸಿಕೊಂಡು ಈ ಕುರಿತು ತನಿಖೆ ಆರಂಭಿಸಿದ ಇನ್ಸೆಕ್ಟರ್ ಸಾಧಿಕ್ ಪಾಷಾ ನೇತೃತ್ವದ ಸಿಬ್ಬಂದಿ ಸುನೀಲ್ ಬಾಸಗಿ, ಅರ್ಜುನ್ ಲಮಾಣಿ, ಸಚಿನ್ ಉಪ್ಪಾರ್, ಪ್ರವೀಣ್, ಹರೀಶ್ ಕೆ.ಎನ್‌ ಅವರ ತಂಡ ಆರೋಪಿಯನ್ನು ಬಂಧಿಸಿ ಒಡವೆಗಳನ್ನು ವಶಕ್ಕೆ ಪಡೆಯಲು ಯಶಸ್ವಿಯಾಗಿದ್ದಾರೆ.

 

ಕಳ್ಳನ ಕೈಚಳಕ

ಮನೆಯ ಮಾಲೀಕ ಫಕೃದ್ದೀನ್ ಮಗನ ಸ್ನೇಹಿತನಾದ ಮಹೇಶ್ ಅಲಿಯಾಸ್ ಗೇರು ಎಂಬುವವನೇ ಮನೆಯಲ್ಲಿನ‌ ಚಿನ್ನದ ಒಡವೆಗಳನ್ನು‌ ಕದ್ದ ಆರೋಪಿ ಎಂದು ಮೂಲಗಳಿಂದ ತಿಳಿದುಬಂದಿದೆ.

ಈತ ಕೃತ್ಯ ನಡೆದ ಹಿಂದಿನ ದಿನ ರಾತ್ರಿ ಗೆಳೆಯನೊಂದಿಗೆ ಎಣ್ಣೆ ಪಾರ್ಟಿ ಮಾಡಿ, ಮರು ದಿನ ರಾತ್ರಿ ಮನೆಯಲ್ಲಿ ಯಾರೂ‌ ಇಲ್ಲದ ಸಮಯದಲ್ಲಿ ಗೆಳೆಯನ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದಾನೆ‌ ಎನ್ನಲಾಗಿದೆ.

ಈ ವಿಚಾರ ತನಿಖೆಯ ವೇಳೆ ತಿಳಿದು ಬಂದಿದ್ದು, ಆರೋಪಿ ಮಹೇಶ ಅಲಿಯಾಸ್ ಗೇರು ಎಂಬಾತನನ್ನು ಪೊಲೀಸರು ಬಂಧಿಸಿ, ಆತನಿಂದ ಸುಮಾರು 3 ಲಕ್ಷದ 60 ಸಾವಿರ ಮೌಲ್ಯದ 45 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ವಶಕ್ಕೆ ಪಡೆದ ಸಾಧಿಕ್ ಪಾಷಾ ಅವರು ದೂರುದಾರರಾದ ಸಲ್ಮಾ ಅವರಿಗೆ ಹಸ್ತಾಂತರ ಮಾಡಿದ್ದಾರೆ.

ದೂರುದಾರ ಸಲ್ಮಾ ಅವರು ಕಳವು ಆಗಿದ್ದ ತನ್ನ ಒಡವೆಗಳನ್ನು ಪತ್ತೆ ಮಾಡಿ ವಾಪಸ್ ನೀಡಿದ್ದಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಗೆ ಧನ್ಯವಾದ ಅರ್ಪಿಸಿ, ಪೊಲೀಸರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ..

Ramesh Babu

Journalist

Recent Posts

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

13 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

19 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

22 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

23 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

1 day ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

1 day ago